ಪೂರ್ಣಯ್ಯನವರ ಛತ್ರ ಸಾರ್ವಜನಿಕರಿಗೆ ಮುಕ್ತ
ಈ ಸಭಾಂಗಣ ವಿಶಾಲವಾಗಿದ್ದು ಒಂದು ನೆಲ ಅಂತಸ್ತಿದೆ. ಅದು ಭೋಜನ ಗೃಹ. ಒಂದು ಮುಖ್ಯ ಸಭಾಂಗಣ ಮತ್ತು ಕಡಿಮೆ ಜನ ಹಿಡಿಸುವ ಕಾರ್ಯಕ್ರಮಗಳಿಗಾಗಿ ಮೇಲಂತಸ್ತಿನಲ್ಲಿ ಒಂದು ಮಿನಿ ಸಭಾಂಗಣ. ಈ ಛತ್ರ ಮಹಾತ್ಮಾ ಗಾಂಧೀ ರಸ್ತೆಯಲ್ಲಿದೆ. ಸುಮಾರು 200 ವರ್ಷಗಳಷ್ಟು ಹಳೆಯದಾದ ಛತ್ರವನ್ನು ಅಂದವಾಗಿ ನವೀಕರಿಸಲಾಗಿದೆ. ಒಂದು ಭಾಗ ಮಾತ್ರ ಸಿದ್ಧವಾಗಿದ್ದ ಈ ಸಭಾಂಗಣವನ್ನು ಕಳೆದ ಫೆಬ್ರವರಿಯಲ್ಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ಘಾಟಿಸಿದ್ದರು.
ಮುಜರಾಯಿ ಇಲಾಖೆ ಹಾಗೂ ಅರಮನೆಯ ಮುಜರಾಯಿ ಮಂಡಳಿಯ ಸಹಭಾಗಿತ್ವದಲ್ಲಿ ಕಟ್ಟಿರುವ ನೂತನ ಸಭಾಂಗಣವನ್ನು ಸಾರ್ವಜನಿಕರು ಬಳಸಬಹುದು. ಆಸಕ್ತರು 08121-2434739 ಸಂಪರ್ಕಿಸಬಹುದು ಎಂದು ಚಾಮುಂಡಿ ದೇವಸ್ಥಾನ ಸಮಿತಿಯ ಆಡಳಿತಾಧಿಕಾರಿ ಶಿವಲಿಂಗೇ ಗೌಡ ತಿಳಿಸಿದ್ದಾರೆ. ಮೈಸೂರು ರಾಜ್ಯದ ನಾನಾ ಜಿಲ್ಲೆಗಳಲ್ಲಿಯೂ ಪೂರ್ಣಯ್ಯನವರು ಛತ್ರ ಕಟ್ಟಿಸಿದ್ದರು. ಪ್ರವಾಸಿಗರು ತಂಗಲು ಅವರು ಕಲ್ಪಿಸಿದ್ದ ಉಚಿತ ವಸತಿ ವ್ಯವಸ್ಥೆ ಆದಾಗಿತ್ತು. ಮೈಸೂರಿನ ಛತ್ರಕ್ಕೆ ಸ್ಮಾರಕದ ಯೋಗ ಲಭಿಸಿತು. ಉಳಿದ ಜಿಲ್ಲೆಗಳಲ್ಲಿದ್ದ ಈ ಛತ್ರಗಳು ಯಾವ ಸ್ಥಿತಿಯಲ್ಲಿವೆ? ತಪಾಸಣೆ ಆಗಬೇಕು.
ಪೂರ್ಣಯ್ಯನವರ ಬಗ್ಗೆ : ಪೂರ್ಣಯ್ಯ (1746-1812) ಮೈಸೂರಿನ ದಿವಾನರಾಗಿದ್ದರು. ದಿವಾನ್ ಎಂದರೆ ಇವತ್ತಿನ ಸಂದರ್ಭಕ್ಕೆ ಚೀಫ್ ಸೆಕ್ರೆಟರಿ ಎಂದು ಹೇಳಬಹುದು. ಟಿಪ್ಪೂ ಸುಲ್ತಾನ್, ಹೈದರ್ ಅಲಿ ಆಸ್ಥಾನದಲ್ಲಿ ಅವರು ಹಿರಿಯ ಅಧಿಕಾರಿಯಾಗಿದ್ದರು. ಆನಂತರ ಬ್ರಿಟಿಷರ ಆಳ್ವಿಕೆಯಲ್ಲಿಯೂ ಅವರು ದಿವಾನರಾಗಿದ್ದರು. ಬಾಲಕ ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಅವರೇ ಮೈಸೂರು ಪ್ರಾಂತ್ಯದ ಆಗುಹೋಗುಗಳಿಗೆ ಬಾಧ್ಯಸ್ಥರಾಗಿದ್ದರು.
ಮಹಾ ಮೇಧಾವಿ, ದಕ್ಷ ಆಡಳಿತಗಾರ ಎಂದು ಪೂರ್ಣಯ್ಯ ಜನಪ್ರಿಯರಾಗಿದ್ದರು. ಹಲವು ಭಾಷಾ ಕೋವಿದ, ಕುಶಲ ಕೆಲಸಗಾರರಷ್ಟೇ ಅಲ್ಲದೆ ಕಷ್ಟಪಟ್ಟು ದುಡಿಯುವ ಜನಸೇವಕ ಎಂದೂ ಖ್ಯಾತರಾಗಿದ್ದರು. ಟಿಪ್ಪು ಸಾವಿನ ನಂತರ ಮೈಸೂರು ಪ್ರಾಂತ್ಯ ಒಡೆಯರ್ ಅವರ ಆಳ್ವಿಕೆಗೆ ಬಂತು. ಆಗಿನ್ನೂ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಚಿಕ್ಕ ಹುಡುಗ. ಅವರಿಗೆ ವಿದ್ಯಾಭ್ಯಾಸ, ತರಬೇತಿ, ರಾಜ್ಯಭಾರ, ಆಡಳಿತದ ಸೂಕ್ಷ್ಮಗಳನ್ನು ತಿಳಿಯ ಹೇಳಿದವರು ಪೂರ್ಣಯ್ಯನವರು ಎಂದು ಇತಿಹಾಸ ಹೇಳುತ್ತದೆ. ಪೂರ್ಣಯ್ಯನವರ ತೈಲಚಿತ್ರ ಕೃಪೆ: ಕಾಮತ್ ಡಾಟ್ ಕಾಂ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್













Click it and Unblock the Notifications