ಪೂರ್ಣಯ್ಯನವರ ಛತ್ರ ಸಾರ್ವಜನಿಕರಿಗೆ ಮುಕ್ತ
ಈ ಸಭಾಂಗಣ ವಿಶಾಲವಾಗಿದ್ದು ಒಂದು ನೆಲ ಅಂತಸ್ತಿದೆ. ಅದು ಭೋಜನ ಗೃಹ. ಒಂದು ಮುಖ್ಯ ಸಭಾಂಗಣ ಮತ್ತು ಕಡಿಮೆ ಜನ ಹಿಡಿಸುವ ಕಾರ್ಯಕ್ರಮಗಳಿಗಾಗಿ ಮೇಲಂತಸ್ತಿನಲ್ಲಿ ಒಂದು ಮಿನಿ ಸಭಾಂಗಣ. ಈ ಛತ್ರ ಮಹಾತ್ಮಾ ಗಾಂಧೀ ರಸ್ತೆಯಲ್ಲಿದೆ. ಸುಮಾರು 200 ವರ್ಷಗಳಷ್ಟು ಹಳೆಯದಾದ ಛತ್ರವನ್ನು ಅಂದವಾಗಿ ನವೀಕರಿಸಲಾಗಿದೆ. ಒಂದು ಭಾಗ ಮಾತ್ರ ಸಿದ್ಧವಾಗಿದ್ದ ಈ ಸಭಾಂಗಣವನ್ನು ಕಳೆದ ಫೆಬ್ರವರಿಯಲ್ಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ಘಾಟಿಸಿದ್ದರು.
ಮುಜರಾಯಿ ಇಲಾಖೆ ಹಾಗೂ ಅರಮನೆಯ ಮುಜರಾಯಿ ಮಂಡಳಿಯ ಸಹಭಾಗಿತ್ವದಲ್ಲಿ ಕಟ್ಟಿರುವ ನೂತನ ಸಭಾಂಗಣವನ್ನು ಸಾರ್ವಜನಿಕರು ಬಳಸಬಹುದು. ಆಸಕ್ತರು 08121-2434739 ಸಂಪರ್ಕಿಸಬಹುದು ಎಂದು ಚಾಮುಂಡಿ ದೇವಸ್ಥಾನ ಸಮಿತಿಯ ಆಡಳಿತಾಧಿಕಾರಿ ಶಿವಲಿಂಗೇ ಗೌಡ ತಿಳಿಸಿದ್ದಾರೆ. ಮೈಸೂರು ರಾಜ್ಯದ ನಾನಾ ಜಿಲ್ಲೆಗಳಲ್ಲಿಯೂ ಪೂರ್ಣಯ್ಯನವರು ಛತ್ರ ಕಟ್ಟಿಸಿದ್ದರು. ಪ್ರವಾಸಿಗರು ತಂಗಲು ಅವರು ಕಲ್ಪಿಸಿದ್ದ ಉಚಿತ ವಸತಿ ವ್ಯವಸ್ಥೆ ಆದಾಗಿತ್ತು. ಮೈಸೂರಿನ ಛತ್ರಕ್ಕೆ ಸ್ಮಾರಕದ ಯೋಗ ಲಭಿಸಿತು. ಉಳಿದ ಜಿಲ್ಲೆಗಳಲ್ಲಿದ್ದ ಈ ಛತ್ರಗಳು ಯಾವ ಸ್ಥಿತಿಯಲ್ಲಿವೆ? ತಪಾಸಣೆ ಆಗಬೇಕು.
ಪೂರ್ಣಯ್ಯನವರ ಬಗ್ಗೆ : ಪೂರ್ಣಯ್ಯ (1746-1812) ಮೈಸೂರಿನ ದಿವಾನರಾಗಿದ್ದರು. ದಿವಾನ್ ಎಂದರೆ ಇವತ್ತಿನ ಸಂದರ್ಭಕ್ಕೆ ಚೀಫ್ ಸೆಕ್ರೆಟರಿ ಎಂದು ಹೇಳಬಹುದು. ಟಿಪ್ಪೂ ಸುಲ್ತಾನ್, ಹೈದರ್ ಅಲಿ ಆಸ್ಥಾನದಲ್ಲಿ ಅವರು ಹಿರಿಯ ಅಧಿಕಾರಿಯಾಗಿದ್ದರು. ಆನಂತರ ಬ್ರಿಟಿಷರ ಆಳ್ವಿಕೆಯಲ್ಲಿಯೂ ಅವರು ದಿವಾನರಾಗಿದ್ದರು. ಬಾಲಕ ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಅವರೇ ಮೈಸೂರು ಪ್ರಾಂತ್ಯದ ಆಗುಹೋಗುಗಳಿಗೆ ಬಾಧ್ಯಸ್ಥರಾಗಿದ್ದರು.
ಮಹಾ ಮೇಧಾವಿ, ದಕ್ಷ ಆಡಳಿತಗಾರ ಎಂದು ಪೂರ್ಣಯ್ಯ ಜನಪ್ರಿಯರಾಗಿದ್ದರು. ಹಲವು ಭಾಷಾ ಕೋವಿದ, ಕುಶಲ ಕೆಲಸಗಾರರಷ್ಟೇ ಅಲ್ಲದೆ ಕಷ್ಟಪಟ್ಟು ದುಡಿಯುವ ಜನಸೇವಕ ಎಂದೂ ಖ್ಯಾತರಾಗಿದ್ದರು. ಟಿಪ್ಪು ಸಾವಿನ ನಂತರ ಮೈಸೂರು ಪ್ರಾಂತ್ಯ ಒಡೆಯರ್ ಅವರ ಆಳ್ವಿಕೆಗೆ ಬಂತು. ಆಗಿನ್ನೂ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಚಿಕ್ಕ ಹುಡುಗ. ಅವರಿಗೆ ವಿದ್ಯಾಭ್ಯಾಸ, ತರಬೇತಿ, ರಾಜ್ಯಭಾರ, ಆಡಳಿತದ ಸೂಕ್ಷ್ಮಗಳನ್ನು ತಿಳಿಯ ಹೇಳಿದವರು ಪೂರ್ಣಯ್ಯನವರು ಎಂದು ಇತಿಹಾಸ ಹೇಳುತ್ತದೆ. ಪೂರ್ಣಯ್ಯನವರ ತೈಲಚಿತ್ರ ಕೃಪೆ: ಕಾಮತ್ ಡಾಟ್ ಕಾಂ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್













Click it and Unblock the Notifications