ಪ್ರತಿಭಾವಂತರಿಗೆ ಬೇಡವಾದ ಗುರುಸ್ಥಾನ

ಸಿಇಟಿ, ಕಾಮೆಡ್ ಕೆ ಗೇಟುಗಳನ್ನು ದಾಟಿ ಇಂಜಿನಿಯರಿಂಗ್ ಅಥವಾ ಮೆಡಿಕಲ್ ಅಥವಾ ಡೆಂಟಲ್ ಕಾಲೇಜಿನಲ್ಲಿ ಸೀಟು ಗಿಟ್ಟಿಸುವುದು ಎರಡನೇ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಮೊದಲ ಆದ್ಯತೆ. ಮೆರಿಟ್ನಲ್ಲಿ ಪಾಸಾದವರಿಗೆ ಸೀಟು ಮತ್ತು ಅವರು ಬಯಸಿದ ಕಾಲೇಜು ಆಯ್ಕೆ ಸುಸೂತ್ರ. ಮೆರಿಟ್ ಇಲ್ಲದಿದ್ದರೂ ತಾಂತ್ರಿಕ ಕೋರ್ಸುಗಳನ್ನು ತೆಗೆದುಕೊಳ್ಳಲೇಬೇಕೆಂದು ಪಣ ಮತ್ತು ಹಠ ತೊಟ್ಟ ವಿದ್ಯಾರ್ಥಿಗಳು ಹಾಗೂ ಅವರ ತಂದೆ ತಾಯಿಯರಿಗೆ ಮಾತ್ರ ಡೊನೇಷನ್, ಶಿಕ್ಷಣ ಶುಲ್ಕ, ಹಾಸ್ಟೆಲ್ ಶುಲ್ಕ ಮತ್ತು ಐದು ವರ್ಷಗಳ ಅವಧಿಗೆ ಮಕ್ಕಳ ಖರ್ಚುವೆಚ್ಚಕ್ಕೆ ಹಣ ಹೊಂದಿಸುವ ಯೋಚನೆ.
ಫೇಲು ಆದ ಮಕ್ಕಳಿಗೆ ಆದ್ಯತೆಗಳು ಹೆಚ್ಚಿಲ್ಲ. ಇದೇ ಜೂನ್ 28ರಿಂದ ಆರಂಭವಾಗುವ ಸಪ್ಲಿಮೆಂಟರಿ ಪರೀಕ್ಷೆಗೆ ಮೈ ಬಗ್ಗಿಸಿ ಓದುವುದು ಮೊದಲ ಆಯ್ಕೆ. ತಮ್ಮ ಸಾಮರ್ಥ್ಯಕ್ಕೆ ತಕ್ಕ ಅಂಕಗಳು ಬಂದಿಲ್ಲ ಎಂದು ಭಾವಿಸುವವರು ಮರು ಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕುವುದು ಎರಡನೇ ಆಯ್ಕೆ.
ಅತಿಹೆಚ್ಚು ಅಂಕಗಳಿಸಿ ತಮ್ಮ ಕಾಲೇಜು ಮತ್ತು ಊರಿಗೆ ಕೀರ್ತಿ ಹಾಗೂ ತಂದೆತಾಯಿರ ಶ್ರಮಕ್ಕೆ ಸಾರ್ಥಕತೆ ತಂದುಕೊಟ್ಟ ಪ್ರತಿಭಾವಂತ ವಿದ್ಯಾರ್ಥಿಗಳ ಸಂಭ್ರಮಾಚರಣೆ ಈಗಾಗಲೇ ಮುಗಿದಿದೆ. ಇದೊಂದು ತುಂಬಾ ಚಿಕ್ಕ ಗುಂಪು. ಈ ಗುಂಪಿನ ಸದಸ್ಯರಿಗೆ ಈಗಿಂದಲೇ ಮುಂದಿನ ವ್ಯಾಸಂಗದತ್ತ ಗಮನ. ಅದು ಅವರ ಜಾಯಮಾನವಾಗಿರುತ್ತದೆ.
ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸಂದರ್ಶನಗಳು ನಾಡಿನ ಅನೇಕ ಪತ್ರಿಕೆಗಳಲ್ಲಿ ಇಂದು ಪ್ರಕಟಗೊಂಡಿವೆ. 'ನೀವು ಮುಂದೆ ಏನು ಆಗಬೇಕು ಎಂದುಕೊಂಡಿದ್ದೀರಿ' ಎಂಬ ವರದಿಗಾರರ ಪ್ರಶ್ನೆಗಳಿಗೆ ಅವರೆಲ್ಲರ ಉತ್ತರಗಳು ಬಹುತೇಕ ಒಂದೇ ದಿಕ್ಕಿನಲ್ಲಿವೆ. nothing less than a doctor ಎಂಬ ಉತ್ತರ ಒಬ್ಬರಿಂದ, ಇಂಜಿನಿಯರಿಂಗ್ ಆಗುತ್ತೀನಿ, ಅಕೌಂಟೆನ್ಸಿ ವ್ಯಾಸಂಗ ಮಾಡಿ ಚಾರ್ಟೆಡ್ ಅಕೌಂಟೆಂಟ್ ಆಗುತ್ತೀನಿ, ಅತ್ಯುತ್ತಮ ಶಿಕ್ಷಣ ನೀಡುವ ಲಾ ಕಾಲೇಜಿಗೆ ಸೇರಿ ಮುಂದೆ ಕಾರ್ಪೋರೇಟ್ ಅಡ್ವೋಕೇಟ್ ಆಗುತ್ತೀನಿ ಎಂಬಿತ್ಯಾದಿ ಉತ್ತರಗಳು ಪ್ರತಿಭಾವಂತರಿಂದ ಬಂದಿವೆ. ಈ ಪ್ರತಿಕ್ರಿಯೆಗಳಲ್ಲಿ ಹೊಸದು ಎನ್ನುವಂಥದ್ದೇನೂ ಕಾಣಿಸುವುದಿಲ್ಲ. ಸಾಧನೆಗೈದ ವಿದ್ಯಾರ್ಥಿ ವೃಂದದಿಂದ ಬರುವ ಉತ್ತರಗಳು ಪ್ರತಿವರ್ಷ ಹೀಗೇ ಇರುತ್ತವೆ.
ನಮ್ಮ ಸಮಾಜ ಗಮನಿಸಬೇಕಾದ ಸಂಗತಿಯೆಂದರೆ ಇಲ್ಲಿ ಯಾವೊಬ್ಬ ವಿದ್ಯಾರ್ಥಿಯೂ ತಾನು ಹೆಚ್ಚು ಓದಿ, ಕಲಿತು, ಮುಂದೊಂದುದಿನ ಉಪಾಧ್ಯಾಯ ವೃತ್ತಿಯನ್ನು ಆರಿಸಿಕೊಳ್ಳುತ್ತೇನೆ ಎಂದು ಹೇಳುವುದಿಲ್ಲ. 'ನಿಮ್ಮ ಸಾಧನೆಗೆ ಪ್ರೇರಣೆ ಯಾರು' ಎಂಬ ಪ್ರಶ್ನೆಗೆ ತಾಯಿ ತಂದೆ ಅಥವಾ ಪಾಠಮಾಡಿದ ಗುರುವೃಂದ ಎಂದು ಹೇಳುತ್ತಾರೆಯೇ ವಿನಾ ತಮಗೆ ಆದರ್ಶಪ್ರಾಯವಾದ ಗುರುಗಳು ತುಳಿದ ಹಾದಿಯಲ್ಲಿ ನಡೆಯಲು ಅವರಾರೂ ಸಿದ್ಧರಿಲ್ಲ.
ಹರಿದ ಪಂಚೆ, ತೇಪೆ ಹಾಕಿದ ಜುಬ್ಬ, ತೂತು ಬಿದ್ದಿರುವ ಹಳೆಕೋಟು ಧರಿಸಿದ ಮೇಷ್ಟುಗಳ ಕಾಲ ಈಗೀಗ ಮರೆಯಾಗುತ್ತಿದೆ. ಶಾಲೆ ಕಾಲೇಜುಗಳ ಮೇಷ್ಟು ಮತ್ತು ಉಪನ್ಯಾಸಕರುಗಳಿಗೆ ಈಗ ಕೈತುಂಬ ಸಂಬಳ ಬರುತ್ತದೆ. ಕಳೆದ ವರ್ಷ ಯುಜಿಸಿ ಮಾಡಿರುವ ವೇತನ ವಿಮರ್ಶೆಯಿಂದ ಕಾಲೇಜು ಉಪನ್ಯಾಸಕರ ಸಂಬಳ 13,000 ರೂ.ಗಳಷ್ಟು ಹೆಚ್ಚಾಗಿದೆ. ಜಿಲ್ಲಾಧಿಕಾರಿಗಿಂತ ಹೆಚ್ಚಿಗೆ ಸಂಬಳ ಅವರ ಕೈಸೇರುತ್ತದೆ. ಮೇಷ್ಟ್ರ ನೌಕರಿಗೆ ಸಂಬಳ ಕಡಿಮೆ ಎಂಬ ಕೂಗು ಈಗಿಲ್ಲವಾದರೂ ನಮ್ಮ ಪ್ರತಿಭಾವಂತಗಳಿಗೆ ಈ ನೌಕರಿ, ಈ ವೃತ್ತಿ, ಈ ಬಗೆಯ ಬದುಕು ಇಷ್ಟವಿಲ್ಲ.
ಪಾಠ ಮಾಡುತ್ತೇನೆ, ಒಳ್ಳೆ ವಿದ್ಯಾರ್ಥಿಗಳನ್ನು ತಯ್ಯಾರು ಮಾಡುತ್ತೇನೆ ಎಂಬ ಕನಸನ್ನು ಕಟ್ಟಿಕೊಂಡ ಒಬ್ಬೇಒಬ್ಬ ಪ್ರತಿಭಾವಂತ ವಿದ್ಯಾರ್ಥಿ ನನ್ನ ಕಣ್ಣಿಗೆ ಬಿದ್ದಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications