ಕೋಪದ ಆವೇಶದಲ್ಲಿ ಕುಯ್ದುಕೊಂಡ ಮೂಗು
ಕನ್ನಡ ಸುಗಮ ಸಂಗೀತ ಕ್ಷೇತ್ರದ ದಿಗ್ಗಜಗಳ ಗಿರಿಶ್ರೇಣಿಯಲ್ಲಿ ಮೂರನೇ ಮಟ್ಟದಲ್ಲಿ ನಿಲ್ಲುವ ಗಾಯಕ ಸಿ ಅಶ್ವಥ್ ಅವರ ಹೆಸರನ್ನು ನೀವು ಕೇಳಿರಬಹುದು. ಅವರ ಹಾಡುಗಳನ್ನು ಖುದ್ದಾಗಿ ಅಥವಾ ಕ್ಯಾಸೆಟ್, ಸಿಡಿ, ಡಿವಿಡಿಗಳಲ್ಲಿ ಆಲಿಸಿರಬಹುದು. ಕಳೆದ ಡಿಸೆಂಬರ್ ನಲ್ಲಿ ಅವರು ತೀರಿಹೋದರು. ಅವರು ಎಷ್ಟು ಪ್ರಖ್ಯಾತರಾಗಿದ್ದರೆಂದರೆ ಅವರ ನಂತರ ಸುಗಮ ಸಂಗೀತಕ್ಕೆ ಯಾರು ಎಂಬ ಪ್ರಶ್ನೆಗೆ ಎಂಟು ತಿಂಗಳಾದರೂ ಉತ್ತರ ಸಿಕ್ಕಿಲ್ಲ. ಕನ್ನಡವೇ ಸತ್ಯಕ್ಕಿಂತ ಸತ್ಯವಾದ ವಿಚಾರವಿದು.
ಸುಗಮ ಸಂಗೀತ ಪ್ರಪಂಚದಲ್ಲಿ ತಲ್ಲೀನರಾಗಿರುವವರಿಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ, ಸುಗಮ ಸಂಗೀತ ಪರಿಷತ್ ಅಧ್ಯಕ್ಷರಿಗೂ ಸಿಕ್ಕಿಲ್ಲ. ಕೆಲವರು ನಾನೇ ಅಶ್ವಥ್ ಉತ್ತರಾಧಿಕಾರಿ ಎಂದು ಹೇಳಿಕೊಂಡು ಅಡ್ಡಾಡುತ್ತಿರುವುದು ನಿಜ. ಆದರೆ, ಅಂಥವರ ತರವಲ್ಲ ತೆಗಿನಿನ್ನ ತಂಬೂರಿ ಸ್ವರಗಳನ್ನು ಕನ್ನಡನಾಡಿನಲ್ಲಾಗಲೀ ವಿದೇಶದಲ್ಲಾಗಲೀ ಆಲಿಸುವವರೇ ಗತಿಯಿಲ್ಲ.
ಅಶ್ವಥ್ ಅವರು ಕೆಲವು ಬಾರಿ ಮಗುವಿನ ಥರಹ ವರ್ತಿಸುತ್ತಿದ್ದರು. ಅರೆಕ್ಷಣದಲ್ಲಿ ವಿಶ್ವಾಮಿತ್ರನ ಅಪರಾವತಾರ ತಾಳುತ್ತಿದ್ದರು. ಕ್ಷಣ ಚಿತ್ತ ಕ್ಷಣ ಪಿತ್ತ. ಮಹಾನ್ ಕಲಾವಿದ ಮತ್ತು ಮಹಾ ಕೋಪಿಷ್ಠ. ಅವರ ಬಳಿ ಒಂದು ಮಾತಾಡಿದರೆ ಕಮ್ಮಿ, ಒಂದು ಮಾತಾಡಿದರೆ ಹೆಚ್ಚು. ಮುಖವನ್ನು ಅಂಗೈಯಲ್ಲಿ ಒರೆಸುಕೊಳ್ಳುತ್ತಾ ಅವರು ಒಂದು ಸಲ ಝಾಡಿಸಿದರೆ ಅಲ್ಲಿದ್ದ ಎಲ್ಲರೂ ಜಾಗ ಖಾಲಿ ಮಾಡುವುದೊಂದೇ ಬಾಕಿ. ಕಲಾವಿದರೂ ಮನುಷ್ಯರೇ ಆಗಿರುವುದರಿಂದ ಅರಿಷಡ್ವರ್ಗಗಳ ಹಾವಳಿಯಿಂದ ಪಾರಾಗುವುದು ನೈಂಟಿನೈನ್ ಪರ್ಸೆಂಟ್ ಜನಕ್ಕೆ ಕಷ್ಟವೇ ಆಗಿರುತ್ತದೆ ಎನ್ನುವುದಕ್ಕೆ ಅವರೇ ಸಾಕ್ಷೀಭೂತರಾಗಿದ್ದರು.
ಮಾಯಾಮೃಗ, ಮುಕ್ತ ಮುಕ್ತ ಮುಕ್ತ ಮುಂತಾದ ಟಿವಿ ಧಾರಾವಾಹಿಗಳನ್ನು ತಾವು ಈ ಟಿವಿ ಛಾನಲ್ಲಿನಲ್ಲಿ ನೋಡುತ್ತಿರಬಹುದು. ನೋಡಿಲ್ಲದಿದ್ದರೆ ಅದರ ಬಗ್ಗೆ ಓದಿಯೋ, ಕೇಳಿಯೋ ನಿಮಗೆ ಗೊತ್ತಿರುತ್ತದೆ. ಆ ಧಾರಾವಾಹಿಗಳ ನಿರ್ದೇಶಕರು ಟಿ ಎನ್ ಸೀತಾರಾಂ. ಕಾನೂನು ಸುತ್ತ ಸುತ್ತುವ ಮುಕ್ತ ಮುಕ್ತ ಧಾರಾವಾಹಿಯ ಕಂತುಗಳಿಗೆ ಗ್ಲಾಮರ್ ಟಚ್ ಕೊಡುವ ಉದ್ದೇಶದಿಂದ ಧಾರಾವಾಹಿಯ ನ್ಯಾಯಾಧೀಶರ ಪಾತ್ರಕ್ಕೆ ಪ್ರತೀಬಾರಿ ಹೊಸ ಹೊಸ ಪ್ರಸಿದ್ಧ ವ್ಯಕ್ತಿಗಳನ್ನು ಆರಿಸಿ ಆರಿಸಿ ತರಲಾಗುತ್ತದೆ.
ಈ ಮಾಲಿಕೆಯಲ್ಲಿ ನ್ಯಾಯಮೂರ್ತಿಗಳಾಗಿ ಸುಧಾಮೂರ್ತಿ ಇದ್ದರು, ರವಿ ಬೆಳಗೆರೆ ಇದ್ದರು, ಸ್ವತಃ ನ್ಯಾಯಮೂರ್ತಿಗಳೇ ಆಗಿದ್ದ ಎ ಜೆ ಸದಾಶಿವ ಅವರಿದ್ದರು, ವೈಕೆ ಮುದ್ದುಕೃಷ್ಣ ಬಂದಿದ್ದರು, ಬರಗೂರು ರಾಮಚಂದ್ರಪ್ಪ ಕಾಣಿಸಿಕೊಂಡಿದ್ದರು, ಮೊನ್ನೆ ಮೊನ್ನೆಯ ಕಂತಿನಲ್ಲಿ ಋತುವಿಲಾಸದ ಕವಿ ಎಚ್ ಎಸ್ವಿ ದಯಮಾಡಿಸಿದ್ದರು. ಇವರೆಲ್ಲರ ನಡುವೆ ನಮ್ಮ ಪ್ರೀತಿಯ ಅಶ್ವಥ್ ಕೂಡ ಒಮ್ಮೆ ಆ ಪಾತ್ರಕ್ಕೆ ಜೀವ ತುಂಬಿದ್ದರು.
ಒಂದು ದಿನ ಏನಾಯಿತೆಂದರೆ ಅಶ್ವಥ್ ಪಾತ್ರ ಮಾಡಿದ ಕಂತು ಈಟಿವಿಯಲ್ಲಿ ಪ್ರಸಾರವಾದದ್ದನ್ನು ನೋಡಿದ ದಂಪತಿಗಳ ಕಣ್ಣಿಗೆ ಅಶ್ವಥ್ ಬಿದ್ದರು. ಮಹಾನ್ ಗಾಯಕನ ಮುದ್ದಾಂ ದರ್ಶನವಾದ ಪುಳಕದಲ್ಲಿ ಆ ದಂಪತಿಗಳು ಅಶ್ವಥ್ ಅವರನ್ನು ಅಭಿನಂದಿಸಲು ಬಳಿಸಾರಿದರು. 'ಸಾರ್ ನಿನ್ನೆ ನಿಮನ್ನು ಈಟಿವಿನಲ್ಲಿ ನೋಡಿದೆ ಸಖತ್ ಆಗಿ ಆಕ್ಟ್ ಮಾಡಿದಿರಾ ಸಾರ್ ' ಎಂದು ಕೈಕಟ್ಟಿ ನಿಂತುಕೊಂಡು ಅಭಿನಂದನೆ ಸಲ್ಲಿಸಿದರು.
ಕೋಪ ಉಕ್ಕಿ ಹರಿಯುವುದಕ್ಕೆ ಅಶ್ವಥ್ ಅವರಿಗೆ ಅಷ್ಟೇ ಸಾಕಿತ್ತು. 'ಏನ್ರೀ ಇದು, ಮೂವತ್ತು ವರ್ಷಗಳಿಂದ ಗಂಟಲು ಕಿತ್ಕೊಂಡು ಹಾಡುತ್ತಾ ಇದ್ದೀನಿ. ಒಂದ್ಸಲಾನಾದ್ರೂ ಬಂದು ಅಭಿನಂದಿಸಿದ್ದೀರೇನ್ರಿ? ಐದು ನಿಮಿಷ ಟಿವಿನಲ್ಲಿ ಕಾಣಿಸಿದರೆ ಕಂಗ್ರಾಟ್ಸ್ ಹೇಳ್ತೀರಲ್ರಿ ಎಂದು ಏರಿದ ದನಿಯಲ್ಲಿ ದಬಾಯಿಸಿಬಿಟ್ಟರು'
ಏನೋ ಮಾಡಲು ಹೋಗಿ ಓನೋ ಆದದ್ದಕ್ಕಾಗಿ ಬೆಕ್ಕಸ ಬೆರಗಾದ ಆ ದಂಪತಿಗಳು ಅಲ್ಲಿಂದ ಕೂಡಲೇ ಕಾಲಿಗೆ ಬುದ್ಧಿ ಹೇಳಿದವರು ಮತ್ತೆ ಆ ಕಡೆ ತಿರುಗಿ ನೋಡಲಿಲ್ಲ. ಇಂಪಾದ ಹಾಡಿನ ಗುಂಗು ಮತ್ತು ಟಿವಿಯೊಳಗೆ ಮಿಂಚಿ ಮರೆಯಾಗುವ ಕ್ಷಣಭಂಗುರದ ನಡುವಿನ ವ್ಯತ್ಯಾಸ ದಂಪತಿಗಳಿಗೆ ಬಹುಶಃ ಈ ಹೊತ್ತಿಗೆ ವೇದ್ಯವಾಗಿರಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ













Click it and Unblock the Notifications