ಕೋಪದ ಆವೇಶದಲ್ಲಿ ಕುಯ್ದುಕೊಂಡ ಮೂಗು
ಕನ್ನಡ ಸುಗಮ ಸಂಗೀತ ಕ್ಷೇತ್ರದ ದಿಗ್ಗಜಗಳ ಗಿರಿಶ್ರೇಣಿಯಲ್ಲಿ ಮೂರನೇ ಮಟ್ಟದಲ್ಲಿ ನಿಲ್ಲುವ ಗಾಯಕ ಸಿ ಅಶ್ವಥ್ ಅವರ ಹೆಸರನ್ನು ನೀವು ಕೇಳಿರಬಹುದು. ಅವರ ಹಾಡುಗಳನ್ನು ಖುದ್ದಾಗಿ ಅಥವಾ ಕ್ಯಾಸೆಟ್, ಸಿಡಿ, ಡಿವಿಡಿಗಳಲ್ಲಿ ಆಲಿಸಿರಬಹುದು. ಕಳೆದ ಡಿಸೆಂಬರ್ ನಲ್ಲಿ ಅವರು ತೀರಿಹೋದರು. ಅವರು ಎಷ್ಟು ಪ್ರಖ್ಯಾತರಾಗಿದ್ದರೆಂದರೆ ಅವರ ನಂತರ ಸುಗಮ ಸಂಗೀತಕ್ಕೆ ಯಾರು ಎಂಬ ಪ್ರಶ್ನೆಗೆ ಎಂಟು ತಿಂಗಳಾದರೂ ಉತ್ತರ ಸಿಕ್ಕಿಲ್ಲ. ಕನ್ನಡವೇ ಸತ್ಯಕ್ಕಿಂತ ಸತ್ಯವಾದ ವಿಚಾರವಿದು.
ಸುಗಮ ಸಂಗೀತ ಪ್ರಪಂಚದಲ್ಲಿ ತಲ್ಲೀನರಾಗಿರುವವರಿಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ, ಸುಗಮ ಸಂಗೀತ ಪರಿಷತ್ ಅಧ್ಯಕ್ಷರಿಗೂ ಸಿಕ್ಕಿಲ್ಲ. ಕೆಲವರು ನಾನೇ ಅಶ್ವಥ್ ಉತ್ತರಾಧಿಕಾರಿ ಎಂದು ಹೇಳಿಕೊಂಡು ಅಡ್ಡಾಡುತ್ತಿರುವುದು ನಿಜ. ಆದರೆ, ಅಂಥವರ ತರವಲ್ಲ ತೆಗಿನಿನ್ನ ತಂಬೂರಿ ಸ್ವರಗಳನ್ನು ಕನ್ನಡನಾಡಿನಲ್ಲಾಗಲೀ ವಿದೇಶದಲ್ಲಾಗಲೀ ಆಲಿಸುವವರೇ ಗತಿಯಿಲ್ಲ.
ಅಶ್ವಥ್ ಅವರು ಕೆಲವು ಬಾರಿ ಮಗುವಿನ ಥರಹ ವರ್ತಿಸುತ್ತಿದ್ದರು. ಅರೆಕ್ಷಣದಲ್ಲಿ ವಿಶ್ವಾಮಿತ್ರನ ಅಪರಾವತಾರ ತಾಳುತ್ತಿದ್ದರು. ಕ್ಷಣ ಚಿತ್ತ ಕ್ಷಣ ಪಿತ್ತ. ಮಹಾನ್ ಕಲಾವಿದ ಮತ್ತು ಮಹಾ ಕೋಪಿಷ್ಠ. ಅವರ ಬಳಿ ಒಂದು ಮಾತಾಡಿದರೆ ಕಮ್ಮಿ, ಒಂದು ಮಾತಾಡಿದರೆ ಹೆಚ್ಚು. ಮುಖವನ್ನು ಅಂಗೈಯಲ್ಲಿ ಒರೆಸುಕೊಳ್ಳುತ್ತಾ ಅವರು ಒಂದು ಸಲ ಝಾಡಿಸಿದರೆ ಅಲ್ಲಿದ್ದ ಎಲ್ಲರೂ ಜಾಗ ಖಾಲಿ ಮಾಡುವುದೊಂದೇ ಬಾಕಿ. ಕಲಾವಿದರೂ ಮನುಷ್ಯರೇ ಆಗಿರುವುದರಿಂದ ಅರಿಷಡ್ವರ್ಗಗಳ ಹಾವಳಿಯಿಂದ ಪಾರಾಗುವುದು ನೈಂಟಿನೈನ್ ಪರ್ಸೆಂಟ್ ಜನಕ್ಕೆ ಕಷ್ಟವೇ ಆಗಿರುತ್ತದೆ ಎನ್ನುವುದಕ್ಕೆ ಅವರೇ ಸಾಕ್ಷೀಭೂತರಾಗಿದ್ದರು.
ಮಾಯಾಮೃಗ, ಮುಕ್ತ ಮುಕ್ತ ಮುಕ್ತ ಮುಂತಾದ ಟಿವಿ ಧಾರಾವಾಹಿಗಳನ್ನು ತಾವು ಈ ಟಿವಿ ಛಾನಲ್ಲಿನಲ್ಲಿ ನೋಡುತ್ತಿರಬಹುದು. ನೋಡಿಲ್ಲದಿದ್ದರೆ ಅದರ ಬಗ್ಗೆ ಓದಿಯೋ, ಕೇಳಿಯೋ ನಿಮಗೆ ಗೊತ್ತಿರುತ್ತದೆ. ಆ ಧಾರಾವಾಹಿಗಳ ನಿರ್ದೇಶಕರು ಟಿ ಎನ್ ಸೀತಾರಾಂ. ಕಾನೂನು ಸುತ್ತ ಸುತ್ತುವ ಮುಕ್ತ ಮುಕ್ತ ಧಾರಾವಾಹಿಯ ಕಂತುಗಳಿಗೆ ಗ್ಲಾಮರ್ ಟಚ್ ಕೊಡುವ ಉದ್ದೇಶದಿಂದ ಧಾರಾವಾಹಿಯ ನ್ಯಾಯಾಧೀಶರ ಪಾತ್ರಕ್ಕೆ ಪ್ರತೀಬಾರಿ ಹೊಸ ಹೊಸ ಪ್ರಸಿದ್ಧ ವ್ಯಕ್ತಿಗಳನ್ನು ಆರಿಸಿ ಆರಿಸಿ ತರಲಾಗುತ್ತದೆ.
ಈ ಮಾಲಿಕೆಯಲ್ಲಿ ನ್ಯಾಯಮೂರ್ತಿಗಳಾಗಿ ಸುಧಾಮೂರ್ತಿ ಇದ್ದರು, ರವಿ ಬೆಳಗೆರೆ ಇದ್ದರು, ಸ್ವತಃ ನ್ಯಾಯಮೂರ್ತಿಗಳೇ ಆಗಿದ್ದ ಎ ಜೆ ಸದಾಶಿವ ಅವರಿದ್ದರು, ವೈಕೆ ಮುದ್ದುಕೃಷ್ಣ ಬಂದಿದ್ದರು, ಬರಗೂರು ರಾಮಚಂದ್ರಪ್ಪ ಕಾಣಿಸಿಕೊಂಡಿದ್ದರು, ಮೊನ್ನೆ ಮೊನ್ನೆಯ ಕಂತಿನಲ್ಲಿ ಋತುವಿಲಾಸದ ಕವಿ ಎಚ್ ಎಸ್ವಿ ದಯಮಾಡಿಸಿದ್ದರು. ಇವರೆಲ್ಲರ ನಡುವೆ ನಮ್ಮ ಪ್ರೀತಿಯ ಅಶ್ವಥ್ ಕೂಡ ಒಮ್ಮೆ ಆ ಪಾತ್ರಕ್ಕೆ ಜೀವ ತುಂಬಿದ್ದರು.
ಒಂದು ದಿನ ಏನಾಯಿತೆಂದರೆ ಅಶ್ವಥ್ ಪಾತ್ರ ಮಾಡಿದ ಕಂತು ಈಟಿವಿಯಲ್ಲಿ ಪ್ರಸಾರವಾದದ್ದನ್ನು ನೋಡಿದ ದಂಪತಿಗಳ ಕಣ್ಣಿಗೆ ಅಶ್ವಥ್ ಬಿದ್ದರು. ಮಹಾನ್ ಗಾಯಕನ ಮುದ್ದಾಂ ದರ್ಶನವಾದ ಪುಳಕದಲ್ಲಿ ಆ ದಂಪತಿಗಳು ಅಶ್ವಥ್ ಅವರನ್ನು ಅಭಿನಂದಿಸಲು ಬಳಿಸಾರಿದರು. 'ಸಾರ್ ನಿನ್ನೆ ನಿಮನ್ನು ಈಟಿವಿನಲ್ಲಿ ನೋಡಿದೆ ಸಖತ್ ಆಗಿ ಆಕ್ಟ್ ಮಾಡಿದಿರಾ ಸಾರ್ ' ಎಂದು ಕೈಕಟ್ಟಿ ನಿಂತುಕೊಂಡು ಅಭಿನಂದನೆ ಸಲ್ಲಿಸಿದರು.
ಕೋಪ ಉಕ್ಕಿ ಹರಿಯುವುದಕ್ಕೆ ಅಶ್ವಥ್ ಅವರಿಗೆ ಅಷ್ಟೇ ಸಾಕಿತ್ತು. 'ಏನ್ರೀ ಇದು, ಮೂವತ್ತು ವರ್ಷಗಳಿಂದ ಗಂಟಲು ಕಿತ್ಕೊಂಡು ಹಾಡುತ್ತಾ ಇದ್ದೀನಿ. ಒಂದ್ಸಲಾನಾದ್ರೂ ಬಂದು ಅಭಿನಂದಿಸಿದ್ದೀರೇನ್ರಿ? ಐದು ನಿಮಿಷ ಟಿವಿನಲ್ಲಿ ಕಾಣಿಸಿದರೆ ಕಂಗ್ರಾಟ್ಸ್ ಹೇಳ್ತೀರಲ್ರಿ ಎಂದು ಏರಿದ ದನಿಯಲ್ಲಿ ದಬಾಯಿಸಿಬಿಟ್ಟರು'
ಏನೋ ಮಾಡಲು ಹೋಗಿ ಓನೋ ಆದದ್ದಕ್ಕಾಗಿ ಬೆಕ್ಕಸ ಬೆರಗಾದ ಆ ದಂಪತಿಗಳು ಅಲ್ಲಿಂದ ಕೂಡಲೇ ಕಾಲಿಗೆ ಬುದ್ಧಿ ಹೇಳಿದವರು ಮತ್ತೆ ಆ ಕಡೆ ತಿರುಗಿ ನೋಡಲಿಲ್ಲ. ಇಂಪಾದ ಹಾಡಿನ ಗುಂಗು ಮತ್ತು ಟಿವಿಯೊಳಗೆ ಮಿಂಚಿ ಮರೆಯಾಗುವ ಕ್ಷಣಭಂಗುರದ ನಡುವಿನ ವ್ಯತ್ಯಾಸ ದಂಪತಿಗಳಿಗೆ ಬಹುಶಃ ಈ ಹೊತ್ತಿಗೆ ವೇದ್ಯವಾಗಿರಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral













Click it and Unblock the Notifications