ಕುಮಾರಸ್ವಾಮಿ ಅವರಿಗೆ 52ರ ಶುಭಾಶಯಗಳು

ಆಡಳಿತ ಪಕ್ಷದ ತಪ್ಪು ನಡೆ ನುಡಿಗಳನ್ನು ತಿದ್ದುವುದು, ಆಳುವವರ ಜನ ವಿರೋಧಿ ನೀತಿ ನಿಯಮಗಳನ್ನು ಪ್ರಶ್ನಿಸುವುದು, ಅಧಿಕಾರಸ್ಥರ ಹಗರಣಗಳನ್ನು ಬಯಲಿಗೆ ಎಳೆಯುವುದು, ತನ್ಮೂಲಕ ರಾಜ್ಯದಲ್ಲಿ ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವ ಹೊಣೆಗಾರಿಕೆಯಲ್ಲಿ ಅವರಿಗೆ ಗೆಲವು ಇರಲಿ ಎಂದು ಈ ಸಂದರ್ಭದಲ್ಲಿ ಆಶಿಸೋಣ. ಜನಪ್ರತಿನಿಧಿ ಆಡಳಿತ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳ ಜವಾಬ್ದಾರಿ ಬಲುದೊಡ್ಡದು. ಅದನ್ನು ಅವರು ಮತ್ತು ಅವರ ಪಕ್ಷದ ಶಾಸಕರು ತುಂಬ ಎಚ್ಚರಿಕೆಯಿಂದ ನಿರ್ವಹಿಸುತ್ತಾರೆಂದೂ ಬಯಸೋಣ.
ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿ ಅಧಿಕಾರದ ರುಚಿ ಉಂಡವರು. ಇವತ್ತು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅದೃಷ್ಟ ಅವರನ್ನು ನಾಳೆ ಇನ್ನೆಲ್ಲಿಗೋ ಕರೆದೊಯ್ಯಬಹುದು. ಎಲ್ಲಾದರೂ ಇರು ಎಂತಾದರೂ ಇರು, ನೀನು ಕನ್ನಡನಾಡಿನ ಏಳಿಗೆಗೆ ತ್ರಿಕರಣ ಶುದ್ಧಿಯಿಂದ ಕೆಲಸ ಮಾಡುವಂತಹವನಾಗು ಎಂದು ನಾವೆಲ್ಲ ಕೂಡಿ ಹಾರೈಸೋಣ.
ಮುಂದೊಂದು ದಿನ ಅವರು ಮತ್ತೆ ಈ ರಾಜ್ಯದ ಮುಖ್ಯಮಂತ್ರಿ ಆದದ್ದೇ ಅದರೆ, ಈ ಹಿಂದೆ ರಾಜ್ಯಭಾರ ಮಾಡಿದ ಮುಖ್ಯಮಂತ್ರಿಗಳು ಎಸಗಿದ ಯಾವ ತಪ್ಪನ್ನೂ ನಾನು ಮಾಡುವುದಿಲ್ಲ ಎಂದು ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರತಿಜ್ಞೆ ಮಾಡಬೇಕೆಂದೂ ರಾಜ್ಯದ ಒಟ್ಟಾರೆ ಹಿತದೃಷ್ಟಿಯಿಂದ ಅವರನ್ನು ಕೇಳಿಕೊಳ್ಳೋಣ.
ಹಿರಿಯನಾಯಕ ಎಸ್ ಬಂಗಾರಪ್ಪನವರು ಜೆಡಿಎಸ್ಸಿಗೆ ಸೇರುವುದರ ಮೂಲಕ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಕಾಣಿಕೆಯನ್ನು ಕೊಟ್ಟಿದ್ದಾರೆ. ನಾವು ಬಡವರು, ನಾಲಕ್ಕು ಒಳ್ಳೆಯ ಮಾತಿಗಿಂತ ಹೆಚ್ಚಿನ ಉಡುಗೊರೆಯನ್ನು ಅವರಿಗೆ ನೀಡಲಾರೆವು. ಕುಮಾರಸ್ವಾಮಿ ಅವರಿಗೆ ಐಶ್ವರ್ಯ ಇದೆ. ಅವರಿಗೆ ಬೇಕಾಗಿರುವುದು ಆರೋಗ್ಯ ಮತ್ತು ಆಯಸ್ಸು. ಅವೆರಡನ್ನು ದಯಾಮಯನಾದ ಆ ಭಗವಂತ ಅವರಿಗೆ ಕರುಣಿಸಲಿ ಎಂದು ಪ್ರಾರ್ಥಿಸೋಣ. ಕುಮಾರಸ್ವಾಮಿಗೆ ಶುಭಾಶಯ ಕೋರಿರಿ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications