ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣ, ವಿಡಿಯೋ
1893ರ ಸೆಪ್ಟೆಂಬರ್ 11ರಂದು ಅಮೆರಿಕಾದ ಶಿಕಾಗೋದಲ್ಲಿ ಸ್ವಾಮಿ ವಿವೇಕಾನಂದ ಅವರು ಮಾಡಿದ ಐತಿಹಾಸಿಕ ಭಾಷಣ ಭಾರತದ ಇತಿಹಾಸದ ಪುಟಗಳಲ್ಲಿನ ಮರೆಯಲಾಗದ ಕ್ಷಣ. ವಿಭಿನ್ನ ಜಾತಿ, ಮತಗಳ ಮಾನವ ಸಂಕುಲವನ್ನು ಒಂದೇ ಗೂಡಿನಲ್ಲಿ ಪೋಷಿಸುತ್ತಿರುವ ಭಾರತವನ್ನು ಪ್ರತಿನಿಧಿಸಿ ವಿವೇಕಾನಂದರು ಮಾಡಿದ ಭಾಷಣ ಭಾರತೀಯರಲ್ಲಿ ಸ್ವಾಭಿಮಾನವನ್ನು ಬಡಿದೆಬ್ಬಿಸುನಂತಹುದು.
ಸ್ವಾಮಿ ವಿವೇಕಾನಂದರ 150ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 118 ವರ್ಷಗಳ ಹಿಂದೆ ಅವರು ನುಡಿದ ಆ ನುಡಿಗಳು ಇಂದಿಗೂ ಯುವಜನತೆಗೆ ಪ್ರೇರಣಾದಾಯಿಯಾಗಿವೆ. ಅಮೆರಿಕದ ಜನತೆಯನ್ನು ಸಹೋದರ ಸಹೋದರಿಯರೆ ಎಂದು ಉದ್ದೇಶಿಸಿ ಕಂಚಿನ ಕಂಠದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಭಾಷಣ ಇಲ್ಲಿ ಕೇಳಿ. ಸಾಧ್ಯವಾದರೆ ಅವರು ಸಾರಿದ ಧ್ಯೇಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. [ಶಿಕಾಗೋ ಭಾಷಣ ಕೇಳಿರಿ]

39 ವರ್ಷದಲ್ಲಿಯೇ ಅಗಾಧವಾದುದನ್ನು ಸಾಧಿಸಿದ ಆ ಮಹಾನ್ ಸಂತನನ್ನು ಪಡೆದ ಈ ಭಾರತ ಮಾತೆ ಮಾತ್ರವಲ್ಲ ಅವರನ್ನು ಹೆತ್ತ ಅಮ್ಮ ಭುವನೇಶ್ವರಿ ಕೂಡ ಧನ್ಯಳು. ಇದೇ ದಿನ ಅಂದರೆ, ಜನವರಿ 12, 1863ರಂದು ಭುವನೇಶ್ವರಿ ದೇವಿಯ ಗರ್ಭದಲ್ಲಿ ಕೋಲ್ಕತಾದಲ್ಲಿ ನರೇಂದ್ರನಾಥ ದತ್ತರಾಗಿ ವಿವೇಕಾನಂದರು ಜನಿಸಿದರು. ಬಾಲ್ಯದಲ್ಲಿ ತಾಯಿಯಿಂದ ಕಲಿತ ಜೀವನದ ಅತ್ಯಮೂಲ್ಯ ಪಾಠಗಳೇ ವಿವೇಕಾನಂದರನ್ನು ಆ ಮಟ್ಟಕ್ಕೆ ಬೆಳೆಸಲು ಸಾಧ್ಯವಾಯಿತು.
ಧಾರ್ಮಿಕ ಭಾವನೆಯವಳಾಗಿದ್ದ ಭುವನೇಶ್ವರಿ ದೇವಿಯಿಂದ ಭಕ್ತಿಯ ಜೊತೆಗೆ ತಮ್ಮನ್ನು ತಾವು ನಿಗ್ರಹಿಸುವುದನ್ನು ವಿವೇಕಾನಂದರು ಕಲಿತರು. ಅವರು ತಾಯಿ ಹೇಳಿದ "ನಿರ್ಮಲ ಜೀವನ ಸಾಗಿಸು, ಗೌರವದಿಂದ ಬಾಳು, ಅನ್ಯರ ಗೌರವಕ್ಕೆ ಧಕ್ಕೆ ತರಬೇಡ. ಯಾವಾಗಲೂ ಶಾಂತವಾಗಿರು. ಆದರೆ, ಅವಶ್ಯಕತೆ ಬಿದ್ದಾಗ ಸಿಡಿದೇಳು" ಎಂಬ ನುಡಿಗಳು ಎಲ್ಲ ಭಾರತೀಯರಿಗೆ ಅನ್ವಯವಾಗುತ್ತದೆ. ಅತ್ಯುತ್ತಮ ಮೌಲ್ಯಗಳನ್ನು ಬೋಧಿಸಿದ ಆ ಮಾತೆಯನ್ನು ಪಡೆದ ಈ ಭಾರತ ಕೂಡ ಧನ್ಯ. ಆಕೆಯನ್ನು ನಮಿಸೋಣ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications