ವಸಂತ ನಾಡಿಗೇರ ವಿಜಯ ಕರ್ನಾಟಕ ಸಂಪಾದಕ

"ಕನ್ನಡಪ್ರಭ" ಪತ್ರಿಕೆಯ ಸಂಪಾದಕೀಯ ವಿಭಾಗದಲ್ಲಿ ಹತ್ತು ವರ್ಷ ಕೆಲಸ ಮಾಡಿ ಆನಂತರದ ಹನ್ನೊಂದು ವರ್ಷಗಳಿಂದ ವಿಜಯ ಕರ್ನಾಟಕದಲ್ಲಿ ವಸಂತ್ ಸುದ್ದಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಈಗ ಅವರನ್ನು ಪತ್ರಿಕೆಯ ತಾತ್ಕಾಲಿಕ ಸಂಪಾದಕರನ್ನಾಗಿ ( Editor - Acting ) ನೇಮಿಸಲಾಗಿದೆ.
ಪತ್ರಿಕೆಯ ದೆಹಲಿ ಪ್ರತಿನಿಧಿಯಾಗಿರುವ ಬಿ. ಉಮಾಪತಿ ಅವರನ್ನು ಪತ್ರಿಕೆಯ ಸಂಪಾದಕರನ್ನಾಗಿ ಮಾಡಿ, ರಾಘವನ್ ಅವರನ್ನು ಸಂಪಾದಕೀಯ ಸಲಹೆಗಾರರನ್ನಾಗಿ ಇಟ್ಟುಕೊಳ್ಳಬೇಕೆಂಬ ಪ್ರಸ್ತಾವನೆ ಆಡಳಿತ ಮಂಡಳಿಗಿತ್ತು. ಆದರೆ, ಉಮಾಪತಿ ಅವರು ಮನಸ್ಸು ಮಾಡಿರಲಿಲ್ಲ. ಬದಲಾದ ಪರಿಸ್ಥಿತಿಯಲ್ಲಿ ಉಮಾ ಒಲವು ಎತ್ತ ಎನ್ನುವುದು ಇನ್ನು ತಿಳಿದುಬರಬೇಕಷ್ಟೆ.
ಮಾಧ್ಯಮದ ಒಂದು ವೇದಿಕೆಗೆ ಸಂಪಾದಕರು ಯಾರು ಎನ್ನುವುದರ ಮೇಲೆ ಆ ಪತ್ರಿಕೆಯ ಜನಪ್ರಿಯತೆ ಅಷ್ಟರಮಟ್ಟಿಗೆ ಅವಲಂಬಿತವಾಗಿರುತ್ತದೆ. ಇದು ಸೆಲೆಬ್ರಿಟಿ ಸ್ಟೇಟಸ್ ಹೊಂದಿರುವ ಸಂಪಾದಕರಿಗೆ ಮಾತ್ರ ಅನ್ವಯಿಸುತ್ತದೆ. ಇತರರಿಗೆ ಇಲ್ಲ.
ಆದರೆ, ಒಂದು ಪತ್ರಿಕೆಯ ನಿರ್ವಹಣೆಯಲ್ಲಿ ಸುದ್ದಿಸಂಪಾದಕನ ಪಾತ್ರ ಅತ್ಯಂತ ಮಹತ್ವವಾಗಿರುತ್ತದೆ. ವಸಂತ ನಾಡಿಗೇರರಿಗೆ ದೊರೆತ ಭಡ್ತಿಯಿಂದಾಗಿ ಪತ್ರಿಕೆಯ ಆರಂಭದ ದಿನದಿಂದಲೂ ಸೇವೆ ಸಲ್ಲಿಸುತ್ತಿರುವ ಲೋಕೇಶ್ ಕಾಯರ್ಗ ಅವರು ವಿಕದ ಸುದ್ದಿಸಂಪಾದಕ ಹುದ್ದೆಗೆ ಏರುವ ಸಾಧ್ಯತೆಯಿದೆ.
ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ಅವರು ಹೇಳುವ ಪ್ರಕಾರ, ಕರ್ನಾಟಕದ ಅತ್ಯಂತ ದಕ್ಷ ಮತ್ತು ಸಮರ್ಥ ಸುದ್ದಿಸಂಪಾದಕ ದಿವಂಗತ ಖಾದ್ರಿ ಶಾಮಣ್ಣ. ಶಾಮಣ್ಣ "ಪ್ರಜಾವಾಣಿ"ಯಲ್ಲಿ ಸುದ್ದಿ ಸಂಪಾದಕರಾಗಿ ಮಾಡಿದ ಕೆಲಸ ಪತ್ರಿಕೋದ್ಯಮದಲ್ಲಿ ವೃತ್ತಿನಿರತರಾಗಿರುವವರಿಗೆ ತಿಳಿದಿರುತ್ತದೆ. ಶಾಮಣ್ಣ ಅವರಿಗೆ ಕರ್ನಾಟಕದ ನರನಾಡಿಗಳ ಅರಿವಿತ್ತು.
ಇವತ್ತು ಕನ್ನಡನಾಡಿನ ಕೆಲವು ಪತ್ರಿಕೆ, ಟಿವಿ ವಾಹಿನಿಗಳಲ್ಲಿ ಸಂಪಾದಕ ಹುದ್ದೆ ಅಲಂಕರಿಸಿರುವ ವ್ಯಕ್ತಿಗಳ ಹೆಸರೇ ಕೇಳದವರು ಇದ್ದಾರೆ. ಹೆಸರೇ ಗೊತ್ತಿಲ್ಲದಿದ್ದ ಮೇಲೆ ಅವರ ಸಾಮರ್ಥ್ಯ ಮತ್ತು ವರ್ಚಸ್ಸು ಚರ್ಚಿಸುವ ಅಗತ್ಯ ಬೀಳುವುದಿಲ್ಲ.
ಹಾಗಂತ ಅಂಥ ವ್ಯಕ್ತಿಗಳಿಗೆ ಸಂಪಾದಕ ಹುದ್ದೆ ನಿರ್ವಹಿಸುವ ಅರ್ಹತೆ ಇಲ್ಲವೆಂದಲ್ಲ. ಕೆಲವರು ತೆರೆಯಮರೆಯ ಕಾಯಿ ಅಥವಾ ಹಣ್ಣಿನಂತೆ ಕಾರ್ಯ ನಿರ್ವಹಿಸುತ್ತಾರೆ. ಅದರಲ್ಲೂ ಒಂದು ಪತ್ರಿಕೆಯ ಸುದ್ದಿ ನಿರ್ವಹಣೆಯಲ್ಲಿ ಸುದ್ದಿ ಸಂಪಾದಕನ (ಳ) ಕೈಚಳಕ, ಬುದ್ಧಿಚಳಕ ವೆರಿ ಇಂಪಾರ್ಟೆಂಟ್ ಆಗುತ್ತದೆ.
ಇವತ್ತಿನ ಪತ್ರಿಕೋದ್ಯಮದ ಎಲ್ಲ ಮೂಲೆಗಳಲ್ಲಿ ತಂತ್ರಜ್ಞಾನ ಆವರಿಸಿಕೊಂಡಿರುವುದರಿಂದ ಸುದ್ದಿ ಸಂಪಾದಕ ಹುದ್ದೆಯ ವ್ಯಾಖ್ಯಾನವೂ ಬದಲಾಗಿದೆ. ಅನುಭವಿಗಳ, ಜವಾಬ್ದಾರಿ ಸ್ಥಾನದಲ್ಲಿರುವರ ಕಣ್ಣಿಗೆ ಬೀಳದೆ ಒಂದು ಸುದ್ದಿ ಬೆಳಕಾಗುವ ಸ್ಥಿತಿ ಇದೆ. ಕಿರಿಯ ಪತ್ರಕರ್ತರಿಗೆ ಇದು ಕಲಿಕೆಯ ಪರ್ವವೂ ಹೌದು, ತಪ್ಪೆಸಗಲು ಸಿಕ್ಕ ಛಾನ್ಸೂ ಹೌದು.
ಮಾತು ಕಡಿಮೆ, ಕೆಲಸ ಹೆಚ್ಚು; ಸಮಯಪಾಲನೆ ಮತ್ತು ಜವಾಬ್ದಾರಿಗೆ ಹೆಸರಾಗಿರುವ, ಸುದ್ದಿಯ ಕೆಮಿಷ್ಟ್ರಿ ಗೊತ್ತಿರುವ, ರಸಾಯನ ಶಾಸ್ತ್ರದ ಸ್ನಾತಕೋತ್ತರ ಪದವೀಧರ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ವಸಂತ ನಾಡಿಗೇರರಿಗೆ ನಮ್ಮ ಅಭಿನಂದನೆಗಳು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications