35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg110501kaaduharateಮನೆಯಿಂದ ಮನೆಗೆ../column/shreenidhi/2008/0826-old-memories-from-one-home-to-another.htmlಊರಿಂದ ಊರಿಗೆ ಹೋಗುವುದು, ಮನೆಯಿಂದ ಮನೆ ಬದಲಾಯಿಸುವುದು ಬಾಡಿಗೆದಾರರಿಗೆ, ವರ್ಗಾವಣೆಯ ಸರ್ಕಾರಿ ಕೆಲಸ ಇರುವವರಿಗೆ ತಪ್ಪದ ಕರ್ಮ. ಆದರೆ ಅದರಲ್ಲೂ ಸ್ವಾರಸ್ಯವಿರುತ್ತದೆ. ಪ್ರತಿ ಬಾಡಿಗೆ ಮನೆಯೂ ನಮ್ಮ ಸ್ವಂತ ಮನೆಯೇ, ಅದನ್ನು ಬಿಡುವವರೆಗೆ. ಇಂಥ ಅನುಭವಗಳು ಪ್ರತಿಯೊಬ್ಬರದೂ ಆಗಿರುತ್ತವೆ. ಮನೆ ಬದಲಾಯಿಸುವುದು ಸಾಮಾನು ಸರಂಜಾಮುಗಳ ಮೆರವಣಿಗೆ ಮಾತ್ರವಲ್ಲ ನೆನಪುಗಳ ಮೆರವಣಿಗೆ. ಅಂಕಣಕಾರ : ಶ್ರೀನಿಧಿ ಡಿ.ಎಸ್. ವರುಷ 1145http://kannada.oneindia.com/img/2009/09/23-loaded-van1.jpg110501kaaduharateಬಂದಿದೆ ಹೊಸ ವರುಷ ತಂದಿದೆ ಬಲು ಹರುಷ/column/shreenidhi/2008/1230-cheers-lets-celebrate-the-new-year.htmlಬದುಕಿನಲ್ಲಿ ಬರುವ ಎಲ್ಲದನ್ನೂ ಖುಷಿಯಲ್ಲಿ ಅನುಭವಿಸುವ ಹಲವರಿಗೆ, ಇದೊಂದು ಪರ್ವಕಾಲ! ಕುಣಿದು ಕುಪ್ಪಳಿಸಿ, ಹೊಸ ಜಿಗಿತಕ್ಕೆ ಅಣಿಯಾಗುವ ಸಮಯ. ಎಲ್ಲದನ್ನೂ ಸಮಾನವಾಗಿ ನೋಡುವ, ನಿರ್ಭಾವುಕ ಮನಸ್ಸಿಗೆ ಇದು ಅತ್ಯಂತ ಮಾಮೂಲಿಯ ಮತ್ತೊಂದು ದಿನ. ಎಂದಿನಂತೆ, ಒಂದು ದಿನಾಂಕ ಬದಲಿಯಾಗುತ್ತದೆ, ಅಷ್ಟೆ.* ಶ್ರೀನಿಧಿ ಡಿ.ಎಸ್.ಹೊಸ ನಿರ್ಧಾರಗಳನ್ನ ತೆಗೆದುಕೊಳ್ಳುವ, ಹೊಸ ವಿಚಾರಗಳನ್ನ ತುಂಬಿಕೊಳ್ಳುವ ದಿವ್ಯ ಘಳಿಗೆ ನವ ವರ್ಷ. ಒಂದು 33789http://kannada.oneindia.com/img/2008/12/30-new-year1.gif110501kaaduharateನಮ್ಮೂರಿನ ಅಂದಿನ ಚೆಂದದ ಕೆರೆಗೆ ಇಂದೇನಾಗಿದೆ?/column/shreenidhi/2009/0106-sad-story-of-a-lake-in-karnataka.html* ಶ್ರೀನಿಧಿ ಡಿ.ಎಸ್.ಒಂದು ಉದ್ದನೆಯ ಏರಿ, ಏರಿಯ ಕೆಳಗೆ ದೊಡ್ಡ ಕೆರೆ. ನಿಂತು ನೋಡುತ್ತಿದ್ದರೆ, ಅದರ ತುದಿ ಕಾಣುವಷ್ಟರಲ್ಲಿ ಕಣ್ಣು ನೋಯಬೇಕು, ಅಷ್ಟು ದೊಡ್ಡದು. ಕೆರೆಯ ತುಂಬ ಗಾಳಿಗೆ ಅಲ್ಲಾಡುತ್ತ ನಿಂತ ತಾವರೆಯ ಹೂವುಗಳು. ಜೊತೆಗೆ ಹಸಿರು ಹುಲ್ಲ ಜೊಂಡು. ದಂಡೆಯ ಪಕ್ಕದಲ್ಲೇ ಸಾಲು ಮರಗಳು. ಕೆರೆಯ, ಅಕೋ ಆ ತುದಿಯಲ್ಲಿ ಒಂದು ಹಳೆಯ ಕಾಲದ ಶಿವನ 33924http://kannada.oneindia.com/img/2009/01/06-lake1.jpg110501kaaduharateಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg110501kaaduharateಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gif384257droughtನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು/column/shreenidhi/2009/0317-save-water-today-it-will-save-you-tomorrow.htmlಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?* ಶ್ರೀನಿಧಿ ಡಿಎಸ್ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, 35282http://kannada.oneindia.com/img/2009/03/17-water-drop1.jpg384257droughtದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg384257drought20 ಜಿಲ್ಲೆಗಳು ಬರಪೀಡಿತ ಪ್ರದೇಶಗಳು : ರೆಡ್ಡಿ/news/2009/08/11/karunakar-reddy-names-drought-hit-districts.htmlಬೆಂಗಳೂರು, ಚಿತ್ತಾಪುರ, ಆ. 11 : ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯ ಹಿನ್ನೆಲೆಯಲ್ಲಿ 20 ಜಿಲ್ಲೆಗಳ 86 ತಾಲ್ಲೂಕುಗಳು ಹಾಗೂ 308 ಹೋಬಳಿಗಳನ್ನು ಬರಪೀಡಿತ ಪ್ರದೇಶಗಳು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಘೋಷಣೆ ಮಾಡಿದ್ದಾರೆ. ಆದರೆ, ಬರಪೀಡಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಬರಪ್ರದೇಶಗಳನ್ನು ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಅದಕ್ಕೂ ಮುಂಚೆ ಕರುಣಾಕರರೆಡ್ಡಿ ಘೋಷಣೆ ಮಾಡಿರುವುದು ತೀವ್ರ 38571http://kannada.oneindia.com/img/2009/08/11-karunkar-reddy1.jpg384257droughtಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg384257droughtಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpgnews"> ನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು | Save water | Water scarcity | Drought | Bengaluru | Kaaduharate - ನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು - Kannada Oneindia

ನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು

Save waer today, it will save you tomorrow
ಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?

* ಶ್ರೀನಿಧಿ ಡಿಎಸ್

ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, ಕಾಂಬೋಡಿಯಾ, ಕೀನ್ಯಾ ದೇಶಗಳ ಕುರಿತಾಗಿದ್ದು. ಅದರಲ್ಲಿ ನೋಡಿದ ಪ್ರಕಾರ, ಅಲ್ಲಿನ ಜನರ ಬರಗಾಲದಿಂದ ತತ್ತರಿಸುತ್ತಿದ್ದಾರೆ. ನೀರೇ ಇಲ್ಲದೆ ಇಲ್ಲಿನ ಭೂಮಿ ಬಾಯ್ಬಿಟ್ಟಿದೆ. ಎಲ್ಲಿ ನೋಡಿದರಲ್ಲಿ ಬಿಸಿಲ ಧಗೆ, ನೀರ ಹುಡುಕಾಟದಲ್ಲಿರುವ ಜನರು ಮತ್ತು ಪ್ರಾಣಿಗಳು. ಭೂಮಿಯ ಆಳದ ಅಂತರ್ಜಲ ಬತ್ತಿ ಬರಿದಾಗಿದೆ. ನೀರೇ ಇಲ್ಲವಾದ್ದರಿಂದ ಯಾವುದೇ ಬೆಳೆಯನ್ನೂ ಬೆಳೆಯಲು ಸಾಧ್ಯವಾಗುತ್ತಿಲ್ಲ. ಜನರು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ನೀರಿಲ್ಲದೆಯೂ ಬೆಳೆಯಬಲ್ಲ ವಿಷಜಾತಿಗೆ ಸೇರಿದ ಗಡ್ಡೆಗಳನ್ನು ತಿನ್ನುತ್ತಿದ್ದಾರೆ. ಈ ವಿಷಕಾರಿ ಗಡ್ಡೆ ಅವರ ಜೀವಕ್ಕೆ ಅಪಾಯವನ್ನು ತರಬಲ್ಲದು. ಆದರೆ ಅದನ್ನು ತಿನ್ನದಿದ್ದರೆ ಆ ಜನರು ಹಸಿವಿನಿಂದ ನರಳುತ್ತಾ ಸಾಯುಬೇಕಾಗುತ್ತದೆ. ಹಾಗಾಗಿ ಅವರು ಇದನ್ನೇ ತಿನ್ನುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಹೀಗಿದೆ ಇವರ ಬದುಕಿನ ಸ್ಥಿತಿ.

ಇಂದು ನಗರಗಳು ಅತೀ ವೇಗವಾಗಿ ಬೆಳೆಯುತ್ತಿವೆ. ಆಧುನೀಕರಣ, ನಗರೀಕರಣ, ಕೈಗಾರಿಕೀಕರಣಗಳು ನಮ್ಮ ನೈಸರ್ಗಿಕ ಸಂಪತ್ತಿನ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಕಾರ್ಖಾನೆಗಳ ಮತ್ತಿತರ ತ್ಯಾಜ್ಯ ವಸ್ತುಗಳನ್ನು ನೇರವಾಗಿ ನದಿಗಳಿಗೆ ಬಿಡುವುದರಿಂದ ನೀರು ಕಲುಷಿತಗೊಳ್ಳುತ್ತಿದೆ. ಬೆಂಗಳೂರಿನಂತಹ ಬೃಹತ್ ನಗರದಲ್ಲಿ ದಿನೇ ದಿನೇ ಜನಸಂಖ್ಯೆ ಮಿತಿ ಮೀರಿ ಹೆಚ್ಚುತ್ತಿದ್ದು ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಅಪಾಯದ ಮಟ್ಟವನ್ನು ದಾಟುತ್ತಿದೆ. ಸಂಶೋಧನೆಯೊಂದರ ಪ್ರಕಾರ, ಇಂದು ಜಗತ್ತಿನಾದ್ಯಂತ ಸುಮಾರು ಒಂದು ಬಿಲಿಯನ್ ಜನರು ಸ್ವಚ್ಛ ಕುಡಿಯುವ ನೀರು ಸಿಗದೆ ನರಳಾಡುತ್ತಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆಯೇ ಮುಂದುವರೆದರೆ 2025 ವೇಳೆಗೆ ಈ ಸಂಖ್ಯೆ 2.3 ಬಿಲಿಯನ್ ತಲುಪುತ್ತದೆ.

ಬೆಂಗಳೂರನ್ನು ಉದಾಹರಣೆಗೆ ತೆಗೆದುಕೊಂಡರೆ ಇಲ್ಲಿನ ನೀರಿನ ಅತಿದೊಡ್ಡ ಮೂಲ ನೂರು ಕಿಲೋಮೀಟರ್ ದೂರದಲ್ಲಿರುವ ಕಾವೇರಿ ನದಿ. ಪ್ರತಿನಿತ್ಯ ಲಕ್ಷಾಂತರ ಲೀಟರ್ ನೀರನ್ನು ಕಾವೇರಿ ನದಿಯಿಂದ ಇಲ್ಲಿಗೆ, ವಾರ್ಷಿಕ 350ರಿಂದ 400 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರಬರಾಜು ಮಾಡಲಾಗುತ್ತದೆ. ಇಲ್ಲಿನ ಮತ್ತೆರಡು ಪ್ರಮುಖ ಮೂಲಗಳೆಂದರೆ ತಿಪ್ಪಗೊಂಡನ ಹಳ್ಳಿ ಜಲಾಶಯ ಮತ್ತು ಅಂತರ್ಜಲ. ಆದರೆ ಇತ್ತೀಚಿನ ದಿನಗಳಲ್ಲಿ ತಿಪ್ಪಗೊಂಡನ ಹಳ್ಳಿ ಜಲಾಶಯದ ನೀರು ಗಣನೀಯವಾಗಿ ಕಡಿಮೆ ಆಗುತ್ತಿದ್ದು, ಮುಂದೊಂದು ದಿನ ಒಣಗಿ ಹೋಗುವ ಸಾಧ್ಯತೆ ಇದೆ. ಇನ್ನು ಅಂತರ್ಜಲದ ಮಟ್ಟವಂತೂ ದಿನೇ ದಿನೇ ಕುಸಿಯುತ್ತಿದೆ. ಇಡೀ ಬೆಂಗಳೂರಿನ ಜನರು ಕೇವಲ ಒಂದೇ ಕಾವೇರಿ ನದಿಯ ನೀರಿನ ಮೇಲೆ ಅವಲಂಬಿತರಾದರೆ, ಆ ನದಿ ಹೆಚ್ಚು ದಿನ ಆಸರೆ ನೀಡಲು ಸಾಧ್ಯವಿಲ್ಲ.

ಹಿಂದೆ ಬೆಂಗಳೂರು ಹಾಗೂ ಸುತ್ತಮುತ್ತ ಸುಮಾರು 200ಕ್ಕೂ ಹೆಚ್ಚು ದೊಡ್ಡ ಕೆರೆಗಳಿದ್ದವು. ಆದರೆ ಬೆಂಗಳೂರು ಬೆಳೆದಂತೆಲ್ಲಾ ಕೆರೆಗಳ ಸಂಖ್ಯೆ ಕಡಿಮೆ ಆಗುತ್ತಾ ಬಂತು. ಇತ್ತೀಚಿನ ವರದಿಯೊಂದರ ಪ್ರಕಾರ ಇಂದು ಕೇವಲ 81 ಕೆರೆಗಳು ಮಾತ್ರ ಉಳಿದಿವೆ. ಅಂದರೆ ಉಳಿದ 119 ಕೆರೆಗಳನ್ನು ಬೆಂಗಳೂರು ನುಂಗಿಬಿಟ್ಟಿದೆ.

ಅಂಕಿ ಅಂಶವೊಂದರ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 50,000ಕ್ಕೂ ಹೆಚ್ಚು ಮಕ್ಕಳು ತಮ್ಮ 5ನೇ ವರ್ಷ ದಾಟುವುದರೊಳಗಾಗಿ ಸಾಯುತ್ತಿದ್ದಾರೆ. ಇದಕ್ಕೆ ಕಾರಣ ಕಲುಷಿತ ನೀರಿನಿಂದ ಉಂಟಾಗುವ ಬೇಧಿ, ಜಠರ-ಕರುಳುಗಳ ಉರಿಯೂತ, ಹೆಪಟೈಟಿಸ್ ನಂತಹ ರೋಗಗಳು. ನಮ್ಮ ದೇಶದಲ್ಲಿ ಇಂದು ಸುಮಾರು 224 ದಶಲಕ್ಷ ಜನರು ನೀರಿನ ಕೊರತೆ ಎದುರಿಸುತ್ತಿದ್ದಾರೆ.

ಭೂಮಿಯ ಮೂರನೇ ಎರಡು ಭಾಗ ನೀರಿನಿಂದಾವೃತವಾಗಿದೆ. ಆದರೆ, ಈ ಎಲ್ಲಾ ನೀರೂ ಬಳಕೆಗೆ ಯೋಗ್ಯವಲ್ಲ. ಭೂಮಿಯ ಒಟ್ಟು ನೀರಿನ ಸೆಲೆಯ 3 ಶೇಕಡಾ ಮಾತ್ರ ಸಿಹಿನೀರು ಲಭ್ಯ. ಸಿಹಿನೀರಿನ 30 ಶೇಕಡಾ ಪಾಲು ಅಂತರ್ಜಲದಿಂದ ದೊರೆತರೆ, 0.3 ಶೇಕಡಾ ಪಾಲು ನದಿ, ಕೆರೆ, ಮತ್ತಿತರ ಮೂಲಗಳಿಂದ ದೊರೆಯುತ್ತದೆ. ಉಳಿದ ಸಿಂಹಪಾಲು ಮಂಜುಗಡ್ಡೆಗಳ ರೂಪದಲ್ಲಿದ್ದು, ಅವುಗಳ ಬಳಕೆ ಕಷ್ಟ.

ನೀರಿನ ಅತಿಯಾದ ಬೇಡಿಕೆ, ಅಂತರ್ಜಲವನ್ನು ಹೆಚ್ಚು ಹೆಚ್ಚು ಉಪಯೋಗಿಸುವಂತೆ ಮಾಡುತ್ತಿದೆ. ಇದು, ನೀರಿನ ಎಲ್ಲ ಮೂಲಗಳ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಭೂಮಿಯೊಳಗೆ ಇಂಗುವ ನೀರಿಗಿಂತ ಅಲ್ಲಿಂದ ಹೊರತೆಗೆಯುವ ನೀರಿನ ಪ್ರಮಾಣವೇ ಹೆಚ್ಚಾಗಿರುವುದು ಅಂತರ್ಜಲದ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವುದಕ್ಕೆ ಕಾರಣ. ಅಂತರ್ಜಲದ ಅಭಾವದಿಂದಾಗಿ ಬೆಂಗಳೂರಿನಂತಹ ಮಹಾ ನಗರಗಳಲ್ಲಿ ನೀರಿನ ಬೆಲೆ ಏರುತ್ತಿದೆ. ನೀರಿನ ಸಮಸ್ಯೆ ಹೀಗೆಯೇ ಮುಂದುವರೆದರೆ ದೇಶಾದ್ಯಂತ ಜಲಕ್ಷಾಮ ತಲೆದೂರುವ ಅಪಾಯವಿದೆ. ಬೃಹತ್ ನಗರಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳ, ಅಪಾರ್ಟ್ ಮೆಂಟ್ ಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿವೆ. ಒಂದೊಂದು ಕಟ್ಟಡಕ್ಕೂ ಹತ್ತಾರು ಬೋರ್ ವೆಲ್ ಗಳನ್ನು ಕೊರೆಯಲಾಗುತ್ತಿದೆ. ಬೆಂಗಳೂರಿನಲ್ಲೇ ಪ್ರತಿ ದಿನ ಸುಮಾರು 290 ಮಿಲಿಯನ್ ಲೀಟರ್ ಅಂತರ್ಜಲವನ್ನು ಹೊರ ತೆಗೆಯಲಾಗುತ್ತಿದೆ.

ಅನಿಯಂತ್ರಿತವಾಗಿ ನೀರನ್ನು ಹೊರತೆಗೆಯುವುದರಿಂದ ಅಂತರ್ಜಲದ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಹಲವಾರು ಕಡೆಗಳಲ್ಲಿ ಅಂತರ್ಜಲ 1000ದಿಂದ 1500 ಅಡಿಗಳಷ್ಟು ಆಳಕ್ಕೆ ಇಳಿದಿದೆ. ನಿರ್ದಿಷ್ಟ ಮಟ್ಟಕ್ಕಿಂತ ಆಳದಲ್ಲಿರುವ ನೀರಿನ ಬಳಕೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ.

ನೀರಿನ ಕುರಿತು ಒಂದಿಷ್ಟು ಮಾಹಿತಿ:

* ನಮ್ಮ ದೇಹದಲ್ಲಿನ ನೀರಿನ ಪ್ರಮಾಣ, ನಿಗದಿತ ಪ್ರಮಾಣಕ್ಕಿಂತ 20 ಶೇಕಡಾ ಕಡಿಮೆಯಾದರೆ ನಾವು ಸಾಯುತ್ತೇವೆ.
* ಜಗತ್ತಿನಲ್ಲಿ ಪ್ರತಿ ವರ್ಷ ಸುಮಾರು ಸರಾಸರಿ ಹದಿನಾಲ್ಕು ಲಕ್ಷ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಸಾಯುತ್ತಿದ್ದಾರೆ.
* ನಮ್ಮ ದೇಶದ ಒಂದು ಲಕ್ಷದ ನಲವತ್ತೆಂಟು ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿನ ಮೂಲಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ.
* ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ವಿಶ್ವದ ಅರ್ಧದಷ್ಟು ಜನರು ಶುದ್ಧ ಕುಡಿಯುವ ನೀರಿನ ಕೊರತೆಯಿಂದಾಗಿ ನೀರಿಗೆ ಸಂಬಂಧಿಸಿದ ಹಲವು ಕಾಯಿಲೆಯಿಂದ ಬಳಲುತ್ತಿದ್ದಾರೆ.
* ನೀರಿನ ಸಮಸ್ಯೆ ಹೀಗೆಯೇ ಮುಂದುವರೆದರೆ 2025ನೇ ಇಸ್ವಿಯ ವೇಳೆಗೆ ವಿಶ್ವಾದ್ಯಂತ ಸುಮಾರು 270 ಕೋಟಿ ಜನರು ನೀರಿಗಾಗಿ ಹಗಲಿರುಳೂ ಪರದಾಡುವ ಪರಿಸ್ಥಿತಿ ಬರಬಹುದು.

ಪರಿಸ್ಥಿತಿ ಹೀಗಿರುವಾಗ ಮನೆಯ ನಲ್ಲಿಯಿಂದ ಒಂದೊಂದೇ ಹನಿ ಸೋರುತ್ತಿದ್ದರೂ ಆ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಪ್ರತಿ ನಿಮಿಷಕ್ಕೆ ಒಂದು ಹನಿ ನೀರು ಪೋಲಾಗುತ್ತಾ ಹೋದರೆ, ಒಂದು ವರ್ಷಕ್ಕೆ ಸುಮಾರು 45,000 ಲೀಟರ್ ನೀರು ಸೋರಿ ಹೋಗುತ್ತದೆ. ಈ ನೀರಿನಲ್ಲಿ ಒಬ್ಬ ಮನುಷ್ಯ ಸುಮಾರು 15 ತಿಂಗಳ ಕಾಲ ಬದುಕಬಹುದು. ಆದ್ದರಿಂದ ಹನಿ ಹನಿ ನೀರಿಗೂ ಅದರದ್ದೇ ಆದ ಮಹತ್ವವಿದೆ. ನೀರುಳಿಸಿ ನೋಡೋಣ,ಮುಂದೆ ಅದು ನಮ್ಮನ್ನುಳಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+