ನೀರಿನ ಸದ್ಬಳಕೆಗೆ ಮನೆಯಲ್ಲಿ ಮಳೆನೀರು ಕೊಯ್ಲು

ನಮ್ಮ ಅಗತ್ಯಗಳಿಗೆ ಬೇಕಾದ ಸಿಹಿನೀರು ದೊರಕುವುದು ಅಂತರ್ಜಲದಿಂದ ಮತ್ತು ಕೆರೆ, ನದಿ, ಬಾವಿಗಳಿಂದ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಅಲ್ಲಿ ಮಾತ್ರ ದೊರಕುವ ನೀರಿನ ಮೂಲಗಳು ಬಳಕೆಗೆ ಸಾಲುತ್ತಿಲ್ಲ. ನೀರಿಗಾಗಿ ಹೊರಗಿನ ಮೂಲಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಉದ್ಭವವಾಗಿದೆ.
ಹಳ್ಳಿಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಹಿಂದಿನಂತೆ ಕೆರೆ- ಕೊಳ್ಳಗಳು ತುಂಬುತ್ತಿಲ್ಲ. ಮಳೆ ಮೊದಲಿನಂತೆ ತಿಂಗಳಾನುಗಟ್ಟಲೆ ಹೊಯ್ಯವುದಿಲ್ಲ. ನೀರಿನ ಅಭಾವ ಗ್ರಾಮಗಳಲ್ಲೂ ತಲೆದೋರಿದೆ. ಹೀಗಾಗಿ ನಮಗೆ ದೊರಕುವ ಸಿಹಿನೀರ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹನಿ ನೀರೂ ಕೂಡಾ ಅತ್ಯಂತ ಅಮೂಲ್ಯವಾಗಿ ಪರಿಣಮಿಸುತ್ತಿದೆ. ಆದರೆ ನೀರಿನ ಲಭ್ಯತೆ ಎಷ್ಟಿದೆ ಎಂಬುದರ ಬಗ್ಗೆ ಅರಿವು ಎಲ್ಲರಿಗಿಲ್ಲ.
ಜನಸಂಖ್ಯೆ ಜಾಸ್ತಿಯಾದಂತೆ ಭೂಮಿಯಿಂದ ಮೇಲೆತ್ತುವ ನೀರಿನ ಪ್ರಮಾಣವೂ ಜಾಸ್ತಿಯಾಗುತ್ತದೆ. ಕೊಳವೆ ಬಾವಿಗಳನ್ನು ಮನೆಗೊಂದರಂತೆ ತೋಡಲಾಗುತ್ತಿದೆ. ನೀರು ಸಿಗುವವರೆಗೆ ಭೂಮಿಯ ಒಡಲಿಗೆ ಕನ್ನಹಾಕುವ ತಂತ್ರಜ್ಞಾನದಿಂದಾಗಿ ಅಂತರ್ಜಲದ ಮಟ್ಟ ದಿನೇದಿನೇ ಕುಸಿಯುತ್ತಿದೆ.
ಅಂತರ್ಜಲದ ಮಟ್ಟ ಹೆಚ್ಚಿಸಲು ರೈನ್ ವಾಟರ್ ಹಾರ್ವೆಸ್ಟಿಂಗ್ ಅಥವಾ ಮಳೆಕೊಯ್ಲಿನ ಮೂಲಕ ಎಲ್ಲರೂ ತಮ್ಮ ಅಳಿಲುಸೇವೆ ನೀಡಬಹುದು. ಹೆಚ್ಚು ಖರ್ಚಿಲ್ಲದೆ ಸರಳವಿಧಾನದಲ್ಲಿ ಮಳೆಕೊಯ್ಲು ಮಾಡಬಹುದು. ಆಗಸದಿಂದ ಬೀಳುವ ಶುದ್ಧ ಮಳೆ ನೀರು ಸುಮ್ಮನೇ ಹರಿದು, ಚರಂಡಿ ಸೇರಿ ಮುಂದೆ ಕೊಳಚೆ ನೀರಾಗಿ ಎಲ್ಲೋ ವ್ಯರ್ಥವಾಗಿ ಹೋಗುತ್ತದೆ. ಅದರ ಬದಲಿಗೆ ಮಳೆ ನೀರನ್ನು ಹಿಡಿದಿಟ್ಟು ಬಳಕೆ ಮಾಡುವುದು ಅಥವಾ ಅಂತರ್ಜಲಕ್ಕೆ ಅದನ್ನು ಸೇರಿಸುವುದು ಮಳೆಕೊಯ್ಲಿನ ಹಿಂದಿರುವ ಸಿದ್ಧಾಂತ.
ಒಮ್ಮೆ ಮಳೆ ನೀರ ಕೊಯ್ಲನ್ನು ಆರಂಭಿಸಿದರೆ, ಸಣ್ಣ - ಪುಟ್ಟ ನಿರ್ವಹಣೆಗಳ ಹೊರತಾಗಿ ಬೇರೆ ಖರ್ಚು ಇರುವುದಿಲ್ಲ. ಇದಕ್ಕೆ ನಿಮ್ಮ ಸಮಯ ಹೆಚ್ಚೇನೂ ಬೇಕಾಗಿಲ್ಲ. ಬೆಂಗಳೂರನ್ನು ಉದಾಹರಣೆಗೆ ತೆಗೆದುಕೊಳ್ಳುವುದಾದರೆ, ಇಲ್ಲಿ ಒಂದು ಲೆಕ್ಕಾಚಾರದ ಪ್ರಕಾರ ಅರವತ್ತರಿಂದ ಅರವತ್ತೈದು ಮಳೆ ದಿನಗಳು ಸಿಗುತ್ತವೆ. ದಿನವೊಂದಕ್ಕೆ ಸರಾಸರಿ 30 ಮಿಲಿಮೀಟರ್ ಮಳೆ ಆಗುತ್ತದೆ. ಮೂವತ್ತು ಅಡಿ ಉದ್ದ ನಲವತ್ತು ಚದರಡಿ ವಿಸ್ತೀರ್ಣದ ನೆಲದ ಮೇಲೆ ವರ್ಷಕ್ಕೆ ಸುಮಾರು ಒಂದು ಲಕ್ಷ ಲೀಟರ್ ನೀರಿನಷ್ಟು ಮಳೆ ಸುರಿಯುತ್ತದೆ. ಒಮ್ಮೆ ಆಲೋಚಿಸಿ ನೋಡಿ, ಎಷ್ಟೊಂದು ನೀರು ಪೋಲಾಗುತ್ತಿದೆ!
ಈ ರೀತಿ ಹರಿದು ಹೋಗುವ ಮಳೆ ನೀರನ್ನು ಸಂಗ್ರಹ ಮಾಡುವ ಬಗೆ ಬಲು ಸುಲಭ. ನಿಮ್ಮ ಬಳಿ ಇರುವ ಸೀಮಿತ ಸಂಪನ್ಮೂಲಗಳಿಂದಲೇ ಮಳೆಕೊಯ್ಲು ಮಾಡಬಹುದು. ನೀವಿರುವುದು ಸಣ್ಣ ಮನೆಯಾಗಿದ್ದು , ಮಳೆ ನೀರಿನ ಸಂಗ್ರಹಕ್ಕೆ ಜಾಗದ ಕೊರತೆ ಬರಬಹುದು ಎಂಬ ಸಂಶಯವಿರಬಹುದು. ಆದರೆ, ಮಳೆ ಕೊಯ್ಲಿಗೆ ಎಷ್ಟು ಸಣ್ಣ ಜಾಗ ಸಿಕ್ಕಿದರೂ ಸಾಕು.
ಮಳೆಕೊಯ್ಲು ಮಾಡುವ ಸರಳ ರೀತಿ ಹೀಗಿದೆ:
1. ತಾರಸಿ ಮನೆ ನಿಮ್ಮದಾಗಿದ್ದರೆ, ಮನೆಯ ತಾರಸಿಯಿಂದ ಮಳೆ ನೀರು ಹೊರ ಹೋಗಲು ಪೈಪ್ ಇದ್ದೇ ಇರುತ್ತದೆ. ಆ ಪೈಪನ್ನು ನೇರವಾಗಿ ಪ್ಲಾಸ್ಟಿಕ್ ಡ್ರಮ್ ಅಥವಾ ಸಿಮೆಂಟಿನ ಸಂಪಿಗೆ ಜೋಡಿಸಿ.
2. ನಿಮ್ಮದು ಹೆಂಚಿನ ಮನೆಯಾದರೆ ಅಡ್ಡಡ್ಡ ಕತ್ತರಿಸಿದ ದೊಡ್ಡ ಪಿವಿಸಿ ಪೈಪುಗಳನ್ನು ಹೆಂಚುಗಳ ಕೊನೆಗೆ ಜೋಡಿಸಿ, ನೀರನ್ನು ಡ್ರಮ್ ಅಥವಾ ಸಂಪಿನೊಳಗೆ ಹೋಗುವಂತೆ ಮಾಡಿ.
3. ಜಾಳಿಗೆಯೊಂದನ್ನು ಅಳವಡಿಸುವ ಮೂಲಕ ಪೈಪಿನಿಂದ ಬರುವ ನೀರಿನಲ್ಲಿರುವ ಕಸ ಕಡ್ಡಿ ಡ್ರಮ್-ಗೆ ಅಥವಾ ಸಂಪಿನೊಳಗೆ ಸೇರುವುದನ್ನು ತಡೆಯಿರಿ.
4. ನೀರನ್ನು ಬಳಸಲು ಆರಂಭಿಸಿ.
ನೆಲ ಮಟ್ಟಕ್ಕಿಂತ ಕೆಳಗಿರುವ ನೀರು ಸಂಗ್ರಹಿಸುವ ತೊಟ್ಟಿ ಅಥವಾ ಸಂಪು ನಿಮ್ಮ ಮನೆಯಲ್ಲಿದ್ದರೆ, ದೊಡ್ಡ ಪ್ರಮಾಣದಲ್ಲಿ ಮಳೆಕೊಯ್ಲು ಮಾಡಬಹುದು.
1. ಸಂಗ್ರಹವಾದ ಮಳೆನೀರನ್ನು ಪೈಪೊಂದರಲ್ಲಿ ಬರುವಂತೆ ಮಾಡಬೇಕು.
2. ನೆಲಮಟ್ಟದಲ್ಲಿ 4ರಿಂದ 6 ಅಡಿ ಎತ್ತರ - 3 ಅಡಿ ಅಗಲದ ಫಿಲ್ಟರ್ ನಿರ್ಮಿಸಬೇಕು.
3. ನೀರನ್ನು ಶುದ್ಧಗೊಳಿಸಲು 4 ಇಂಚು ಇದ್ದಿಲು ಮತ್ತು 4 ಇಂಚು ಮರಳನ್ನು ಫಿಲ್ಟರ್ ಗೆ ಸೇರಿಸಬೇಕು.
4. ಇದರ ಮೂಲಕ ಹಾದ ಮಳೆ ನೀರು ಶುದ್ಧಗೊಂಡು ಪೈಪ್ ಮುಖಾಂತರ ಸಂಪನ್ನು ಸೇರುತ್ತದೆ.
5. ಸಂಪಿನಲ್ಲಿ ಸಂಗ್ರಹಗೊಂಡ ನೀರನ್ನು over head tankಗೆ ಸೇರಿಸಿ ಬಳಸಬಹುದು.
ಹೊಸದಾಗಿ ಮನೆ ಕಟ್ಟುತ್ತಿರುವವರು 6,000 ಲೀಟರ್ ನಿಂದ 9,000 ಲೀಟರ್ ಸಾಮರ್ಥ್ಯವಿರುವ ಸಂಪನ್ನು ಕಟ್ಟಿಸುವುದು ಒಳ್ಳೆಯದು. ಒಮ್ಮೆ ಬೀಳುವ ಸಾಧಾರಣ ಮಳೆಗೆ ಮೂರರಿಂದ ಮೂರೂವರೆ ಸಾವಿರ ಲೀಟರ್ ನೀರು ಸಂಪಲ್ಲಿ ಸಂಗ್ರಹವಾಗುತ್ತದೆ. ನಿಮ್ಮ ಬಳಿ ಸಂಪು ಇಲ್ಲದಿದ್ದರೂ ಚಿಂತೆ ಮಾಡಬೇಕಿಲ್ಲ. ಮನೆಯ ಪಕ್ಕದಲ್ಲೇ 8-12 ಅಡಿಗಳ ಎತ್ತರದಲ್ಲಿ ಟ್ಯಾಂಕೊಂದನ್ನು ನಿರ್ಮಿಸಿ, ನೀರೆಲ್ಲವನ್ನು ಅಲ್ಲಿ ಸಂಗ್ರಹಿಸಿ ನಂತರ ಆ ನೀರನ್ನು ಬಳಸಿಕೊಳ್ಳಬಹುದು. ಈ ವ್ಯವಸ್ಧೆಯಲ್ಲಿ ಟ್ಯಾಂಕ್ ನಿಂದ ನಲ್ಲಿಗಳಿಗೆ ಸಂಪರ್ಕ ಕೊಟ್ಟು, ನೀರನ್ನು ನೇರವಾಗಿ ನಿಮ್ಮ ಬಳಕೆಗೆ ಉಪಯೋಗಿಸಿಕೊಳ್ಳಬಹುದಾಗಿದೆ.
ಮಳೆಕೊಯ್ಲು ಮಾಡುವವರಿಗೆ ಸಲಹೆಗಳು:
1. ಮನೆಯ ಹಂಚು, ತಾರಸಿಯ ಮೇಲ್ಮೈಯನ್ನು ಗಲೀಜಾಗದಂತೆ ನೋಡಿಕೊಳ್ಳಿ.
2. ತಾರಸಿಯಲ್ಲಿ ರಾಸಾಯನಿಕಗಳು, ಕ್ರಿಮಿನಾಶಕಗಳನ್ನು ಸಂಗ್ರಹಿಸಬೇಡಿ.
3. ಮಳೆಗಾಲದ ಆರಂಭಕ್ಕೆ ಮುನ್ನ ಹಂಚು, ತಾರಸಿಯನ್ನು ಗುಡಿಸಿ ಚೊಕ್ಕಟವಿರಿಸಿಕೊಳ್ಳಿ.
4. ಮೊದಲ ಮಳೆಯ ನೀರಿನ ಸಂಗ್ರಹ ಬೇಡ.
5. ಮಳೆಗಾಲ ಮುಗಿದ ನಂತರ ಪೈಪುಗಳನ್ನು ಕಳಚಿಡಿ.
6. ಎರಡು ವರ್ಷಗಳಿಗೊಮ್ಮೆ ಫಿಲ್ಟರ್ ನ ಇದ್ದಿಲು ಮತ್ತು ಮರಳು ಬದಲಾಯಿಸಿ.
7. ಕುಡಿಯಲು ಮಳೆ ನೀರನ್ನು ಬಳಸುತ್ತೀರಾದರೆ:
a. ಪಾದರಕ್ಷೆ ಬಳಸಿ ತಾರಸಿಯಲ್ಲಿ ಓಡಾಡಬೇಡಿ.
b. ಡಿಟರ್ಜಂಟ್ ಯುಕ್ತ ನೀರು ಇರುವ ಬಟ್ಟೆಗಳನ್ನು ತಾರಸಿಯಲ್ಲಿ ಒಣಗಿಸಬೇಡಿ.
ಮಳೆಕೊಯ್ಲಿನಿಂದ ಸಂಗ್ರಹಿಸಿದ ಮಳೆನೀರನ್ನು ಎಷ್ಟುದಿನ ಬೇಕಾದರೂ ಇಡಬಹುದು. ಗಾಳಿ, ಬೆಳಕು ಬೀಳದ ಜಾಗದಲ್ಲಿ ನೀರನ್ನು ಸಂಗ್ರಹಿಸಿಟ್ಟು ನಿಮಗೆ ಬೇಕಾದಾಗ ಉಪಯೋಗಿಸಿಕೊಳ್ಳಬಹುದು. ಮಳೆ ಬರುತ್ತಿರುವಾಗ ಅದರ ಪ್ರಾಮುಖ್ಯತೆ ತಿಳಿಯುವುದಿಲ್ಲ. ಹೀಗಾಗಿ, ಈ ಬಿರು ಬೇಸಗೆಯಲ್ಲೇ, ಮಳೆ ನೀರು ಕೊಯ್ಲಿಗೆ ಬೇಕಾದ ಸಿದ್ಥತೆ ಮಾಡಿಕೊಂಡರೆ ಮುಂದೆ ಅನುಕೂಲವಾದೀತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications