ಎಚ್ಚರ! ಮತಗಟ್ಟೆಯಲ್ಲಿ ಫೋಟೋ ತೆಗೆಯಬೇಡಿ
ಬೆಂಗಳೂರು, ಎ.15: ಈ ಬಾರಿ ಚುನಾವಣೆ ಆಯೋಗ ಮತಗಟ್ಟೆಗಳಿಗೆ ಮತದಾರರು ಮೊಬೈಲ್ ಗಳನ್ನು ತರಬಾರದೆಂಬ ಆದೇಶ ಹೊರಡಿಸಿದೆ. ಮತಗಟ್ಟೆಯಲ್ಲಿ ಮತ ಹಾಕುವ ಚಿತ್ರವನ್ನು ತೆಗೆದರೆ ನೇರ ಜೈಲು ಪಾಲಾಗುವ ಭೀತಿ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಎಚ್ಚರಿಸಿದೆ. ಈ ನಿಯಮ ಚುನಾವಣಾ ಸಿಬ್ಬಂದಿಗೂ ಅನ್ವಯವಾಗಲಿದೆ
ಆದರೆ, ಚುನಾವಣಾ ಸಿಬ್ಬಂದಿಗಳು ಮತದಾನ ಶೇಕಡಾವಾರು ವಿವರವನ್ನು ತಮ್ಮ ಉನ್ನತ ಅಧಿಕಾರಿಗಳಿಗೆ ತಲುಪಿಸಲು ಮೊಬೈಲ್ ಫೋನ್ ಬಳಸಬಹುದಾಗಿದೆ. ಆದರೆ, ಎಸ್ ಎಂಎಸ್ ಮಾತ್ರ ಕಳಿಸಬಹುದು. ಮತಗಟ್ಟೆಯೊಳಗೆ ಫೋಟೋ ತೆಗೆಯುವಂತಿಲ್ಲ. ಆಯೋಗ ನೇಮಿಸಿರುವ ಅಧಿಕೃತ ಛಾಯಾಗ್ರಹಕರು ಮಾತ್ರ ಮತದಾನ ಪ್ರಕ್ರಿಯೆಯ ಚಿತ್ರಗಳನ್ನು ತೆಗೆಯುವ ಅವಕಾಶ ಹೊಂದಿರುತ್ತಾರೆ.
ಸುಪ್ರೀಂಕೋರ್ಟಿನ ಆದೇಶದಂತೆ ವಿಡಿಯೋಗ್ರಾಫಿ ಮಾಡುವ ಮುನ್ನ ರಿಟರ್ನಿಂಗ್ ಆಫೀಸರ್ ಹಾಗೂ ಅಬ್ಸರ್ವರ್ ಅವರ ಅನುಮತಿ ಪಡೆಯಬೇಕಾಗುತ್ತದೆ. ಮತದಾನದ ಗೌಪ್ಯತೆಗೆ ಭಂಗ ಬರದಂತೆ ವಿಡಿಯೋಗ್ರಾಫಿಗೆ ಅನುಮತಿ ನೀಡಬಹುದು. ಇನ್ನೂ ಮತಗಟ್ಟೆಯಲ್ಲಿ ಮತಯಂತ್ರಗಳಿಗೆ ಅಭ್ಯರ್ಥಿಗಳು ಪೂಜೆ ಸಲ್ಲಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಕರ್ನಾಟಕದ ವಿಶೇಷಗಳು: ರಾಜ್ಯದಲ್ಲಿ ಏಪ್ರಿಲ್ 17ರಂದು, ಗುರುವಾರ ಹದಿನಾರನೇ ಲೋಕಸಭೆಗೆ ನಡೆಯಲಿರುವ ಚುನಾವಣೆ ಮತದಾನದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿಯ ಗುರುತು ಹಚ್ಚಲಾಗುತ್ತಿದೆ.
ಕರ್ನಾಟಕದಲ್ಲಿ ಮೊದಲ ಬಾರಿಗೆ 'ವೋಟರ್ ವೆರಿಫೈಯೇಬಲ್ ಪೇಪರ್ ಟ್ರಯಲ್' ವ್ಯವಸ್ಥೆಯನ್ನು ಲೋಕಸಭೆ ಚುನಾವಣೆಯಲ್ಲಿ ಪರಿಚಯಿಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ನೀವು ಈ ವ್ಯವಸ್ಥೆಯನ್ನು ಕಾಣಬಹುದಾಗಿದೆ.
ಮತದಾರರಿಗೆ ಮತಗಟ್ಟೆಯ ಬಗ್ಗೆ ಆಗುವ ಗೊಂದಲ ತಪ್ಪಿಸಲು ಎಸ್ಎಸ್ಎಂ ಮೂಲಕ ಮತಗಟ್ಟೆಯ ವಿಳಾಸ ತಿಳಿಸುವ ನೂತನ ವ್ಯವಸ್ಥೆಗೆ ರಾಜ್ಯ ಚುನಾವಣಾ ಆಯೋಗ ಚಾಲನೆ ನೀಡಿದೆ. ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಎಸ್ಎಂಎಸ್ ಮಾಡಿದರೆ, ನೀವು ಯಾವ ಮತಗಟ್ಟೆಯಲ್ಲಿ ಮತ ಚಲಾಯಿಸಬೇಕು ಎಂಬ ಮಾಹಿತಿಯು ಮೊಬೈಲ್ ಬರುತ್ತದೆ.(ಪಿಟಿಐ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications