ಡಿಬೇಟ್ : ಅಶೋಕ್ ಖೇಣಿ ಕಾಂಗ್ರೆಸ್ ಸೇರಿದ್ದು ಸರಿಯೇ?
ಬೆಂಗಳೂರು, ಮಾರ್ಚ್ 05 : ಕರ್ನಾಟಕದ ಇಂದಿನ ಚರ್ಚೆಯ ವಿಷಯ ಅಶೋಕ್ ಖೇಣಿ. ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇದು ವಿಪಕ್ಷಗಳಿಗೆ ಚುನಾವಣೆ ಸಮಯದಲ್ಲಿ ಒಳ್ಳೆಯ ವಿಷಯವಾಗಿದೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಕರ್ನಾಟಕ ಮಕ್ಕಳ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದಾರೆ.
2018ರ ಚುನಾವಣೆಗೆ ಕೆಲವು ದಿನಗಳು ಇರುವಾಗ ಅಶೋಕ್ ಖೇಣಿ ಕಾಂಗ್ರೆಸ್ ಸೇರಿರುವ ಬಗ್ಗೆ ರಾಜ್ಯಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸುತ್ತಿವೆ.

ಅಶೋಖ್ ಖೇಣಿ ಅವರ ವಿರುದ್ಧ ಹಲವಾರು ಆರೋಪಗಳಿವೆ. ನೈಸ್ ಸಂಸ್ಥೆಯ ಹಗರಣದ ಬಗ್ಗೆಯೂ ಬಿಜೆಪಿ ಮತ್ತು ಜೆಡಿಎಸ್ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡುತ್ತಿವೆ. ಪಾರದರ್ಶಕ ಆಡಳಿತ ನಡೆಸುತ್ತೇವೆ ಎನ್ನುವ ಕಾಂಗ್ರೆಸ್ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ಏಕೆ? ಎಂದು ಪ್ರಶ್ನಿಸಿವೆ.
ಅಶೋಕ್ ಖೇಣಿ ಕಾಂಗ್ರೆಸ್ ಸೇರಿದ್ದು ಸರಿಯೇ?, ಇದರಿಂದ ಕಾಂಗ್ರೆಸ್ಗೆ ಹಿನ್ನಡೆ ಉಂಟಾಗಲಿದೆಯೇ?...ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ.












Click it and Unblock the Notifications