Get Updates
Get notified of breaking news, exclusive insights, and must-see stories!

ಡಿಬೇಟ್ : ಒಬ್ಬರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಸರಿಯೇ?

Recommended Video

      Karnataka Elections 2018 : ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸರೀನಾ? | Oneindia Kannada

      ಬೆಂಗಳೂರು, ಏಪ್ರಿಲ್ 12 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಕೆಲವು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ.

      ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

      ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಹ ಎರಡೂ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಸ್ವ ಕ್ಷೇತ್ರ ಕೊರಟಗೆರೆ ಮತ್ತು ಬೆಂಗಳೂರಿ ಪುಲಿಕೇಶಿ ನಗರ ಕ್ಷೇತ್ರದಿಂದಲೂ ಅವರು ಸ್ಪರ್ಧಿಸಲು ಬಯಸಿದ್ದಾರೆ. ಆದರೆ, ಪಕ್ಷ ಹೈಕಮಾಂಡ್ ಇನ್ನೂ ಸ್ಪರ್ಧೆಗೆ ಒಪ್ಪಿಗೆ ನೀಡಿಲ್ಲ.

      siddaramaiah

      ಒಬ್ಬರು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಬಹುದು. ಆದರೆ, ಎರಡೂ ಕ್ಷೇತ್ರದಲ್ಲಿ ಜಯಗಳಿಸಿದರೆ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು. ಇದರಿಂದಾಗಿ ಆ ಕ್ಷೇತ್ರಕ್ಕೆ ಮತ್ತೆ ಉಪ ಚುನಾವಣೆ ನಡೆಯಬೇಕು.

      ರಾಜಕೀಯ ನಾಯಕರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಜನರ ತೆರಿಗೆ ಹಣ ಪೋಲಾಗುತ್ತದೆ. ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ನಡೆದರೆ ಅದರ ವೆಚ್ಚವನ್ನು ಅಭ್ಯರ್ಥಿಗಳು ಭರಿಸುವುದಿಲ್ಲ. ಸರ್ಕಾರದ ಖಜಾನೆಯಿಂದಲೇ ಹಣ ಖರ್ಚು ಮಾಡಬೇಕು.

      ವಿವಿಧ ರಾಜಕೀಯ ನಾಯಕರ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು? ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ...

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+