Debate: ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆಯ ನಂತರ ಬಂಡಾಯ ಭುಗಿಲೇಳಲಿದೆಯಾ?
ಬೆಂಗಳೂರು, ಏಪ್ರಿಲ್ 7: ಕಾಂಗ್ರೆಸ್ ಅಳೆದು ತೂಗಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 42 ಅಭ್ಯರ್ಥಿಗಳ ಹೆಸರನ್ನು ಕೆಪಿಸಿಸಿ ಪ್ರಕಟಿಸಿದೆ, ಇದರಲ್ಲಿ ಮೇಲುಕೋಟೆಯಲ್ಲಿ ಸರ್ವೋದಯ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲವನ್ನು ಸೂಚಿಸಿದೆ. ನಿರೀಕ್ಷೆಯಂತೆ ಎರಡನೇ ಪಟ್ಟಿಗೆ ಅಲ್ಲಲ್ಲಿ ಅಪಸ್ವರ ಎದ್ದಿದೆ.
ಮೂರನೇ ಪಟ್ಟಿ ಅಥವಾ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸುವ ಸಂಬಂಧ ದೆಹಲಿಯಲ್ಲಿ ಎಐಸಿಸಿಯ ಸ್ಕ್ರೀನಿಂಗ್ ಕಮಿಟಿ ಸಭೆಯನ್ನು ನಡೆಸಿದರೂ, ಯಾವುದೇ ಅಂತಿಮ ನಿರ್ಧಾರಕ್ಕೆ ಬರಲಾಗಲಿಲ್ಲ. ಎರಡನೇ ಪಟ್ಟಿ ಬಿಡುಗಡೆಯಾದ ನಂತರ ಟಿಕೆಟ್ ವಂಚಿತರ ಆಕ್ರೋಶ ಹೆಚ್ಚಾಗುತ್ತಿದೆ. ಇನ್ನು, ಮುಂದಿನ ಪಟ್ಟಿ ಬಿಡುಗಡೆಗೊಂಡ ನಂತರ ಕಾಂಗೆಸ್ಸಿನಲ್ಲಿ ಅಸಮಾಧಾನ ಭುಗಿಲೇಳುತ್ತಾ? ಒಂದು ಚರ್ಚೆ.












Click it and Unblock the Notifications