Debate: ಬೆಂಗಳೂರಿನ ಬಿಜೆಪಿ ನಾಯಕರಿಂದ ಹೊಂದಾಣಿಕೆ ರಾಜಕೀಯ?
ಚುನಾವಣಾ ಹೊಸ್ತಿಲಲ್ಲಿರುವ ಕರ್ನಾಟದಲ್ಲಿ ಮೂರೂ ಪಕ್ಷಗಳು ಭರ್ಜರಿ ಪೂರ್ವತಯಾರಿಯನ್ನು ನಡೆಸುತ್ತಿವೆ. ಎರಡು ದಿನಗಳ ಹಿಂದೆ ಮೋದಿ ಬಂದು ಹೋದರೆ, ಅಮಿತ್ ಶಾ ಕೂಡಾ ರಾಜ್ಯ ಪ್ರವಾಸದಲ್ಲಿದ್ದಾರೆ. ಕಾಂಗ್ರೆಸ್ಸಿನವರು ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. ಜೆಡಿಎಸ್ಸಿನ ಪಂಚರತ್ನ ರಥಯಾತೆ ನಿನ್ನೆ ಭರ್ಜರಿಯಾಗಿ ಮೈಸೂರಿನಲ್ಲಿ ಸಂಪನ್ನಗೊಂಡಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸದಲ್ಲಿದ್ದಾರೆ. ಈ ವೇಳೆ ಬೆಂಗಳೂರು ನಗರ ಮತ್ತು ಗ್ರಾಮೀಣ ಭಾಗದ ಅಸೆಂಬ್ಲಿ ಕ್ಷೇತ್ರಗಳ ಮೇಲೆ ಇನ್ನೂ ಹೆಚ್ಚಿನ ಗಮನ ಹರಿಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. ಈ ವೇಳೆ, ಹೊಂದಾಣಿಕೆ ರಾಜಕಾರಣವನ್ನು ಈ ಚುನಾವಣೆಯಿಂದಲೇ ನಿಲ್ಲಿಸಿ ಎನ್ನುವ ಫರ್ಮಾನನ್ನು ನೀಡಿದ್ದಾರೆಂದು ವರದಿಯಾಗಿದೆ.

ಬೆಂಗಳೂರು ನಗರದ ರಾಜಕೀಯದ ವಿಚಾರಕ್ಕೆ ಬರುವುದಾದರೆ ಈ ಹಿಂದೆಯೂ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ವರದಿಯಾಗಿತ್ತು. ಈ ವಿಚಾರದಲ್ಲಿ ಹಲವು ಬಾರಿ ಬಿಜೆಪಿ ಹೈಕಮಾಂಡ್, ಬೆಂಗಳೂರು ಮೂಲದ ಪ್ರಬಾವೀ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿದ್ದಾರೆಂದೂ ಸುದ್ದಿಯಾಗಿತ್ತು.
ಬೆಂಗಳೂರು ನಗರ/ಗ್ರಾಮೀಣ ಸೇರಿದಂತೆ ಒಟ್ಟು 32 ವಿಧಾನಸಭಾ ಕ್ಷೇತ್ರಗಳಿವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಇಲ್ಲಿಂದ ಹನ್ನೊಂದು ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಹಾಗಾಗಿ, ಅಮಿತ್ ಶಾ ಎಚ್ಚರಿಕೆ ಮಹತ್ವವನ್ನು ಪಡೆದುಕೊಂಡಿದೆ. ಹಾಗಾದರೆ, ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ಪಾಲಿಟಿಕ್ಸ್ ನಡೆಸುತ್ತಿದ್ದಾರಾ? ಒಂದು ಚರ್ಚೆ..
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications