ಡಿಬೇಟ್ : ವರುಣಾದಿಂದ ಬಿಜೆಪಿ ಅಭ್ಯರ್ಥಿ ಯಾರಾಗಬೇಕು?
ಬೆಂಗಳೂರು, ಏಪ್ರಿಲ್ 24 : 2018ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಮಧ್ಯಾಹ್ನ 3 ಗಂಟೆ ತನಕ ಅವಕಾಶವಿದೆ. ಆದರೆ, ಮೈಸೂರಿನ ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮಗೊಂಡಿಲ್ಲ.
ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಂಜನಗೂಡಿನಲ್ಲಿ ಸೋಮವಾರ ಘೋಷಣೆ ಮಾಡಿದ್ದರು. ನಂತರ ಹೈಡ್ರಾಮ ನಡೆಯುತ್ತಿದ್ದು, ಇನ್ನೂ ಅಂತಿಮ ನಿರ್ಧಾರ ಪ್ರಕಟಗೊಂಡಿಲ್ಲ.

ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಎರಡು ತಿಂಗಳಿನಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದರು. ಸೋಮವಾರ ಅವರು ನಾಮಪತ್ರ ಸಲ್ಲಿಸಬೇಕಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಯಡಿಯೂರಪ್ಪ ಘೋಷಣೆ ಮಾಡಿದರು.
ಮೈಸೂರಿನಲ್ಲಿಯೇ ಬಿ.ಎಸ್.ಯಡಿಯೂರಪ್ಪ ವಾಸ್ತವ್ಯ ಹೂಡಿದ್ದು, ವರುಣಾ ಕ್ಷೇತ್ರದ ಟಿಕೆಟ್ ವಿಚಾರ ಹೈಕಮಾಂಡ್ ಮಟ್ಟಕ್ಕೆ ತಲುಪಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಮೈಸೂರಿಗೆ ಆಗಮಿಸಿ ಯಡಿಯೂರಪ್ಪ ಜೊತೆ ಸಭೆ ನಡೆಸುತ್ತಿದ್ದಾರೆ.
ಮೈಸೂರು, ಚಾಮರಾಜನಗರ ಜಿಲ್ಲೆಗಳ ಬಿಜೆಪಿ ಅಭ್ಯರ್ಥಿಗಳು, ನೂರಾರು ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಅಭ್ಯರ್ಥಿ ಯಾರಾಗಬೇಕು? ಎಂಬ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆ.
ವರುಣಾ ಕ್ಷೇತ್ರದ ಅಭ್ಯರ್ಥಿಯಾರಾಬೇಕು? ಏಕೆ? ಎಂದು ನೀವು ನಿಮ್ಮ ಅಭಿಪ್ರಾಯವನ್ನು ತಿಳಿಸಿ, ಈ ವಿಚಾರದ ಬಗ್ಗೆ ನೀವು ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್ನಲ್ಲಿ ಹಾಕಿ...
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications