ಚರ್ಚೆ: ಅಂದು ಸಹಿ ಹಾಕಿದ್ದಕ್ಕೆ, ಇಂದು ಯಡಿಯೂರಪ್ಪ ಮೌನವೇ?
ವೀರಶೈವ-ಲಿಂಗಾಯತ, ಪ್ರತ್ಯೇಕ ಧರ್ಮ ಇದು ಹೊಸ ವಿಷಯವೇನಲ್ಲ. ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲೂ ಈ ಬಗ್ಗೆ ಭಾರಿ ಚರ್ಚೆ ನಡೆದು, ಒಂದು ಹಂತಕ್ಕೆ ಇತ್ಯರ್ಥವಾಗಿತ್ತು.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೇಡಿಕೆ ಇಟ್ಟಿದ್ದ ಮಠಾಧೀಶರ ಪತ್ರಕ್ಕೆ ಯಡಿಯೂರಪ್ಪ ಅವರು ಸಹಿ ಹಾಕಿದ್ದರು. ಹಾಗಾಗಿ, ಈಗ ಏನು ಮಾತನಾಡುತ್ತಿಲ್ಲ ಎಂಬ ವಾದ ಕೇಳಿ ಬಂದಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಿಸಬಹುದು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ವಿ ಶ್ರೀನಿವಾಸ್ ಅವರು ಟ್ವೀಟ್ ಮಾಡಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆ ಸುತ್ತೋಲೆಗೆ ಅಂದೇ ಸಹಿ ಹಾಕಿದ್ದರು ಎಂದು ದಾಖಲೆಗಳನ್ನು ಹಾಕಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ಬೇಡಿಕೆಗೆ ತಕ್ಕಂತೆ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮ ಎಂದು ಘೋಷಿಸಲು ಮುಂದಾಗಿದ್ದರು ಎಂದು ಹೇಳಿದ್ದಾರೆ.

ಈ ಶಿಫಾರಸು ಪತ್ರಕ್ಕೆ ಅಂದಿನ 57 ಶಾಸಕರು ಹಾಗೂ ಸಂಸದರು ಸಹಿ ಹಾಕಿದ್ದರು, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಅನೇಕ ಶಾಸಕರು ತಮ್ಮ ಒಪ್ಪಿಗೆ ಸೂಚಿಸಿದ್ದರು. ನಂತರ ಇದನ್ನು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕಳಿಸಲಾಗಿತ್ತು.
ಬಿಜೆಪಿಯಿಯಿಂದ ಬಸವರಾಜ ಬೊಮ್ಮಾಯಿ, ಪ್ರಭಾಕರ್ ಕೋರೆ, ಉಮೇಶ್ ಕತ್ತಿ, ಲಕ್ಷ್ಮಣ್ ಸವರಿ, ಅರವಿಂದ್ ಬೆಲ್ಲದ್, ಜೆಡಿಎಸ್ ನಿಂದ ಬಸವರಾಜ ಹೊರಟ್ಟಿ, ಎಸ್ಎಸ್ ಶಿವಶಂಕರ್ ಹಾಗೂ ಮಲ್ಲಿಕಾರ್ಜುನ ಖೂಬಾ ಸೇರಿದಂತೆ ಅನೇಕರು ತಮ್ಮ ಒಪ್ಪಿಗೆ ಸೂಚಿಸಿದ್ದರು.
Every political party and leader plays caste card at election time; @siddaramaiah has done it brazenly. But let's not forget @BSYBJP wanted Lingayats to get separate minority status in 2013.. Dear old Basavanna didn't have to fight an election like the netas of today! #lingayat
— Rajdeep Sardesai (@sardesairajdeep) March 19, 2018
ಈ ಬಗ್ಗೆ ಚರ್ಚೆ ಇನ್ನೂ ಮುಂದುವರೆದಿದೆ. ಹಿಂದೂಗಳನ್ನು ಒಡೆದಿದ್ದು ಕಾಂಗ್ರೆಸ್ ಅಲ್ಲ, ಬಿಜೆಪಿ ಎಂದು ಹೇಳಲಾಗುತ್ತಿದೆ. ಪತ್ರಕರ್ತ ರಾಜದೀಪ್ ಸರ್ದೇಸಾಯಿ ಅವರು ಕೂಡಾ ಮತ ಬ್ಯಾಂಕ್ ರಾಜಕೀಯ ಮೂಲಕ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
Yeddyurappa was all for a separate #Lingayat religion. Few years back he had even signed a memorandum on the same. Such gimmicks now. On that few media questioning Congress? pic.twitter.com/Y6vLui3KVw
— Srinivas B V (@srinivasiyc) March 19, 2018
ಒಟ್ಟಾರೆಯಾಗಿ, ಹಿಂದೂಗಳನ್ನು ಒಡೆದಿದ್ದು ಯಾರು? ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಯಡಿಯೂರಪ್ಪ ಮೌನ ಸರಿಯೇ? ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ಎಷ್ಟು ಸರಿ? ಎಂಬುದರ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಇಮೇಲ್ ಕಳಿಸಿ[[email protected]] ಅಥವಾ ಕಾಮೆಂಟ್ ಬಾಕ್ಸಿನಲ್ಲಿ ನಿಮ್ಮ ಪ್ರತಿಕ್ರಿಯೆ ನೀಡಿ
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications