ಸುಳ್ಳು ಸಂದೇಶಗಳ ರಹದಾರಿ; ವಾಟ್ಸಾಪ್ ನಿಷೇಧಿಸಬೇಕೇ? ಬೇಡವೇ?
ಆಧುನಿಕ ಯುಗದಲ್ಲಿ ಜನರ ನಡುವಣ ಸಂಪರ್ಕದ ಸುಲಭ ಕೊಂಡಿಯಾಗಿರುವ ವಾಟ್ಸಾಪ್, ಸದುಪಯೋಗಕ್ಕಿಂತಲೂ ಅದರ ದುರ್ಬಳಕೆಯೇ ಹೆಚ್ಚುತ್ತಿದೆ.
ಹರಟಲು, ಅಭಿಪ್ರಾಯಗಳನ್ನು ಹಂಚಿಕೊಳ್ಳಲು, ಆರೋಗ್ಯಕರ ಚರ್ಚೆ ನಡೆಸಲು, ಮಾಹಿತಿ ವಿನಿಮಯ ಮಾಡಲು, ಸಂಬಂಧಗಳನ್ನು ಬೆಸೆಯಲು ವಾಟ್ಸಾಪ್ ನೆರವಾದದ್ದಿದೆ. ಆದರೆ, ಅದರಿಂದ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಹಾನಿಯೇ ಹೆಚ್ಚು.
ವಾಟ್ಸಾಪ್ನಿಂದ ಸುದೀರ್ಘಕಾಲದ ಬಾಂಧವ್ಯಗಳು ಹದಗೆಟ್ಟಿದ್ದಿದೆ, ಕೌಟುಂಬಿಕ ಕಲಹಗಳು ನಡೆದ ಉದಾಹರಣೆಗಳಿವೆ. ವಾಟ್ಸಾಪ್ ಸಂದೇಶಗಳಿಂದ ಅನುಮಾನಗೊಂಡು ಎಷ್ಟೋ ದಂಪತಿಗಳು ದೂರವಾಗಿದ್ದಾರೆ.
ಮಾತ್ರವಲ್ಲ, ಒಂದೇ ಮನೆಯಲ್ಲಿ ಅಕ್ಕಪಕ್ಕ ಕುಳಿತವರೂ ವಾಟ್ಸಾಪ್ನಲ್ಲಿಯೇ ಮಾತನಾಡುವ ಸ್ಥಿತಿ ಬಂದಿದೆ. ವಿದ್ಯಾರ್ಥಿಗಳು ಪುಸ್ತಕಗಳಿಗಿಂತ ವಾಟ್ಸಾಪ್ನಲ್ಲಿಯೇ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ.

ಸಣ್ಣಪುಟ್ಟ ಕಲಹಗಳಾಗಿದ್ದರೆ ಅದರ ಹೊಣೆಗಾರಿಕೆಯನ್ನು ವಾಟ್ಸಾಪ್ ಮೇಲೆ ಹೊರಿಸದೆ ಇರಬಹುದಾಗಿತ್ತು. ಆದರೆ, ಈ ಸಾಮಾಜಿಕ ಮಾಧ್ಯಮದಿಂದಾಗುವ ಅನಾಹುತಗಳು ಒಂದೆರಡಲ್ಲ. ಸಾಮಾಜಿಕ ಕಲಹಗಳು, ಕೋಮು ಗಲಭೆ, ಆತಂಕ ಸೃಷ್ಟಿಸುವ ಅನೇಕ ಸುಳ್ಳು ಸಂದೇಶಗಳು ವಾಟ್ಸಾಪ್ನಲ್ಲಿ ಹರಿದಾಡುತ್ತಿವೆ.
ಎಷ್ಟೋ ಅವಮಾನ, ಆತ್ಮಹತ್ಯೆ, ಕೊಲೆಗಳಂತಹ ಘಟನೆಗಳಿಗೆ ವಾಟ್ಸಾಪ್ ಸಂದೇಶಗಳು ಕಾರಣವಾಗುತ್ತಿವೆ. ತಮ್ಮ ವೈಯಕ್ತಿಕ ಅಥವಾ ಗ್ರೂಪ್ಗೆ ಬರುವ ಸಂದೇಶಗಳನ್ನು ಓದುವ ಅನೇಕರು ಅದರ ಸತ್ಯಾಸತ್ಯತೆಯನ್ನು ಪರಾಮರ್ಶಿಸುವ ಗೋಜಿಗೆ ಹೋಗದೆ ಇತರರಿಗೂ ಕಳುಹಿಸುತ್ತಾರೆ.
ಈ ಸಂದೇಶಗಳು ವಾಟ್ಸಾಪ್ಗೆ ಮೀಸಲಾಗಿರದೆ ಬಾಯಿಯಿಂದ ಬಾಯಿಗೆ ಹರಡುವ ಮೂಲಕ ಜನರು ಕಾನೂನನ್ನು ಲೆಕ್ಕಿಸದೆ ಅಪರಾಧ ಕೃತ್ಯಗಳಿಗೆ ಮುಂದಾಗುವಂತೆ ಪ್ರಚೋದನೆ ನೀಡುತ್ತಿವೆ.
ಮುಂಬೈನಲ್ಲಿ ಇತ್ತೀಚೆಗೆ ಮಕ್ಕಳ ಕಳ್ಳರೆಂದು ಐವರನ್ನು ಹೊಡೆದು ಸಾಯಿಸಿದ ಅಮಾನುಷ ಘಟನೆ ಇನ್ನೂ ಹಸಿಯಾಗಿದೆ.
ವಾಟ್ಸಾಪ್ ಒಂದು ಗೀಳಾಗಿಯೂ ಬದಲಾಗಿದೆ. ಹೆಚ್ಚಿನ ಸಮಯವನ್ನು ವಾಟ್ಸಾಪ್ನಲ್ಲಿಯೇ ಕಳೆಯುವುದರಿಂದ ಅದನ್ನು ಬಿಟ್ಟಿರಲಾರದ ಮಾನಸಿಕ ಸಮಸ್ಯೆಯೂ ಕಾಡುತ್ತಿದೆ. ಹಿತಮಿತವಾಗಿ ಮತ್ತು ಉಪಯೋಗಕಾರಿಯಾಗಬೇಕಿದ್ದ ವಾಟ್ಸಾಪ್ ಬಳಕೆ, ಈಗ ಅತಿಯಾಗಿರುವುದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.
ಸುಳ್ಳು ಸುದ್ದಿಯನ್ನು ಹರಡುವ ಸಾಧನವಾಗಿರುವ ವಾಟ್ಸಾಪ್ ಸಂದೇಶಗಳ ಮೇಲೆ ಕಡಿವಾಣ ಹಾಕಬೇಕು ಎಂಬ ಅಭಿಪ್ರಾಯ ಕೆಲವೆಡೆ ವ್ಯಕ್ತವಾಗುತ್ತಿದೆ. ಅದನ್ನು ಸಂಪೂರ್ಣ ನಿಷೇಧಿಸಬೇಕು ಎಂಬ ಕೂಗೂ ಕೇಳಿಸುತ್ತಿದೆ.
ತಂತ್ರಜ್ಞಾನ ಮುಂದುವರಿದಿರುವ ಈ ಕಾಲಘಟ್ಟದಲ್ಲಿ ಅಂತರ್ಜಾಲ ಆಧಾರಿತ ವಾಟ್ಸಾಪ್ನಂತಹ ಸಾಮಾಜಿಕ ಸಂಪರ್ಕ ಆಪ್ಗಳು ಸಾಕಷ್ಟಿವೆ. ವಾಟ್ಸಾಪ್ ನಿಷೇಧವಾದರೆ ಉಳಿದ ಆಪ್ಗಳು ಹೆಚ್ಚು ಸಕ್ರಿಯವಾಗುತ್ತವೆ. ಅವುಗಳೆಲ್ಲದರ ಮೇಲೆಯೂ ನಿಷೇಧ ಹೇರುವುದು ಕೂಡ ಕಷ್ಟ.
ಭಾರತದಲ್ಲಿ ತಿಂಗಳಿಗೆ 200 ಮಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ಅವರೆಲ್ಲರ ಸಂದೇಶಗಳ ಮೇಲೆ ನಿಯಂತ್ರಣ ಹೇರುವುದು ಸುಲಭವಲ್ಲ.
ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿರುವ ವಾಟ್ಸಾಪ್ಅನ್ನು ನಿಷೇಧಿಸಬೇಕೇ, ಅದರ ಸಂದೇಶಗಳ ಮೇಲೆ ನಿಯಂತ್ರಣ ಹೇರುವ ಕ್ರಮ ತೆಗೆದುಕೊಂಡರೆ ಸಾಕೇ ಅಥವಾ ಸುಳ್ಳು ಸುದ್ದಿ ಹರಡುವಿಕೆ ತಡೆಗೆ ಏನು ಮಾಡಬಹುದು ಎಂಬ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications