ರಾಜಕಾರಣಿಗಳು ಕೊಡುವ 'ಭಿಕ್ಷೆ' ಇಸಿದುಕೊಳ್ಳಬೇಕೆ?
ಬೆಂಗಳೂರು, ಮಾರ್ಚ್ 01 : "ಇಸಿದುಕೊಳ್ಳುವವರು ಇರುವವರೆಗೆ ಕೊಡುವವರು ಇದ್ದೇ ಇರುತ್ತಾರೆ!" ಹಾಗೆಯೇ, "ಕೊಡುವವರು ಇರುವವರೆಗೆ ಇಸಿದುಕೊಳ್ಳುವವರೂ ಇದ್ದೇ ಇರುತ್ತಾರೆ!"
ಇದು ನಮ್ಮ ದೇಶದ ವಿಪರ್ಯಾಸ. ಈ ಕಾರಣದಿಂದಾಗಿಯೇ ಭ್ರಷ್ಟಾಚಾರ ಭಾರತದಲ್ಲಿ ತಾಂಡವವಾಡುತ್ತಿದೆ. ನರೇಂದ್ರ ಮೋದಿ ಸರಕಾರ ಎಷ್ಟೇ ಕ್ರಮಗಳನ್ನು ಜರುಗಿಸುತ್ತಿದ್ದರೂ ಭ್ರಷ್ಟಾಚಾರವನ್ನು ನಿಗ್ರಹಿಸಲು ಇನ್ನೂ ಸಾಧ್ಯವಾಗಿಲ್ಲ.
ಇದು ಸಾಧ್ಯವಾಗುವುದು, ದೇಶದ ಪ್ರಜ್ಞಾವಂತ ನಾಗರಿಕರು ಇಂತಹ ಆಚರಣೆಗೆ ಪೂರ್ಣವಿರಾಮ ಹಾಕಿದಾಗ ಮಾತ್ರ. ಇದಕ್ಕೆ ದೃಢವಾದ ಸಂಕಲ್ಪ ಮಾಡಬೇಕು. ಇನ್ನೆಂದೂ ಲಂಚ ನೀಡುವುದಿಲ್ಲ, ನೀಡಿದ್ದನ್ನು ಇಸಿದುಕೊಳ್ಳುವುದಿಲ್ಲ. ಇಂತಹ ಅನೈತಿಕ ಚಟುವಟಿಕೆಗಳಿಗೆ ಅವಕಾಶವನ್ನೂ ನೀಡುವುದಿಲ್ಲ ಎಂದು ಸಂಕಲ್ಪ ಮಾಡಬೇಕು.

ಇದು ಸಾಧ್ಯವೆ? ಕರ್ನಾಟಕದ ಚುನಾವಣೆಯನ್ನೇ ನೋಡಿ. ನಾವು ಭ್ರಷ್ಟಾಚಾರದ ವಿರುದ್ಧ ಎಂದು ಸಮಾವೇಶಗಳಲ್ಲಿ ಎದೆತಟ್ಟಿ ಹೇಳುತ್ತಿರುವವರು, ಕಂಡಕಂಡಲ್ಲಿ ಸೀರೆ, ಕುಕ್ಕರು, ಮಿಕ್ಸರ್ ಗ್ರೈಂಡರ್, ಹಣ, ಮತ್ತಿತರ ವಸ್ತುಗಳನ್ನು ಬಡಬಗ್ಗರಿಗೆ ಹಂಚುತ್ತಿದ್ದಾರೆ. ಇನ್ನು ಸ್ವಲ್ಪ ದಿನಗಳಲ್ಲಿ ಮದ್ಯದ ಹೊಳೆಯೂ ಹರಿಯಲಿದೆ.
ಇವನ್ನು ಇಸಿದುಕೊಂಡವರು ಉದ್ಧಾರವಾಗುತ್ತಾರಾ? ನೀವು ನಿಜವಾದ ನಾಗರಿಕರೇ ಆಗಿದ್ದರೆ, ಮತಭಿಕ್ಷೆಗೆಂದು ಬರುವ ರಾಜಕಾರಣಿಗಳು ಕೊಡುವ ಬಿಟ್ಟಿ ಉಡುಗೊರೆಗಳನ್ನು, ಭಿಕ್ಷೆಯನ್ನು ಅವರ ಮುಖದ ಮೇಲೆ ಬಿಸಾಕಿ. ನಿಮಗೆ ಮತ ಹಾಕುವುದಿಲ್ಲ ಅಂತ ಮುಖಕ್ಕೆ ಬಾರಿಸಿದ ಹಾಗೆ ಹೇಳಿರಿ.
ಮತ ಹಾಕುವುದು ನಿಮ್ಮ ಅತ್ಯಮೂಲ್ಯವಾದ ಹಕ್ಕು ಮತ್ತು ಆಸ್ತಿ. ರಾಜಕಾರಣಿಗಳು ಒಡ್ಡುವ ಆಮಿಷಕ್ಕೆ ಮರುಳಾಗಿ ಮತವನ್ನು ಮಾರಿಕೊಳ್ಳಬೇಡಿ. ಇಂಥ ಆಚರಣೆಗೆ ನಮ್ಮ ಕರ್ನಾಟಕ ವಿಧಾನಸಭೆ ಚುನಾವಣೆಯೇ ನಾಂದಿ ಹಾಡಲಿ. ಏನಂತೀರಿ? ನಿಮ್ಮ ಅಭಿಪ್ರಾಯಗಳನ್ನು ಕೆಳಗಿನ ಕಾಮೆಂಟ್ ಬಾಕ್ಸ್ ನಲ್ಲಿ ಬರೆಯಿರಿ.
-
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications