ಚರ್ಚೆ : ಲಿಂಗಾಯತರ ಮತ ಯಾವ ಪಕ್ಷಕ್ಕೆ ಬೀಳಲಿವೆ?
ಲಿಂಗಾಯತ ಪಂಗಡಕ್ಕೆ ಪ್ರತ್ಯೇಕ ಧರ್ಮದ ಅಸ್ವಿತ್ವ ನೀಡಬೇಕೆಂದು ರಾಜ್ಯ ಸರಕಾರ ಶಿಫಾರಸು ಮಾಡಿದಂದಿನಿಂದ ಕರ್ನಾಟಕದ ಚುನಾವಣಾ ಕಣದಲ್ಲಿ ವಿಚಿತ್ರ ಸನ್ನಿವೇಶ ಸೃಷ್ಟಿಯಾಗಿದೆ. ಅದನ್ನು ಅವರವರ ಭಾವಕ್ಕೆ ತಕ್ಕಂತೆ ಅರ್ಥೈಸಿಕೊಳ್ಳಬಹುದು.
ಅದೇನೆಂದರೆ, ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕೊಡಬೇಕೆಂದ ಮಾತ್ರಕ್ಕೆ ಲಿಂಗಾಯತರು ಕಾಂಗ್ರೆಸ್ಸಿಗೆ ಮತ ಹಾಕಬೇಕಾ ಅಥವಾ ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿರುವ ಬಿಜೆಪಿಗೆ ಹಾಕಬೇಕಾ ಅಥವಾ ಪಕ್ಷನಿಷ್ಠೆಗಿಂತ ವ್ಯಕ್ತಿನಿಷ್ಠೆಯನ್ನು ನೋಡಿ ಮತ ಹಾಕಬೇಕಾ ಎನ್ನುವುದು.
ಮತ ಹಾಕುವುದು ಅತ್ಲಾಗಿರಲಿ, ತಮಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಸಿಗಬೇಕಾ, ಅಲ್ಪಸಂಖ್ಯಾತರಾಗಿ ಮೀಸಲಾತಿಯ ಹಂಗಿಗೆ ಬೀಳಬೇಕಾ, ರಾಜಕಾರಣಿಗಳ ಹುಚ್ಚಾಟಕ್ಕೆ ನಾವು ಬಲಿಯಾಗಬೇಕಾ, ವೀರಶೈವರನ್ನು ಹೊರಗಿಡಬೇಕಾ ಎಂಬಿತ್ಯಾದಿ ಗೊಂದಲಗಳು ಲಿಂಗಾಯತರಲ್ಲಿಯೂ ಸಾಕಷ್ಟಿವೆ.

ಲಿಂಗಾಯತರಿಗೆ ಪ್ರತ್ಯೇಕ ಅಸ್ವಿತ್ವ ದೊರಕಿಸಿಕೊಟ್ಟಿದ್ದೇವೆ, ಹೇಗಿದ್ದರೂ ಲಿಂಗಾಯತ ಮತಗಳು ತಮಗೇ ಬೀಳುತ್ತವೆ ಎಂಬ ಅಹಮ್ಮಿಕೆಯಲ್ಲಿ ಕಾಂಗ್ರೆಸ್ಸಿನ ಹಲವಾರು ನಾಯಕರು ಈಗಾಗಲೆ ಮನದಲ್ಲಿಯೇ ಮಂಡಿಗೆ ತಿನ್ನುತ್ತಿದ್ದಾರೆ. ಅವರಲ್ಲಿ ಕೆಲವರು ಮುಖ್ಯಮಂತ್ರಿಯ ಕುರ್ಚಿಯ ಮೇಲೆ ಕುಳಿತಂತೆಯೂ ಕನಸು ಕಾಣಲು ಆರಂಭಿಸಿದ್ದಾರೆ. ಅವರು ಯಾರೆಂದು ಇಲ್ಲಿ ಹೆಸರಿಸುವುದು ಬೇಡ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇದನ್ನೆಲ್ಲ ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವಂಥ ಮನುಷ್ಯ ಅಮಿತ್ ಶಾ ಅಲ್ಲವೇ ಅಲ್ಲ. ಉತ್ತರ ಕರ್ನಾಟಕದ ಲಿಂಗಾಯತ ಮತಗಳನ್ನು ಉಳಿಸಿಕೊಳ್ಳುವುದು ಹೇಗೆ, ಹಿಂದೆ ತಾವು ನೆಚ್ಚಿಕೊಂಡಿದ್ದ ಲಿಂಗಾಯತ ಮತಗಳು ಯಡಿಯೂರಪ್ಪನವರ ಮಡಿಲಿಗೆ ಹಾಕುವುದು ಹೇಗೆ ಎಂದು ತಲೆಕೆಡಿಸಿಕೊಂಡು ಕುಳಿತಿರುತ್ತಾರೆ, ಸಮಸ್ಯೆಗೆ ಪರಿಹಾರವನ್ನೂ ಹುಡುಕಿರುತ್ತಾರೆ.
ಅಂದ ಹಾಗೆ, ಸೋಮವಾರ ಮತ್ತು ಮಂಗಳವಾರ, ಮಾರ್ಚ್ 26 ಮತ್ತು 27ರಂದು ಅವರು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲಿರುವ ಲಿಂಗಾಯತ ಮಠಗಳಿಗೆ ಭೇಟಿ ನೀಡುವ ಯೋಜನೆ ರೂಪಿಸಿಕೊಂಡಿದ್ದಾರೆ. ಯಾರ ಕೈ ಮೇಲಾಗಲಿದೆ? ಸಿದ್ದರಾಮಯ್ಯನವರದಾ, ಅಮಿತ್ ಶಾ ಅವರದಾ?
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications