ಚರ್ಚೆ : ಲಿಂಗಾಯತರ ಮತ ಯಾವ ಪಕ್ಷಕ್ಕೆ ಬೀಳಲಿವೆ?
ಲಿಂಗಾಯತ ಪಂಗಡಕ್ಕೆ ಪ್ರತ್ಯೇಕ ಧರ್ಮದ ಅಸ್ವಿತ್ವ ನೀಡಬೇಕೆಂದು ರಾಜ್ಯ ಸರಕಾರ ಶಿಫಾರಸು ಮಾಡಿದಂದಿನಿಂದ ಕರ್ನಾಟಕದ ಚುನಾವಣಾ ಕಣದಲ್ಲಿ ವಿಚಿತ್ರ ಸನ್ನಿವೇಶ ಸೃಷ್ಟಿಯಾಗಿದೆ. ಅದನ್ನು ಅವರವರ ಭಾವಕ್ಕೆ ತಕ್ಕಂತೆ ಅರ್ಥೈಸಿಕೊಳ್ಳಬಹುದು.
ಅದೇನೆಂದರೆ, ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕೊಡಬೇಕೆಂದ ಮಾತ್ರಕ್ಕೆ ಲಿಂಗಾಯತರು ಕಾಂಗ್ರೆಸ್ಸಿಗೆ ಮತ ಹಾಕಬೇಕಾ ಅಥವಾ ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿರುವ ಬಿಜೆಪಿಗೆ ಹಾಕಬೇಕಾ ಅಥವಾ ಪಕ್ಷನಿಷ್ಠೆಗಿಂತ ವ್ಯಕ್ತಿನಿಷ್ಠೆಯನ್ನು ನೋಡಿ ಮತ ಹಾಕಬೇಕಾ ಎನ್ನುವುದು.
ಮತ ಹಾಕುವುದು ಅತ್ಲಾಗಿರಲಿ, ತಮಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಸಿಗಬೇಕಾ, ಅಲ್ಪಸಂಖ್ಯಾತರಾಗಿ ಮೀಸಲಾತಿಯ ಹಂಗಿಗೆ ಬೀಳಬೇಕಾ, ರಾಜಕಾರಣಿಗಳ ಹುಚ್ಚಾಟಕ್ಕೆ ನಾವು ಬಲಿಯಾಗಬೇಕಾ, ವೀರಶೈವರನ್ನು ಹೊರಗಿಡಬೇಕಾ ಎಂಬಿತ್ಯಾದಿ ಗೊಂದಲಗಳು ಲಿಂಗಾಯತರಲ್ಲಿಯೂ ಸಾಕಷ್ಟಿವೆ.

ಲಿಂಗಾಯತರಿಗೆ ಪ್ರತ್ಯೇಕ ಅಸ್ವಿತ್ವ ದೊರಕಿಸಿಕೊಟ್ಟಿದ್ದೇವೆ, ಹೇಗಿದ್ದರೂ ಲಿಂಗಾಯತ ಮತಗಳು ತಮಗೇ ಬೀಳುತ್ತವೆ ಎಂಬ ಅಹಮ್ಮಿಕೆಯಲ್ಲಿ ಕಾಂಗ್ರೆಸ್ಸಿನ ಹಲವಾರು ನಾಯಕರು ಈಗಾಗಲೆ ಮನದಲ್ಲಿಯೇ ಮಂಡಿಗೆ ತಿನ್ನುತ್ತಿದ್ದಾರೆ. ಅವರಲ್ಲಿ ಕೆಲವರು ಮುಖ್ಯಮಂತ್ರಿಯ ಕುರ್ಚಿಯ ಮೇಲೆ ಕುಳಿತಂತೆಯೂ ಕನಸು ಕಾಣಲು ಆರಂಭಿಸಿದ್ದಾರೆ. ಅವರು ಯಾರೆಂದು ಇಲ್ಲಿ ಹೆಸರಿಸುವುದು ಬೇಡ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇದನ್ನೆಲ್ಲ ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವಂಥ ಮನುಷ್ಯ ಅಮಿತ್ ಶಾ ಅಲ್ಲವೇ ಅಲ್ಲ. ಉತ್ತರ ಕರ್ನಾಟಕದ ಲಿಂಗಾಯತ ಮತಗಳನ್ನು ಉಳಿಸಿಕೊಳ್ಳುವುದು ಹೇಗೆ, ಹಿಂದೆ ತಾವು ನೆಚ್ಚಿಕೊಂಡಿದ್ದ ಲಿಂಗಾಯತ ಮತಗಳು ಯಡಿಯೂರಪ್ಪನವರ ಮಡಿಲಿಗೆ ಹಾಕುವುದು ಹೇಗೆ ಎಂದು ತಲೆಕೆಡಿಸಿಕೊಂಡು ಕುಳಿತಿರುತ್ತಾರೆ, ಸಮಸ್ಯೆಗೆ ಪರಿಹಾರವನ್ನೂ ಹುಡುಕಿರುತ್ತಾರೆ.
ಅಂದ ಹಾಗೆ, ಸೋಮವಾರ ಮತ್ತು ಮಂಗಳವಾರ, ಮಾರ್ಚ್ 26 ಮತ್ತು 27ರಂದು ಅವರು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲಿರುವ ಲಿಂಗಾಯತ ಮಠಗಳಿಗೆ ಭೇಟಿ ನೀಡುವ ಯೋಜನೆ ರೂಪಿಸಿಕೊಂಡಿದ್ದಾರೆ. ಯಾರ ಕೈ ಮೇಲಾಗಲಿದೆ? ಸಿದ್ದರಾಮಯ್ಯನವರದಾ, ಅಮಿತ್ ಶಾ ಅವರದಾ?
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications