ಪ್ರಮುಖ ಅಂಶಗಳು: ಕೊವಿಡ್-19 ನಿಯಂತ್ರಣ ಸಭೆಯಲ್ಲಿ ಚರ್ಚಿಸಿದ ವಿಷಯ

ಬೆಂಗಳೂರು, ಜನವರಿ 7: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವುದು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಶುಕ್ರವಾರ ನಡೆದ ಕೊವಿಡ್-19 ಸಭೆಯಲ್ಲಿ ಚರ್ಚೆಯಾದ ಪ್ರಮುಖ ವಿಷಯಗಳು, ಕೊರೊನಾವೈರಸ್ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೂ ಮೂಲಕ ಮಾಹಿತಿ ನೀಡಿದ್ದಾರೆ.

Dr K Sudhakar Chaired meeting with officials over steps to control covid-19 in karnataka

ಕೊವಿಡ್-19 ನಿಯಂತ್ರಣ ಸಭೆಯಲ್ಲಿನ ಪ್ರಮುಖ ವಿಷಯಗಳು:

* ಅಂತರರಾಜ್ಯ ಪ್ರಯಾಣಿಕರ ತಪಾಸಣೆ

* ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಲಸಿಕೆ ಪ್ರಮಾಣಪತ್ರ ಕಡ್ಡಾಯ ಮಾಡುವುದು.

* ಕೊವಿಡ್ ಕೇರ್ ಸೆಂಟರ್ ಗಳ ಸ್ಥಾಪನೆ.

* ಆಸ್ಪತ್ರೆ ದಾಖಲಾತಿ ಅಗತ್ಯತೆ ತಿಳಿಯಲು ಭೌತಿಕ ಅಥವಾ ಟೆಲಿ ಟ್ರಯಾಜಿಂಗ್.

* ಕೊವಿಡ್ ಕೇರ್ ಸೆಂಟರ್ ಹಾಗೂ ಟ್ರಯಾಜಿಂಗ್ ಗೆ ವೈದ್ಯಕೀಯ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಸೇವೆ ಬಳಕೆ.

* ಕೊವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಹೋಟೆಲ್ ಗಳ ಜೊತೆ ಒಪ್ಪಂದ.

* ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಮೀಸಲಾತಿ.

* ಹಾಸಿಕೆ ನಿರ್ವಹಣೆ ಹಾಗೂ ಹಂಚಿಕೆ.

* ಏಕರೂಪ ಚಿಕಿತ್ಸೆ, ಡಿಸ್ಚಾರ್ಜ್ ನೀತಿ ಹಾಗೂ ಕ್ವಾರಂಟೈನ್ ಮಾರ್ಗಸೂಚಿ.

* ಮುನ್ನೆಚ್ಚರಿಕೆಗಳು ಹಾಗೂ ಲಸಿಕೆ ಬಗ್ಗೆ ಅರಿವು ಮೂಡಿಸುವ ಅಭಿಯಾನ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+