10 ರಾಜ್ಯಗಳ 13 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ
ನವದೆಹಲಿ, ಮೇ 30 : ಕರ್ನಾಟಕದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆ ಮತ್ತು ದೇಶದ ಇತರ ರಾಜ್ಯಗಳಲ್ಲಿ 4 ಲೋಕಸಭೆ ಮತ್ತು 9 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಗುರುವಾರ, ಮೇ 31ರಂದು ಬೆಳಿಗ್ಗೆ 8 ಗಂಟೆಯಿಂದ ಪ್ರಕಟವಾಗುತ್ತಿದೆ.
ರಾಜರಾಜೇಶ್ವರಿ ನಗರದಲ್ಲಿ ಮೈತ್ರಿಕೂಟದ ಅಂಗಪಕ್ಷಗಳಾದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟುಕೊಂಡು ಜಿದ್ದಾಜಿದ್ದಿ ಕಣಕ್ಕಿಳಿದಿದ್ದರು. ಕರ್ನಾಟಕದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಪ್ರಮುಖವಾಗಿದೆ. ಇಬ್ಬರಲ್ಲೊಬ್ಬರು ಗೆದ್ದರೂ ಅಷ್ಟೇ ಸೋತರೂ ಅಷ್ಟೆ, ಗೆಲುವು-ಸೋಲು ಮೈತ್ರಿಕೂಟಕ್ಕೇ.
ಅಂದುಕೊಂಡಂತೆ ಕಾಂಗ್ರೆಸ್ಸಿನ ಮುನಿರತ್ನ ನಾಯ್ಡು ಅವರು ಗೆಲುವಿನ ಸನಿಹದಲ್ಲಿದ್ದು, ಬಿಜೆಪಿಯ ಮುನಿರಾಜು ಅವರು ಎರಡನೇ ಸ್ಥಾನದಲ್ಲಿ ಮತ್ತು ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರು ಮೂರನೇ ಸ್ಥಾನದಲ್ಲಿ ಇದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿದ್ದ ಹುಚ್ಚ ವೆಂಕಟ್ ಅವರು ನೋಟಾಗಿಂತಲೂ ಕಡಿಮೆ ಮತಗಳನ್ನು ಪಡೆದಿದ್ದಾರೆ.
ಈ ಎಲ್ಲ ಕ್ಷೇತ್ರಗಳಿಗೆ ಮೇ 28ರಂದು ಸೋಮವಾರ ಮತದಾನ ನಡೆದಿತ್ತು. ಭಾರತೀಯ ಜನತಾ ಪಕ್ಷಕ್ಕೆ ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಕ್ಷೇತ್ರ ಭಾರೀ ಪ್ರತಿಷ್ಠೆಯ ಕಣವಾಗಿದೆ. ಏಕೆಂದರೆ, ಗೋರಖಪುರ ಮತ್ತು ಫುಲಪುರ ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ ಅವಮಾನಕರ ಸೋಲು ಕಂಡಿತ್ತು ಮತ್ತು ಎಸ್ಪಿ-ಬಿಎಸ್ಪಿ ಮೈತ್ರಿಕೂಟ ಜಯಭೇರಿ ಬಾರಿಸಿತ್ತು. ಹೀಗಾಗಿ ಕೈರಾನಾ ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕಾಗಿದೆ.

ಈ ಎಲ್ಲ ಕ್ಷೇತ್ರಗಳ ಫಲಿತಾಂಶವನ್ನು ಒನ್ಇಂಡಿಯಾ ಕನ್ನಡದಲ್ಲಿ ಮೇ 31ರ ಬೆಳಿಗ್ಗೆ 8 ಗಂಟೆಯಿಂದ ನೋಡಬಹುದಾಗಿದೆ. ಯಾರು ಮುನ್ನಡೆ ಸಾಧಿಸಿದ್ದಾರೆ, ಯಾರು ಹಿನ್ನಡೆ ಕಂಡಿದ್ದಾರೆ, ಟ್ರೆಂಡ್ ಯಾವ ರೀತಿಯಿದೆ, ಗೆದ್ದವರಾರು, ಬಿದ್ದವರಾರು ಇತ್ಯಾದಿ ಕ್ಷಣಕ್ಷಣದ ಮಾಹಿತಿಯನ್ನು ಅಂಕಿಅಂಶಗಳ ಜೊತೆ ಒನ್ಇಂಡಿಯಾ ನಿಮಗಾಗಿ ತರುತ್ತಿರುತ್ತದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications