10 ರಾಜ್ಯಗಳ 13 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ
ನವದೆಹಲಿ, ಮೇ 30 : ಕರ್ನಾಟಕದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆ ಮತ್ತು ದೇಶದ ಇತರ ರಾಜ್ಯಗಳಲ್ಲಿ 4 ಲೋಕಸಭೆ ಮತ್ತು 9 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಗುರುವಾರ, ಮೇ 31ರಂದು ಬೆಳಿಗ್ಗೆ 8 ಗಂಟೆಯಿಂದ ಪ್ರಕಟವಾಗುತ್ತಿದೆ.
ರಾಜರಾಜೇಶ್ವರಿ ನಗರದಲ್ಲಿ ಮೈತ್ರಿಕೂಟದ ಅಂಗಪಕ್ಷಗಳಾದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟುಕೊಂಡು ಜಿದ್ದಾಜಿದ್ದಿ ಕಣಕ್ಕಿಳಿದಿದ್ದರು. ಕರ್ನಾಟಕದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಪ್ರಮುಖವಾಗಿದೆ. ಇಬ್ಬರಲ್ಲೊಬ್ಬರು ಗೆದ್ದರೂ ಅಷ್ಟೇ ಸೋತರೂ ಅಷ್ಟೆ, ಗೆಲುವು-ಸೋಲು ಮೈತ್ರಿಕೂಟಕ್ಕೇ.
ಅಂದುಕೊಂಡಂತೆ ಕಾಂಗ್ರೆಸ್ಸಿನ ಮುನಿರತ್ನ ನಾಯ್ಡು ಅವರು ಗೆಲುವಿನ ಸನಿಹದಲ್ಲಿದ್ದು, ಬಿಜೆಪಿಯ ಮುನಿರಾಜು ಅವರು ಎರಡನೇ ಸ್ಥಾನದಲ್ಲಿ ಮತ್ತು ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರು ಮೂರನೇ ಸ್ಥಾನದಲ್ಲಿ ಇದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿದ್ದ ಹುಚ್ಚ ವೆಂಕಟ್ ಅವರು ನೋಟಾಗಿಂತಲೂ ಕಡಿಮೆ ಮತಗಳನ್ನು ಪಡೆದಿದ್ದಾರೆ.
ಈ ಎಲ್ಲ ಕ್ಷೇತ್ರಗಳಿಗೆ ಮೇ 28ರಂದು ಸೋಮವಾರ ಮತದಾನ ನಡೆದಿತ್ತು. ಭಾರತೀಯ ಜನತಾ ಪಕ್ಷಕ್ಕೆ ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಕ್ಷೇತ್ರ ಭಾರೀ ಪ್ರತಿಷ್ಠೆಯ ಕಣವಾಗಿದೆ. ಏಕೆಂದರೆ, ಗೋರಖಪುರ ಮತ್ತು ಫುಲಪುರ ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ ಅವಮಾನಕರ ಸೋಲು ಕಂಡಿತ್ತು ಮತ್ತು ಎಸ್ಪಿ-ಬಿಎಸ್ಪಿ ಮೈತ್ರಿಕೂಟ ಜಯಭೇರಿ ಬಾರಿಸಿತ್ತು. ಹೀಗಾಗಿ ಕೈರಾನಾ ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕಾಗಿದೆ.

ಈ ಎಲ್ಲ ಕ್ಷೇತ್ರಗಳ ಫಲಿತಾಂಶವನ್ನು ಒನ್ಇಂಡಿಯಾ ಕನ್ನಡದಲ್ಲಿ ಮೇ 31ರ ಬೆಳಿಗ್ಗೆ 8 ಗಂಟೆಯಿಂದ ನೋಡಬಹುದಾಗಿದೆ. ಯಾರು ಮುನ್ನಡೆ ಸಾಧಿಸಿದ್ದಾರೆ, ಯಾರು ಹಿನ್ನಡೆ ಕಂಡಿದ್ದಾರೆ, ಟ್ರೆಂಡ್ ಯಾವ ರೀತಿಯಿದೆ, ಗೆದ್ದವರಾರು, ಬಿದ್ದವರಾರು ಇತ್ಯಾದಿ ಕ್ಷಣಕ್ಷಣದ ಮಾಹಿತಿಯನ್ನು ಅಂಕಿಅಂಶಗಳ ಜೊತೆ ಒನ್ಇಂಡಿಯಾ ನಿಮಗಾಗಿ ತರುತ್ತಿರುತ್ತದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications