ಉಪ್ಪಿ ಶುರು ಮಾಡುತ್ತಿದ್ದಾರೆ 'ಉತ್ತಮ ಪ್ರಜಾಕೀಯ ಪಾರ್ಟಿ'
ಬೆಂಗಳೂರು, ಏಪ್ರಿಲ್ 25: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ (ಕೆಪಿಜೆಪಿ) ಹೊರಬಂದ ನಟ ಉಪೇಂದ್ರ ನಡೆ ಕುತೂಹಲ ಮೂಡಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸಾಹದೊಂದಿಗೆ ವಿವಿಧ ಕ್ಷೇತ್ರಗಳಿಗೆ ಪ್ರವಾಸ ಮಾಡಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದ ಉಪೇಂದ್ರ, ಕೆಪಿಜೆಪಿ ಮೂಲಕ ರಾಜಕೀಯ ಬದಲಾವಣೆಯ ಪ್ರಯತ್ನದ ಕನಸುಗಳನ್ನು ಹಂಚಿಕೊಂಡಿದ್ದರು.
ಆದರೆ, ಉಪ್ಪಿ ಈಗ ಎಲ್ಲಿದ್ದಾರೆ? ಮತ್ತೆ ಸಿನಿಮಾಕ್ಕೆ ಮರಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಜತೆಗೆ ರಾಜಕೀಯದಲ್ಲಿಯೂ ಮುಂದುವರಿಯುವ ಸುಳಿವು ನೀಡಿದ್ದಾರೆ. ಸದ್ಯಕ್ಕೆ ಅವರೀಗ ದೆಹಲಿಯಲ್ಲಿದ್ದಾರೆ. ಅದೂ ರಾಜಕೀಯದ ಕೆಲಸಕ್ಕೆ.
ಹೌದು. ಉಪೇಂದ್ರ ರಾಜಕೀಯ ಸೇರ್ಪಡೆಯ ಆರಂಭದಿಂದಲೂ 'ಪ್ರಜಾಕೀಯ' ಪಕ್ಷದ ಹೆಸರು ಕೇಳಿಬರುತ್ತಿತ್ತು. ಈ ಹೆಸರನ್ನು ಅಪ್ಪಿಕೊಂಡಿರುವ ಉಪ್ಪಿ, 'ಉತ್ತಮ ಪ್ರಜಾಕೀಯ ಪಾರ್ಟಿ'ಯನ್ನು ಸ್ಥಾಪಿಸಲು ಮುಂದಾಗಿದ್ದಾರೆ.
At Delhi for “Utthama PRAJAAKEEYA Party “registration process..., pic.twitter.com/6nFWrzpjqy
— Upendra (@nimmaupendra) 25 April 2018
ದೆಹಲಿಯ ಕೇಂದ್ರ ಚುನಾವಣಾ ಆಯೋಗಕ್ಕೆ ತೆರಳಿರುವ ಉಪೇಂದ್ರ 'ಉತ್ತಮ ಪ್ರಜಾಕೀಯ ಪಾರ್ಟಿ'ಯ ನೋಂದಣಿ ಪ್ರಕ್ರಿಯೆ ನಡೆಸುತ್ತಿದ್ದಾರೆ.
ರಾಜಕೀಯವನ್ನು 'ಪ್ರಜಾಕೀಯ' ಎಂದು ಪರಿವರ್ತಿಸಿರುವ ಉಪೇಂದ್ರ, ಕೆಪಿಜೆಪಿ ಆರಂಭಿಸಿದ್ದಾಗಿನಿಂದಲೂ ರಾಜಕೀಯದಲ್ಲಿ ಆಗಬೇಕಾದ ಸ್ಥಿತ್ಯಂತರದ ಕುರಿತು ಸುದೀರ್ಘ ಕನಸುಗಳನ್ನು ಹಂಚಿಕೊಂಡಿದ್ದರು. ಅವರ ಮಾತುಗಳು ಸಿನಿಮಾ ಸಂಭಾಷಣೆಯ ಧಾಟಿಯಲ್ಲಿಯೇ ಇದ್ದವು. ಕೊನೆಗೆ ತಮ್ಮದೇ ಪಕ್ಷದಿಂದ ತಾವೇ ಹೊರಬೇಕಾದ 'ದುರಂತ ನಾಯಕ'ನಂತೆಯೂ ಕಂಡಿದ್ದರು.
ಪಕ್ಷ ಸ್ಥಾಪನೆ ಬಳಿಕ ಮುಂದೇನು?
ಕೆಪಿಜೆಪಿಯಿಂದ ಹೊರಬಂದ ಬಳಿಕ ಉಪೇಂದ್ರ ಮುಂದಿನ ನಡೆ ಏನೆಂಬುದು ಗುಪ್ತವಾಗಿತ್ತು. ಆದರೆ, ರಾಜಕೀಯದಿಂದ ಹೊರಬರುವುದಿಲ್ಲ ಎಂಬ ಸುಳಿವು ನೀಡಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸಾಹ ಹೊಂದಿದ್ದ ಉಪೇಂದ್ರ, ಈಗ ಆ ಅವಕಾಶ ಹೊಂದಿಲ್ಲ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇದ್ದ ಅಂತಿಮ ದಿನಾಂಕ ಏಪ್ರಿಲ್ 24 (ಮಂಗಳವಾರ) ಅಂತ್ಯಗೊಂಡಿದೆ. ಹೀಗಾಗಿ ಹೊಸ ಪಕ್ಷ ಸ್ಥಾಪಿಸಿದರೂ ಉಪೇಂದ್ರ ಈ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಯಲು ಸಾಧ್ಯವಿಲ್ಲ.
ಹೊಸ ಪಕ್ಷ ಆರಂಭಿಸಲಿರುವ ಉಪೇಂದ್ರ, ಪಕ್ಷ ಸಂಘಟನೆಯ ಚಟುವಟಿಕೆಗೆ ಮುಂದಾಗಬೇಕಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂಬ ಕಾರಣಕ್ಕೆ ಉಪೇಂದ್ರ ಅವರೊಂದಿಗೆ ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ಮುನಿಸಿಕೊಂಡಿದ್ದರು. ಈಗ ತಮ್ಮದೇ ಪಕ್ಷ ಸ್ಥಾಪಿಸುತ್ತಿರುವ ಉಪ್ಪಿ, ಮುಂದೆ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂಬುದು ಮುಂದಿರುವ ಕುತೂಹಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications