ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎನ್ನುವವರೇ ಹೆಚ್ಚು
Recommended Video
ಬೆಂಗಳೂರು, ಏಪ್ರಿಲ್ 13: ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ.
ಇಂಡಿಯಾ ಟುಡೆ-ಕಾರ್ವಿ ಸಂಸ್ಥೆಯು ಹಲವು ಆಯಾಮಗಳ ಮೂಲಕ ಸಮೀಕ್ಷೆ ನಡೆಸಿದ್ದು, ಸರ್ಕಾರದ ಸಾಧನೆಯ ತೃಪ್ತಿ, ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದರ ಬಗ್ಗೆಯೂ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಮರ ಹೆಚ್ಚು ಒಲವು ವ್ಯಕ್ತವಾಗಿವೆ.
ಸಮೀಕ್ಷೆ 2018 : ಇಂಡಿಯಾ ಟುಡೇ ಅಭಿಮತ, ವಿಧಾನಸಭೆ ಅತಂತ್ರ
ರಾಜ್ಯದ ಶೇ 33ರಷ್ಟು ಮಂದಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ. ಯಡಿಯೂರಪ್ಪ ಅವರ ಪರ 26%, ಮತ್ತು ಜೆಡಿಎಸ್ನ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿ ಎಂದು 21% ಬಯಸಿದ್ದಾರೆ. ಇವರನ್ನು ಹೊರತು ಪಡಿಸಿ ಜಗದೀಶ್ ಶೆಟ್ಟರ್ ಅವರ ಪರ 4%, ಅನಂತಕುಮಾರ್ ಹೆಗಡೆ ಪರ 2% ಅಭಿಪ್ರಾಯಪಟ್ಟಿದ್ದಾರೆ.
ಇಂಡಿಯಾ ಟುಡೆ ಅವರ ಸಮೀಕ್ಷೆ ಅವರ ಪ್ರಕಾರ ಸಿದ್ದರಾಮಯ್ಯ ಅವರ ಬಾಯಿಗೆ ಲಾಡು ಬಿದ್ದಿದೆ, ಆದರೆ ಜನರ ಅಭಿಪ್ರಾಯಗಳು ಮತಗಳಾಗಿ ಬದಲಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.