ಸಮೀಕ್ಷೆ ಪ್ರಕಾರ ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ.1
Recommended Video

ಬೆಂಗಳೂರು, ಏಪ್ರಿಲ್ 13: ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ-ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಪ್ರಕಟವಾಗಿದೆ. ಅದರ ಪ್ರಕಾರ ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ.1 ಅಂತೆ.
ಸಿದ್ದರಾಮಯ್ಯ ಅವರು ಬರ ನಿರ್ವಹಣೆ ಮಾಡಿದ ರೀತಿ ನಿಮಗೆ ತೃಪ್ತಿ ತಂದಿದೆಯೇ? ಎಂದು ಇಂಡಿಯಾ ಟುಡೆ-ಕಾರ್ವಿ ಸಮೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ 39% ಜನ ಉತ್ತಮವಾಗಿ ನಿಭಾಯಿಸಿದ್ದಾರೆ ಎಂದಿದ್ದಾರೆ.

39% ತೃಪ್ತಿಯಾಗಿದೆ ಎಂದರೆ, 26% ಪ್ರತಿಕ್ರಿಯೆಯನ್ನೇ ನೀಡಿಲ್ಲ, 18% ಜನಕ್ಕೆ ಸಮಾಧಾನವಾಗಿಲ್ಲ, 10% ಅತ್ಯುತ್ತಮವಾಗಿ ನಿಭಾಯಿಸಿದ್ದಾರೆ ಎಂದಿದ್ದಾರೆ. 7% ಕಳಪೆಯಾಗಿ ನಿಭಾಯಿಸಿದರು ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಸೂಕ್ಷ್ಮವಾಗಿ ಗಮನಿಸಿದಲ್ಲಿ ಸಿದ್ದರಾಮಯ್ಯ ಅವರ ಸಮಯದಲ್ಲಿ ಅತಿಯಾದ ಬರವೇನೂ ಕಾಡಲಿಲ್ಲ, ಅದೂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಕಾಡಿದ ಯಮ ಬರ ಸಿದ್ದರಾಮಯ್ಯ ಅವರಿಗೆ ಒಕ್ಕರಿಸಲಿಲ್ಲ, ಪೃಕೃತಿ ಸಿದ್ದರಾಮಯ್ಯ ಅವರ ಪರವೇ ಇತ್ತು. ಆದರೆ ಕಾಡಿದ ಅಲ್ಪ ಬರವನ್ನು ಅವರು ಉತ್ತಮವಾಗಿಯೇ ನಿರ್ವಹಿಸಿದ್ದರು.
ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಕಾಡಿದ ಬರ ಮುಖ್ಯಮಂತ್ರಿಯನ್ನೇ ಬದಲಾಯಿಸುವಂತೆ ಮಾಡಿಬಿಟ್ಟಿತ್ತು. ಅದೇ ಸಮಯದಲ್ಲಿ ಕಾವೇರಿ ತೀರ್ಪು ಸಹ ರಾಜ್ಯಕ್ಕೆ ವ್ಯತಿರಿಕ್ತವಾಗಿ ಬಂದಿದ್ದು, ಬರದ ಮೇಲೆ ಬರೆ ಎಳೆದಂತಾಗಿತ್ತು. ಆದರೆ ಸಿದ್ದರಾಮಯ್ಯ ಅವರಿಗೆ ಅಂತಹಾ ಸ್ಥಿತಿ ಬರಲಿಲ್ಲ.
ಅದರಲ್ಲಿಯೂ ಸಿದ್ದರಾಮಯ್ಯ ಅವರು ಕೃಷಿಭಾಗ್ಯದ ಮೂಲಕ ಸಾಕಷ್ಟು ಸವಲತ್ತುಗಳನ್ನು ರೈತರಿಗೆ ಒದಗಿಸಿದರು, ಅದರಲ್ಲೂ ಕೃಷಿ ಹೊಂಡ, ಬದು ನಿರ್ಮಾಣ ಮುಂತಾದವುಗಳಿಗೆ ಹೆಚ್ಚಿನ ಒತ್ತು ನೀಡಿ ಬರ ನಿರ್ವಹಿಸುವ ಶಕ್ತಿಯನ್ನು ತುಂಬುವ ಕೆಲಸ ಮಾಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications