ಸಮೀಕ್ಷೆ ಪ್ರಕಾರ ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ.1
Recommended Video

ಬೆಂಗಳೂರು, ಏಪ್ರಿಲ್ 13: ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ-ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಪ್ರಕಟವಾಗಿದೆ. ಅದರ ಪ್ರಕಾರ ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ.1 ಅಂತೆ.
ಸಿದ್ದರಾಮಯ್ಯ ಅವರು ಬರ ನಿರ್ವಹಣೆ ಮಾಡಿದ ರೀತಿ ನಿಮಗೆ ತೃಪ್ತಿ ತಂದಿದೆಯೇ? ಎಂದು ಇಂಡಿಯಾ ಟುಡೆ-ಕಾರ್ವಿ ಸಮೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ 39% ಜನ ಉತ್ತಮವಾಗಿ ನಿಭಾಯಿಸಿದ್ದಾರೆ ಎಂದಿದ್ದಾರೆ.

39% ತೃಪ್ತಿಯಾಗಿದೆ ಎಂದರೆ, 26% ಪ್ರತಿಕ್ರಿಯೆಯನ್ನೇ ನೀಡಿಲ್ಲ, 18% ಜನಕ್ಕೆ ಸಮಾಧಾನವಾಗಿಲ್ಲ, 10% ಅತ್ಯುತ್ತಮವಾಗಿ ನಿಭಾಯಿಸಿದ್ದಾರೆ ಎಂದಿದ್ದಾರೆ. 7% ಕಳಪೆಯಾಗಿ ನಿಭಾಯಿಸಿದರು ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಸೂಕ್ಷ್ಮವಾಗಿ ಗಮನಿಸಿದಲ್ಲಿ ಸಿದ್ದರಾಮಯ್ಯ ಅವರ ಸಮಯದಲ್ಲಿ ಅತಿಯಾದ ಬರವೇನೂ ಕಾಡಲಿಲ್ಲ, ಅದೂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಕಾಡಿದ ಯಮ ಬರ ಸಿದ್ದರಾಮಯ್ಯ ಅವರಿಗೆ ಒಕ್ಕರಿಸಲಿಲ್ಲ, ಪೃಕೃತಿ ಸಿದ್ದರಾಮಯ್ಯ ಅವರ ಪರವೇ ಇತ್ತು. ಆದರೆ ಕಾಡಿದ ಅಲ್ಪ ಬರವನ್ನು ಅವರು ಉತ್ತಮವಾಗಿಯೇ ನಿರ್ವಹಿಸಿದ್ದರು.
ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಕಾಡಿದ ಬರ ಮುಖ್ಯಮಂತ್ರಿಯನ್ನೇ ಬದಲಾಯಿಸುವಂತೆ ಮಾಡಿಬಿಟ್ಟಿತ್ತು. ಅದೇ ಸಮಯದಲ್ಲಿ ಕಾವೇರಿ ತೀರ್ಪು ಸಹ ರಾಜ್ಯಕ್ಕೆ ವ್ಯತಿರಿಕ್ತವಾಗಿ ಬಂದಿದ್ದು, ಬರದ ಮೇಲೆ ಬರೆ ಎಳೆದಂತಾಗಿತ್ತು. ಆದರೆ ಸಿದ್ದರಾಮಯ್ಯ ಅವರಿಗೆ ಅಂತಹಾ ಸ್ಥಿತಿ ಬರಲಿಲ್ಲ.
ಅದರಲ್ಲಿಯೂ ಸಿದ್ದರಾಮಯ್ಯ ಅವರು ಕೃಷಿಭಾಗ್ಯದ ಮೂಲಕ ಸಾಕಷ್ಟು ಸವಲತ್ತುಗಳನ್ನು ರೈತರಿಗೆ ಒದಗಿಸಿದರು, ಅದರಲ್ಲೂ ಕೃಷಿ ಹೊಂಡ, ಬದು ನಿರ್ಮಾಣ ಮುಂತಾದವುಗಳಿಗೆ ಹೆಚ್ಚಿನ ಒತ್ತು ನೀಡಿ ಬರ ನಿರ್ವಹಿಸುವ ಶಕ್ತಿಯನ್ನು ತುಂಬುವ ಕೆಲಸ ಮಾಡಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications