ಟೈಮ್ಸ್ ನೌ ಸಮೀಕ್ಷೆ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ
ಕರ್ನಾಟಕ ವಿಧಾನಸಭೆ ಚುನಾವಣೆ 2018 ರಲ್ಲಿ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷ ಕಾಂಗ್ರೆಸ್ ಆಗಲಿದೆಯಾದರೂ ಅತಂತ್ರ ಸರ್ಕಾರ ನಿರ್ಮಾಣವಾಗುತ್ತದೆ ಎಂದು ಟೌಮ್ಸ್ ನೌ ವಾಹಿನಿಯ ನಡೆಸಿರುವ ಸಮೀಕ್ಷೆ ಹೇಳುತ್ತಿದೆ.
ಟೈಮ್ಸ್ ನೌ ಸುದ್ದಿ ವಾಹಿನಿಯು ಕರ್ನಾಟಕ ಚುನಾವಣೆಯ ಕುರಿತು ಮಾಡಿರುವ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ಗೆ 91 ಸೀಟುಗಳು ದೊರಕುತ್ತಿದ್ದರೆ, ಬಿಜೆಪಿ 89 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಹಾಗೂ 4 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ.
ಇಂದೇ ಎಬಿಪಿ ನ್ಯೂಸ್ ಸಿಎಸ್ಡಿಎಸ್ ಸಮೀಕ್ಷೆ ಸಹ ಹೊರಬಿದ್ದಿದ್ದು ಆ ಸಮೀಕ್ಷೆಯ ಪ್ರಕಾರವೂ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ.
ಟೈಮ್ಸ್ ನೌ ಸಂಸ್ಥೆಯು ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಕರ್ನಾಟಕ, ಹಳೆ ಮೈಸೂರು ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ಬೆಂಗಳೂರು ವಿಭಾಗಗಳಲ್ಲಿ ಸಮೀಕ್ಷೆ ನಡೆಸಿದ್ದು ಪ್ರತಿಯೊಂದು ಭಾಗದಲ್ಲಿ ಯಾವ ಪಕ್ಷ ಹೆಚ್ಚು ಸೀಟು ಗಳಿಸಲಿದೆ ಎಂಬುದನ್ನು ಊಹಿಸಿದೆ.\

ಹೈ-ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಎರಡನೇ ಸ್ಥಾನ
ಹೈದರಾಬಾದ್ ಕರ್ನಾಟಕ ಕಾಂಗ್ರೆಸ್ ಕೋಟೆ ಎನ್ನಲಾಗುತ್ತದೆಯಾದರೂ ಸಮೀಕ್ಷೆ ಪ್ರಕಾರ ಅಲ್ಲಿ ಈ ಬಾರಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಹೈ-ಕರ್ನಾಟಕದಲ್ಲಿ ಬಿಜೆಪಿಗೆ 15 ಸೀಟು ಪ್ರಾಪ್ತವಾದರೆ, ಕಾಂಗ್ರೆಸ್ಗೆ 12, ಜೆಡಿಎಸ್ಗೆ 3 ಹಾಗೂ ಜೆಡಿಎಸ್ಗೆ 1 ಸೀಟು ದೊರಕಲಿದೆ.

ಬಿಜೆಪಿಯ ಬಿಟ್ಟು ಕೈ ಹಿಡಿದ ಕರಾವಳಿ
ಬಿಜೆಪಿಯ ಬೆಲ್ಟ್ ಎನ್ನಲಾಗುವ ಕರಾವಳಿ ಕರ್ನಾಟಕ ಕಾಂಗ್ರೆಸ್ ಅನ್ನು ಒಪ್ಪಿಕೊಂಡಿದೆ ಎನ್ನುತ್ತಿದೆ ಟೈಮ್ಸ್ ನೌ ಸಮೀಕ್ಷೆ. ಈ ಭಾಗದಲ್ಲಿ ಕಾಂಗ್ರೆಸ್ಗೆ 11 ಸೀಟು ದೊರಕಲಿದರೆ ಬಿಜೆಪಿಗೆ 8 ಹಾಗೂ ಜೆಡಿಎಸ್ ಎರಡು ಸೀಟು ಗೆಲ್ಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.

ಬಿಜೆಪಿಗೆ ಹೆಚ್ಚಿನ ಮುನ್ನಡೆ ಕೊಡುವ ಮುಂಬೈ ಕರ್ನಾಟಕ
ಬಿಜೆಪಿಗೆ ಹೆಚ್ಚಿನ ಮುನ್ನಡೆ ದೊರಕಿಸಿಕೊಡುವುದು ಮುಂಬೈ ಕರ್ನಾಟಕ. ಸಮೀಕ್ಷೆ ಪ್ರಕಾರ ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ 32 ಸ್ಥಾನ ಗೆದ್ದರೆ ಕಾಂಗ್ರೆಸ್ 21 ಸ್ಥಾನ ಹಾಗೂ ಜೆಡಿಎಸ್ 5, ಪಕ್ಷೇತರ ಅಭ್ಯರ್ಥಿ 1 ಸ್ಥಾನ ಜಯಿಸಲಿದ್ದಾರೆ.

ಬೆಂಗಳೂರಿಗರ ಪ್ರೀತಿ ಕಾಂಗ್ರೆಸ್ ಮೇಲೆ
ಪ್ರಮುಖ ರಾಜಕೀಯ ಕ್ಷೇತ್ರ ಬೆಂಗಳೂರಿನಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಎನ್ನುತ್ತಿದೆ ಟೌಮ್ಸ್ ನೌ ಸಮೀಕ್ಷೆ. ಕಾಂಗ್ರೆಸ್ 17 ಸೀಟು ಗೆದ್ದರೆ, ಬಿಜೆಪಿ 13, ಜೆಡಿಎಸ್ 2 ಸ್ಥಾನ ಗೆಲ್ಲಲಿದೆ ಎನ್ನುತ್ತಿದೆ ಸಮೀಕ್ಷೆ ವರದಿ.

ಹಳೆ ಮೈಸೂರು ಭಾಗ ಜೆಡಿಎಸ್ ಕೋಟೆ
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷದ್ದೇ ಪಾರುಪತ್ಯ. ಇಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲಲಿದೆ ಬಿಜೆಪಿ 8 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಲಿದೆ ಹಾಗೂ ಜೆಡಿಎಸ್ ಪಕ್ಷವು ಅತಿ ಹೆಚ್ಚು ಅಂದರೆ 25 ಸ್ಥಾನವನ್ನು ಈ ಭಾಗದಲ್ಲಿ ಗೆದ್ದುಕೊಳ್ಳಲಿದೆ. ಇಬ್ಬರು ಪಕ್ಷೇತರರು ಹಳೆ ಮೈಸೂರು ಭಾಗದಲ್ಲಿ ಗೆಲ್ಲಲಿದ್ದಾರೆ.

ಬಿಜೆಪಿ ಭಾರಿ ಮುನ್ನಡೆ
ಮಧ್ಯ ಕರ್ನಾಟಕ ಭಾಗದಲ್ಲಿ ಬಿಜೆಪಿ ಭಾರಿ ಮುನ್ನಡೆ ಗಳಿಸಲಿದೆ. ಬಿಜೆಪಿಯು ಇಲ್ಲಿ 22 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಕಾಂಗ್ರೆಸ್ ಪಕ್ಷವು 10 ಸೀಟು ಗೆಲ್ಲಲ್ಲಿದ್ದು, ಜೆಡಿಎಸ್ 3 ಕ್ಕೆ ತೃಪ್ತಿಪಟ್ಟುಕೊಳ್ಳಲಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications