ವಿವಾದ, ಹೋರಾಟದ ಮಿಶ್ರಣ: ಶೋಭಾ ಕರಂದ್ಲಾಜೆ ವ್ಯಕ್ತಿ ಚಿತ್ರ
Recommended Video

ಕರ್ನಾಟಕದಲ್ಲಿ ದಿಟ್ಟ ಮಹಿಳಾ ರಾಜಕಾರಣಿಗಳಿಲ್ಲ ಎಂಬ ಕೊರತೆಯನ್ನು ತುಂಬಿಸಿದವರಲ್ಲಿ ಶೋಭಾ ಕರಂದ್ಲಾಜೆ ಪ್ರಮುಖರು. ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಗುರುತರ ಜವಾಬ್ದಾರಿಯನ್ನು ಹೊತ್ತಿರುವ ಶೋಭಾ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದರೂ ಹೌದು. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತ, ಒಂದಷ್ಟು ದೌರ್ಬಲ್ಯಗಳಿಗೂ ಹೆಸರಾದವರು ಅವರು.
ಕ್ರಾಂತಿಕಾರಿ ನಾಯಕಿಯಾಗಿ ಗುರುತಿಸಿಕೊಂಡ ಶೋಭಾ ಅವರು ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತೆಯಾಗಿ, ಇದೀಗ ಸಂಸದರಾಗಿ, ಮಾಜಿ ಸಚಿವರಾಗಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳೆದುಬಂದ ಹಾದಿ ಸುದೀರ್ಘವಾದುದು. ಚಿಕ್ಕ ವಯಸ್ಸಿನಿಂದಲೂ ಅವರಲ್ಲಿದ್ದ ಹೋರಾಟದ ಮನಸ್ಥಿತಿಯೇ ಅವರು ಬಹುಬೇಗನೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುವುದಕ್ಕೆ ಸಹಾಯಕವಾಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೂ ಸಕ್ರಿಯವಾಗಿ ಗುರುತಿಸಿಕೊಂಡ ಶೋಭಾ ಕರಂದ್ಲಾಜೆಯವರ ಸಂಕ್ಷಿಪ್ತ ವ್ಯಕ್ತಿಚಿತ್ರ ಇಲ್ಲಿದೆ.
* 1966, ಅಕ್ಟೋಬರ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಎಂಬ ಪುಟ್ಟ ಗ್ರಾಮ.
* ತಂದೆ ಮೋನಪ್ಪ ಗೌಡ, ತಾಯಿ ಪೂವಕ್ಕ.
* ಎಳೆ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಒಡನಾಟ. ಪೂರ್ಣಾವಧಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಣೆ.
* ವಿದ್ಯಾರ್ಹತೆ: ಮಂಗಳೂರು ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ಸ್ ನಲ್ಲಿ ಸ್ನಾತಕೋತ್ತರ ಪದವಿ, ಮೈಸೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.
* ಕುಮಾರಧಾರ ನದಿಗೆ ಆಣೆಕಟ್ಟುವುದನ್ನು ವಿರೋಧಿಸಿ, ಪಶ್ಚಿಮ ಘಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವಂಥ ಯೋಜನೆಗಳನ್ನು ವಿರೋಧಿಸಿ ಹೋರಾಟ. ಕಾಲೇಜು ಓದುವ ಸಮಯದಲ್ಲೇ ಹಲವು ಸಮಾಜ ಸುಧಾರಣಾ ಹೋರಾಟಗಳಲ್ಲಿ ಭಾಗಿ.
* 1994 ರಲ್ಲಿ ಬಂಟ್ವಾಳ ವಿಧಾನಸಭೆಗೆ ಸ್ಪರ್ಧಿಸಿದ್ದ ಶಕುಂತಲಾ ಶೆಟ್ಟಿಯವರ ಒಡನಾಟದಿಂದ ರಾಜಕೀಯ ಪ್ರವೇಶ.
* 1997 ರಲ್ಲಿ ಉಡುಪಿ ಜಿಲ್ಲೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆ.
* 1997 ರಲ್ಲಿ ಬೆಂಗಳೂರು ಪ್ರವೇಶ.
* 1999 ರಲ್ಲಿ ಬಿ.ಎಸ್.ಯಡಿಯೂರಪ್ಪನವರ ಸಂಕಲ್ಪ ರಥಯಾತ್ರೆಯಲ್ಲಿ ಭಾಗಿ. ನಂತರ ಹಲವು ಹೋರಾಟ, ಪಾದಯಾತ್ರೆ, ಸತ್ಯಾಗ್ರಹ ನಡೆಸಿದ ಅನುಭವ.
* 2000 ನೇ ಇಸವಿಯಲ್ಲಿ ಬಿಜೆಪಿ ರಾಜ್ಯ ಕಾರ್ದರ್ಶಿಯಾಗಿ ಆಯ್ಕೆ.
* 2004 ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆ.
* 2008 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆ.
* ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಣೆ.
* ಮೈಸೂರು ಜಿಲ್ಲಾ ಉಸ್ತುವಅರಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ ಅನುಭವ
* 2009 ರಲ್ಲಿ ಕೆಲವು ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ.
* 2010 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಇಂಧನ ಸಚಿವೆಯಾಗಿ ಅಧಿಕಾರ ಸ್ವೀಕಾರ.
* 2012 ರಲ್ಲಿ ಬಿಜೆಪಿಯ ಕೆಲವು ನಾಯಕರೊಂದಿಗೆ ಭಿನ್ನಾಭಿಪ್ರಾಯ ಮೂಡಿ, ಬಿ ಎಸ್ ಯಡಿಯೂರಪ್ಪನವರು ಸ್ಥಾಪಿಸಿದ ಕರ್ನಾಟಕ ಜನತಾ ಪಕ್ಷ(ಕೆಜೆಪಿ)ಕ್ಕೆ ಸೇರ್ಪಡೆ.
* 2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಬಿಜೆಪಿಯ ಸುರೇಶ್ ಕುಮಾರ್ ವಿರುದ್ಧ ಸೋಲು.
* 2013 ರಲ್ಲಿ ಬಿಜೆಪಿಯೊಂದಿಗೆ ಕೆಜೆಪಿ ವಿಲೀನ.
* 2014 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗರಿಷ್ಠ ಮತಗಳ ಅಂತರದಿಂದ ಗೆಲುವು.
* ಎತ್ತಿನ ಹೊಳೆ ಯೋಜನೆಯ ಹೋರಾಟದಿಂದಾಗಿ ರಾಷ್ಟ್ರಮಟ್ಟದಲ್ಲಿ ಹೆಸರಾದವರು ಶೋಭಾ ಕರಂದ್ಲಾಜೆ.
* ಇತ್ತೀಚೆಗೆ ಕರಾವಳಿಯಲ್ಲಿ ಶಾಂತಿ ಕದಡಿದ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಯ ಸಂದರ್ಭದಲ್ಲೂ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿ, ಕರ್ನಾಟಕದ ದಿಟ್ಟ ಮಹಿಳಾ ರಾಜಕಾರಣಿ ಎಂಬ ಖ್ಯಾತಿಗೆ ಪಾತ್ರರಾದವರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ












Click it and Unblock the Notifications