ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಪರಿಚಯ
Recommended Video

ಬೆಂಗಳೂರು, ಜನವರಿ 01 : ಕರ್ನಾಟಕದ ರಾಜಧಾನಿ ಬೆಂಗಳೂರು. ನಗರದ ರಾಜಕೀಯದ ಬಗ್ಗೆ ಮಾತನಾಡಲು ಹೊರಟರೆ ಬಿಜೆಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಬಗ್ಗೆ ಮಾತನಾಡಲೇಬೇಕು.
ಬಿಜೆಪಿಯಲ್ಲಿಯೇ ಪ್ರಚಲಿತವಾಗಿರುವ ಮಾತಿನಂತೆ ಆರ್.ಅಶೋಕ್ 'ಬೆಂಗಳೂರಿನ ಸಾಮ್ರಾಟ್'. ನಗರದ ರಾಜಕೀಯದ ಮೇಲೆ ಅವರ ಪ್ರಭಾವ ಅಷ್ಟಿದೆ. ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾದ ಅಶೋಕ್ ಪದ್ಮನಾಭನಗರ ಕ್ಷೇತ್ರದ ಶಾಸಕರು.
ಜಾಲಹಳ್ಳಿ ಆರ್.ಅಶೋಕ್ ಅವರ ಹುಟ್ಟೂರು. ಅಶೋಕ್ ಅವರ ತಂದೆ ರಾಮಯ್ಯ, ತಾಯಿ ಆಂಜನಮ್ಮ. ತಂದೆ ರಾಮಯ್ಯ ಕೃಷಿಕರು, ಆರ್ಎಸ್ಎಸ್ ನಂಟು ಹೊಂದಿದ್ದರು. ಆದ್ದರಿಂದ, ಅಶೋಕ್ ಅವರು ಸಹ ಆರ್ಎಸ್ಎಸ್ ಜೊತೆ ಗುರುತಿಸಿಕೊಂಡರು.

1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ದಂಗೆ ಎದ್ದ ಜನತಾ ಪರಿವಾರದ ನಾಯಕರು ಜೈಲು ಸೇರಿದರು. ಜಯಪ್ರಕಾಶ್ ನಾರಾಯಣ್, ಎಲ್.ಕೆ.ಅಡ್ವಾಣಿ, ಬಿ.ಎಸ್.ಯಡಿಯೂರಪ್ಪ, ಅನಂತ್ ಕುಮಾರ್ ಜೊತೆ ಮೂರು ತಿಂಗಳು ಅಶೋಕ್ ಜೈಲುವಾಸ ಅನುಭವಿಸಿದರು.
ಹೋರಾಟದ ಸಂದರ್ಭದಲ್ಲಿ ಜೈಲು ಸೇರಿದ ಆರ್.ಅಶೋಕ್ ನಂತರ ಕರ್ನಾಟಕದ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು ಅವರ ರಾಜಕೀಯ ಜೀವನದ ಸಾಧನೆ. ಆರೋಗ್ಯ, ಸಾರಿಗೆ, ಗೃಹ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಆರ್.ಅಶೋಕ್ ಕೆಲಸ ನಿರ್ವಹಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಯುವ ಮೋರ್ಚಾ ಅಧ್ಯಕ್ಷರಾಗಿದ್ದಾಗ ಅಶೋಕ್ ಅವರ ಸಂಘಟನಾ ಶಕ್ತಿ ನೋಡಿ, ಪಕ್ಷದ ನಾಯಕರು ಬೆನ್ನು ತಟ್ಟಿದ್ದರು. ಇದರಿಂದಲೇ ಅವರಿಗೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಸಿಕ್ಕಿತು. ಅದೂ ಸಹ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾದ ಉತ್ತರಹಳ್ಳಿಯಲ್ಲಿ.

ಉತ್ತರಹಳ್ಳಿಯಲ್ಲಿ ಪ್ರಭಾವಿ ನಾಯಕ, ಸಚಿವ ಎಸ್.ರಮೇಶ್ ವಿರುದ್ಧ ಸ್ಪರ್ಧಿಸಿದ್ದ ಅಶೋಕ್ 18 ಸಾವಿರ ಮತಗಳ ಅಂತರದಿಂದ ಗೆದ್ದರು. ನಂತರ ಸತತ ಮೂರು ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು.
ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರ ವಿಂಗಡನೆಗೊಂಡು ಪದ್ಮನಾಭನಗರ, ಯಶವಂತಪುರ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಾದವು. ಆಗ ಅಶೋಕ್ ಪದ್ಮನಾಭ ನಗರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು.
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನ ಒಲಿದುಬಂತು. ಆರೋಗ್ಯ ಸಚಿವರಾದ ಆರ್.ಅಶೋಕ್ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಬಾಣಂತಿಯರಿಗಾಗಿ ಜಾರಿಗೆ ತಂದ ಮಡಿಲು ಯೋಜನೆ ರಾಜ್ಯದಲ್ಲಿ ಇಂದಿಗೂ ಜನಪ್ರಿಯ.
2008ರಲ್ಲಿ ಬೆಂಗಳೂರು ನಗರದಲ್ಲಿ ಹೆಚ್ಚು ಮತಗಳ ಅಂತರದಿಂದ ಗೆದ್ದವರು ಆರ್.ಅಶೋಕ್. ಬಿಜೆಪಿ ಸರ್ಕಾರದಲ್ಲಿ ಸಾರಿಗೆ, ಗೃಹ ಸಚಿವರಾಗಿ ಕೆಲಸ ಮಾಡಿದರು. ಉಪ ಮುಖ್ಯಮಂತ್ರಿಯಾದರು.
ಸಾರಿಗೆ ಮತ್ತು ಗೃಹ ಸಚಿವರಾಗಿ ಅಶೋಕ್ ಮಾಡಿದ ಕಾರ್ಯಗಳಿಗೆ ಭಾರೀ ಪ್ರಶಂಸೆ ಸಿಕ್ಕಿದೆ. ಹಳ್ಳಿ-ಹಳ್ಳಿಗೂ ಬಸ್ ಸೌಲಭ್ಯ, ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದರು. ನಷ್ಟದಲ್ಲಿದ್ದ ಕೆಎಸ್ಆರ್ಟಿಸಿಯನ್ನು ಲಾಭದತ್ತ ತಂದು ನಿಲ್ಲಿಸಿದರು.
ಆರ್.ಅಶೋಕ್ ಬೆಂಗಳೂರಿನ ರಾಜಕೀಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. 2015ರ ಬಿಬಿಎಂಪಿ ಚುನಾವಣೆಯಲ್ಲಿ 198 ಕ್ಷೇತ್ರಗಳ ಪೈಕಿ, 101ರಲ್ಲಿ ಬಿಜೆಪಿ ಗೆಲ್ಲುವಂತೆ ಮಾಡಿದ್ದರಲ್ಲಿ ಅಶೋಕ್ ಅವರ ಕಾರ್ಯತಂತ್ರವಿದೆ.
ರಾಜಕೀಯ ಹೊರತುಪಡಿಸಿ ಆರ್.ಅಶೋಕ್ ಒಬ್ಬ ಕ್ರೀಡಾ ಪ್ರೇಮಿ. ಕಬ್ಬಡಿ ಎಂದರೆ ಅವರಿಗೆ ಅಚ್ಚುಮೆಚ್ಚು. ದೇಶದಲ್ಲಿ ನಡೆದ ಸಾಕಷ್ಟು ಕಬ್ಬಡಿ ಕ್ರೀಡಾಕೂಟದಲ್ಲಿ ಅವರು ಪಾಲ್ಗೊಂಡಿದ್ದಾರೆ. ಕಬ್ಬಡಿಯಲ್ಲಿ ಅವರು ನ್ಯಾಷನಲ್ ಚಾಂಪಿಯನ್ ಎಂಬುದು ಹಲವರಿಗೆ ಗೊತ್ತಿಲ್ಲ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications