ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಗೆಲುವು
ಬೆಂಗಳೂರು, ಮೇ 07: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಓದುಗರ ಅಭಿಪ್ರಾಯ ಸಂಗ್ರಹ ಮಾಡುವ ಉದ್ದೇಶದಿಂದ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ನಂತರ ಪಕ್ಷೇತರ ಮತ್ತು ಬಿಜೆಪಿ ಪಕ್ಷಗಳು ತನ್ನ ಅಸ್ಥಿತ್ವವನ್ನು ಪಡೆದುಕೊಂಡಿತ್ತು.

2004ರಿಂದ ಸತತವಾಗಿ ಮೂರು ಬಾರಿ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಜಯಗಳಿಸಿದ್ದಾರೆ. ದತ್ತಪೀಠದ ವಿಷಯದ ಆಧಾರ ಮೇಲೆ ಜಿಲ್ಲೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಸಾಧಿಸಿಕೊಂಡಿದೆ.
ಈ ಬಾರಿ ಬಿಜೆಪಿಯ ಸಿಟಿ ರವಿ ಹಾಗೂ ಕಾಂಗ್ರೆಸ್ಸಿನ ಬಿಎಲ್ ಶಂಕರ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಫೇಸ್ಬುಕ್ ಲೈವ್ ಮತದಾನ: ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಒಂದು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ನೂರಾರು ಮಂದಿ ಸಮೀಕ್ಷೆ ತಲುಪಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಸಿಟಿ ರವಿ ಅವರಿಗೆ 103 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಬಿ.ಎಲ್ ಶಂಕರ್ ಅವರಿಗೆ 23 ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ನ ಜಿ.ಎಚ್ ಹರೀಶ್ ಅವರಿಗೆ 68 ಮತಗಳು ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications