ಬಂಡಾಯ ಶಾಸಕ ಜಮೀರ್ ಅಹಮದ್ ಖಾನ್ ಪರಿಚಯ
ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾಗಿದ್ದವರು ಜಮೀರ್ ಅಹಮದ್ ಖಾನ್. ಚಾಮರಾಜಪೇಟೆ ಕ್ಷೇತ್ರದ ಶಾಸಕರಾದ ಇವರು ಪ್ರಸ್ತುತ ಜೆಡಿಎಸ್ನಿಂದ ಅಮಾನತುಗೊಂಡಿದ್ದಾರೆ.
ನ್ಯಾಷನ್ ಟ್ರಾವೆಲ್ಸ್ ಉದ್ಯಮದಲ್ಲಿ ಪಾಲು ಹೊಂದಿರುವ ಜಮೀರ್ ಅಹಮದ್ ಖಾನ್, ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ವಿಧಾನಸಭೆ ಪ್ರವೇಶಿಸಿದರು. ಎಸ್.ಎಂ.ಕೃಷ್ಣ ಅವರು ರಾಜ್ಯಪಾಲರಾಗಿ ಆಯ್ಕೆಗೊಂಡು ಕ್ಷೇತ್ರ ತೊರೆದ ಮೇಲೆ ಚಾಮರಾಪೇಟೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಮೀರ್ ಆಯ್ಕೆಯಾದರು.
2008, 2013 ಸೇರಿ ಮೂರು ಬಾರಿ ಚಾಮರಾಜಪೇಟೆ ಕ್ಷೇತ್ರದಿಂದ ಸತತವಾಗಿ ಗೆಲುವು ಸಾಧಿಸಿದ್ದಾರೆ ಜಮೀರ್ ಅಹಮದ್ ಖಾನ್. 2018ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅದೂ ಚಾಮರಾಜಪೇಟೆ ಕ್ಷೇತ್ರದಿಂದ

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಜಮೀರ್ ಅಹಮದ್ ಖಾನ್, ಹಜ್ ಮತ್ತು ವಕ್ತ್ ಖಾತೆ ಸಚಿವರಾಗಿದ್ದರು. ಜೆಡಿಎಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಆದರೆ, ಈಗ ಪಕ್ಷದಿಂದ ಅಮಾನತುಗೊಂಡಿದ್ದಾರೆ.
2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು. ಆಗ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದರು ಜಮೀರ್ ಅಹಮದ್ ಖಾನ್. ಬಳಿಕ ಜೆಡಿಎಸ್ ಅವರನ್ನು ಪಕ್ಷದಿಂದ ಅಮಾನತು ಮಾಡಿತು.

ಜೆಡಿಎಸ್ನಿಂದ ಉಚ್ಛಾಟನೆಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಜಮೀರ್ ಅಹಮದ್ ಖಾನ್. ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಮುಂದಿನ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ.
ಜಮೀರ್ ಅಹಮದ್ ಖಾನ್ ಸೇರಿದಂತೆ 8 ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಈ ಎಲ್ಲಾ ಶಾಸಕರಿಗೂ ಜಮೀರ್ ಅವರೇ ನಾಯಕರು. ಕೆ.ಗೋಪಾಲಯ್ಯ ಅವರು ಜೆಡಿಎಸ್ ಪಕ್ಷಕ್ಕೆ ವಾಪಸ್ ಆಗಿದ್ದು, 7 ಶಾಸಕರು ಸದ್ಯ ಜಮೀರ್ ಅಹಮದ್ ಖಾನ್ ಜೊತೆಗಿದ್ದಾರೆ.
2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಆದರೆ, ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿ, ಮೇಯರ್ ಪಟ್ಟವನ್ನು ಬಿಜೆಪಿಯಿಂದ ಕಿತ್ತುಕೊಳ್ಳವಲ್ಲಿ ಜಮೀರ್ ಅವರ ಪಾತ್ರ ಪ್ರಮುಖವಾಗಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications