ಫ್ಲೆಕ್ಸ್, ಜಾಹೀರಾತಿಗಾಗಿ ಹೈಕೋರ್ಟ್ ಮೊರೆ ಹೋದ ಬಿಜೆಪಿ
ಬೆಂಗಳೂರು, ಏಪ್ರಿಲ್ 27: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ಅನುಮತಿ ನಿರಾಕರಿಸಿದ ಬಿಬಿಎಂಪಿ ಕ್ರಮ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದೆ.
ಹೈಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಚುನಾವಣೆಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೂಕ್ತ ಶುಲ್ಕ ಪಡೆದು ಫ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆಗೆ ಅನುಮತಿ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ತಿರಸ್ಕರಿಸಿದೆ. ಹೀಗಾಗಿ ಅನುಮತಿ ನೀಡುವಂತೆ ಬಿಬಿಎಂಪಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ನಗರದಲ್ಲಿ ಅಳವಡಿಸಲಾಗಿರುವ ಹೋರ್ಡಿಂಗ್ ಗಳಲ್ಲಿ ಚುನಾವಣಾ ಪ್ರಚಾರದ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿ ನಿರಾಕರಿಸಿದೆ.

ಜಾಹೀರಾತು ಫಲಕಗಳ ಮೂಲಕ ಪ್ರಚಾರ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ರಾಜಕೀಯ ಪಕ್ಷಗಳು ಬಿಬಿಎಂಪಿಗೆ ಮನವಿ ಸಲ್ಲಿಸಿದ್ದವು. ಆದರೆ ಪಾಲಿಕೆ ಆಯುಕ್ತರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ರಾಜಕೀಯ ಪಕ್ಷಗಳ ಮುಖಂಡರು ಆಯೋಗಕ್ಕೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆಯೋಗವು ಖಾಲಿ ಇರುವ ಜಾಹೀರಾತು ಫಲಕಗಳನ್ನು ಎಲ್ಲ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾನೂನು ಇಲಾಖೆಯ ಕಾರ್ಯದರ್ಶಿ, ಪೊಲೀಸ್ ಮತ್ತು ಬಿಬಿಎಂಪಿ ಆಯುಕ್ತರನ್ನೊಳಗೊಂಡ ಸಮಿತಿಯನ್ನು ರಚಿಸಿ ಏ.24ರಂದು ಆದೇಶ ಹೊರಡಿಸಿತ್ತು.
ಸಮಿತಿ ತಕ್ಷಣವೇ ಸಭೆ ಸೇರಿ ಲಭ್ಯವಿರುವ ಜಾಹೀರಾತು ಹೋರ್ಡಿಂಗ್ಸ್ ಗಳನ್ನು ರಾಜಕೀಯ ಪ್ರಚಾರಕ್ಕೆ ಎಲ್ಲರಿಗೂ ಸಮಾನವಾಗಿ ಹಂಚಲು ಕ್ರಮ ಕೈಗೊಳ್ಳಬೇಕು. ಜಾಹೀರಾತು ಪ್ರದರ್ಶನದ ಶುಲ್ಕವನ್ನು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸೇರಿಸಬೇಕೆಂದು ಚುನಾವಣಾ ಆಯೋಗ ನಿರ್ದೇಶನ ನೀಡಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications