ಫ್ಲೆಕ್ಸ್, ಜಾಹೀರಾತಿಗಾಗಿ ಹೈಕೋರ್ಟ್ ಮೊರೆ ಹೋದ ಬಿಜೆಪಿ
ಬೆಂಗಳೂರು, ಏಪ್ರಿಲ್ 27: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ಅನುಮತಿ ನಿರಾಕರಿಸಿದ ಬಿಬಿಎಂಪಿ ಕ್ರಮ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದೆ.
ಹೈಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಚುನಾವಣೆಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೂಕ್ತ ಶುಲ್ಕ ಪಡೆದು ಫ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆಗೆ ಅನುಮತಿ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ತಿರಸ್ಕರಿಸಿದೆ. ಹೀಗಾಗಿ ಅನುಮತಿ ನೀಡುವಂತೆ ಬಿಬಿಎಂಪಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ನಗರದಲ್ಲಿ ಅಳವಡಿಸಲಾಗಿರುವ ಹೋರ್ಡಿಂಗ್ ಗಳಲ್ಲಿ ಚುನಾವಣಾ ಪ್ರಚಾರದ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿ ನಿರಾಕರಿಸಿದೆ.

ಜಾಹೀರಾತು ಫಲಕಗಳ ಮೂಲಕ ಪ್ರಚಾರ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ರಾಜಕೀಯ ಪಕ್ಷಗಳು ಬಿಬಿಎಂಪಿಗೆ ಮನವಿ ಸಲ್ಲಿಸಿದ್ದವು. ಆದರೆ ಪಾಲಿಕೆ ಆಯುಕ್ತರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ರಾಜಕೀಯ ಪಕ್ಷಗಳ ಮುಖಂಡರು ಆಯೋಗಕ್ಕೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆಯೋಗವು ಖಾಲಿ ಇರುವ ಜಾಹೀರಾತು ಫಲಕಗಳನ್ನು ಎಲ್ಲ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾನೂನು ಇಲಾಖೆಯ ಕಾರ್ಯದರ್ಶಿ, ಪೊಲೀಸ್ ಮತ್ತು ಬಿಬಿಎಂಪಿ ಆಯುಕ್ತರನ್ನೊಳಗೊಂಡ ಸಮಿತಿಯನ್ನು ರಚಿಸಿ ಏ.24ರಂದು ಆದೇಶ ಹೊರಡಿಸಿತ್ತು.
ಸಮಿತಿ ತಕ್ಷಣವೇ ಸಭೆ ಸೇರಿ ಲಭ್ಯವಿರುವ ಜಾಹೀರಾತು ಹೋರ್ಡಿಂಗ್ಸ್ ಗಳನ್ನು ರಾಜಕೀಯ ಪ್ರಚಾರಕ್ಕೆ ಎಲ್ಲರಿಗೂ ಸಮಾನವಾಗಿ ಹಂಚಲು ಕ್ರಮ ಕೈಗೊಳ್ಳಬೇಕು. ಜಾಹೀರಾತು ಪ್ರದರ್ಶನದ ಶುಲ್ಕವನ್ನು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸೇರಿಸಬೇಕೆಂದು ಚುನಾವಣಾ ಆಯೋಗ ನಿರ್ದೇಶನ ನೀಡಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications