ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಂಸದ ಸ್ಥಾನಕ್ಕೆ ಯಡಿಯೂರಪ್ಪ, ಶ್ರೀರಾಮುಲು ರಾಜೀನಾಮೆ
ಬೆಂಗಳೂರು, ಮೇ 19: ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಕಾರಣ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಶ್ರೀರಾಮುಲು ಅವರು ಸಹ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣು
2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕ್ರಮವಾಗಿ ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರ ರಾಜೀನಾಮೆಯನ್ನು ಸ್ಪೀಕರ್ ಅನುಮೋದಿಸಿದ್ದಾರೆ.
ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ ಎಸ್ ಯಡಿಯೂರಪ್ಪ ಅವರು ಜಯಗಳಿಸಿದ್ದರು. ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ಗೆದ್ದಿದ್ದರು. ಶಾಸಕ ಸ್ಥಾನ ಉಳಿಸಿಕೊಳ್ಳಬೇಕಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರೂ ರಾಜೀನಾಮೆ ನೀಡಿದ್ದಾರೆ.
Comments
yediyurappa karnataka election results 2018 lok sabha ಲೋಕಸಭಾ ಯಡಿಯೂರಪ್ಪ ಶ್ರೀರಾಮುಲು ರಾಜೀನಾಮೆ ಚುನಾವಣಾ ಫಲಿತಾಂಶ
English summary
vaKarnataka Election results 2018: After winning assembly elections, B Sriramulu & BS Yeddyurappa have resigned from Lok Sabha, their resignations have been accepted by the Speaker.
Story first published: Saturday, May 19, 2018, 13:43 [IST]