ಬಿಟಿವಿ ಸಮೀಕ್ಷೆ: ಅತಂತ್ರ ವಿಧಾನಸಭೆ, ಕಾಂಗ್ರೆಸ್ ದೊಡ್ಡ ಪಕ್ಷ
Recommended Video

ಬೆಂಗಳೂರು, ಮೇ ೦9: ಪಬ್ಲಿಕ್ ಟಿವಿ, ಜನ್ ಕಿ ಬಾತ್ ನಂತರ ಇಂದು ಕನ್ನಡದ ಸುದ್ದಿ ವಾಹಿನಿ ಬಿಟಿವಿಯು ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಜನಾಭಿಪ್ರಾಯ ಸಂಗ್ರಹಿಸಿದೆ.
ಮತದಾನಕ್ಕೆ ಇನ್ನು ಕೇವಲ 72 ಗಂಟೆಗಳು ಬಾಕಿ ಇರುವಾಗ ಸಂಗ್ರಹಿಸಿರುವ ಈ ಫೈನಲ್ ಜನಾಭಿಪ್ರಾಯದಲ್ಲಿ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದು ಸ್ಪಷ್ಟವಾಗಿದೆ. ಆದರೆ ಕಾಂಗ್ರೆಸ್ ಅತಿ ತೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
ಪಬ್ಲಿಕ್ ಟಿವಿ ಮಾಡಿರುವ ಸಮೀಕ್ಷೆ ಪ್ರಕಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 94 ಸೀಟುಗಳನ್ನು ಪಡೆದರೆ ಬಿಜೆಪಿಯು 84, ಜೆಡಿಎಸ್ 42 ಹಾಗೂ ಇತರೆ 3 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಈ ಸಂಖ್ಯೆಗಳಲ್ಲಿ 5 ಕ್ಷೇತ್ರಗಳು ಹೆಚ್ಚು ಅಥವಾ ಕಡಿಮೆ ಆಗಬಹುದು ಎಂದು ಬಿಟಿವಿ ಹೇಳಿದೆ.
ಬಿಟಿವಿಯ ವಲಯವಾರು ಸಮೀಕ್ಷೆ ಫಲಿತಾಂಶ ಇಲ್ಲಿದೆ ನೋಡಿ....

ಹೈದರಾಬಾದ್ ಕರ್ನಾಟದಲ್ಲಿ ಕಾಂಗ್ರೆಸ್ ಅಧಿಪತ್ಯ
ಸಮೀಕ್ಷೆ ಪ್ರಕಾರ ಹೈದರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಮೇಲುಗೈ ಸಾಧಿಸಲಿದೆ. ಈ ಭಾಗದಲ್ಲಿ ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಗೆದ್ದರೆ ಬಿಜೆಪಿ 14, ಜೆಡಿಎಸ್ 4 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ.

ಮುಂಬೈ ಕರ್ನಾಟದಲ್ಲಿ ಬಿಜೆಪಿ ಮೇಲುಗೈ
ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿದೆ. ಇಲ್ಲಿ ಕಾಂಗ್ರೆಸ್ 19 ಸ್ಥಾನ ಗಳಿಸಿದರೆ ಬಿಜೆಪಿ ಅತಿ ಹೆಚ್ಚು 29 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಜೆಡೆಎಸ್ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ. ಬೇರೆ ಪಕ್ಷಗಳು ಇಲ್ಲಿ ಬೇರುಬಿಟ್ಟಿಲ್ಲ.

ಮಧ್ಯ ಕರ್ನಾಟಕದಲ್ಲಿ ಸಮಬಲ
ಮಧ್ಯ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ 11 ಸ್ಥಾನಗಳಲ್ಲಿ ಗೆದ್ದರೆ, ಬಿಜೆಪಿ 10 ಸ್ಥಾನಗಳು ಜೆಡೆಎಸ್ 5 ಸ್ಥಾನಗಳಲ್ಲಿ ಗೆಲವು ಕಾಣಲಿದೆ ಎಂದಿದೆ ಬಿಟಿವಿ ಸಮೀಕ್ಷೆ. ಇಲ್ಲಿ ಪತರ ಪಕ್ಷ ಅಥವಾ ಪಕ್ಷೇತರರು ಗೆಲ್ಲಲು ಶಕ್ತರಾಗಿಲ್ಲ.

ಹಳೆ ಮೈಸೂರಿನಲ್ಲಿ ಜೆಡಿಎಸ್ ಕಿಂಗ್
61 ಕ್ಷೇತ್ರಗಳನ್ನು ಹೊಂದಿರುವ ಹಳೆ ಮೈಸೂರು ಭಾಗದಲ್ಲಿ ಜೆಡೆಎಸ್ ಮುನ್ನಡೆ ಪಡೆದಿದೆ. ಇಲ್ಲಿ ಅದು 30 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಗೆದ್ದರೆ, ಬಿಜೆಪಿ 10 ಸ್ಥಾನಗಳಲ್ಲಿಯಷ್ಟೆ ಗೆಲ್ಲಲಿದೆ. ಇತರ ಪಕ್ಷಗಳು ಇಲ್ಲಿ 3 ಸ್ಥಾನಗಳಲ್ಲಿ ವಿಜಯ ಸಾಧಿಸಲಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದೆ
ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ. ಇಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ, 8 ಸ್ಥಾನಗಳನ್ನು ಬಿಜೆಪಿ ಗೆದ್ದರೆ ಜೆಡಿಎಸ್ ಖಾತೆಯನ್ನೇ ತೆರೆಯುವುದಿಲ್ಲ ಎಂದು ಸಮೀಕ್ಷೆ ಹೇಳುತ್ತಿದೆ.

ಬೆಂಗಳೂರಲ್ಲಿ ಬಿಜೆಪಿ-ಕಾಂಗ್ರೆಸ್ ಸಮ-ಸಮ
ಬೆಂಗಳೂರಿನ 27 ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಸಮನಾಗಿ ಹಂಚಿಕೊಳ್ಳಲಿದೆ. ಇಲ್ಲಿ ಕಾಂಗ್ರೆಸ್ 13 ಹಾಗೂ ಬಿಜೆಪಿ 13 ಕ್ಷೇತ್ರಗಳನ್ನು ಗೆಲ್ಲಲಿದೆ. ಜೆಡಿಎಸ್ ಪಕ್ಷವು ಕೇವಲ 1 ಸ್ಥಾನ ಪಡೆಯಲಿದೆ. ಹಿಂದಿನ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಬೆಂಗಳೂರಲ್ಲಿ ಜೆಡಿಎಸ್ ಎರಡು ಸ್ಥಾನ ಕಳೆದುಕೊಳ್ಳಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications