ಬಿಟಿವಿ ಸಮೀಕ್ಷೆ: ಅತಂತ್ರ ವಿಧಾನಸಭೆ, ಕಾಂಗ್ರೆಸ್ ದೊಡ್ಡ ಪಕ್ಷ
Recommended Video

ಬೆಂಗಳೂರು, ಮೇ ೦9: ಪಬ್ಲಿಕ್ ಟಿವಿ, ಜನ್ ಕಿ ಬಾತ್ ನಂತರ ಇಂದು ಕನ್ನಡದ ಸುದ್ದಿ ವಾಹಿನಿ ಬಿಟಿವಿಯು ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಜನಾಭಿಪ್ರಾಯ ಸಂಗ್ರಹಿಸಿದೆ.
ಮತದಾನಕ್ಕೆ ಇನ್ನು ಕೇವಲ 72 ಗಂಟೆಗಳು ಬಾಕಿ ಇರುವಾಗ ಸಂಗ್ರಹಿಸಿರುವ ಈ ಫೈನಲ್ ಜನಾಭಿಪ್ರಾಯದಲ್ಲಿ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದು ಸ್ಪಷ್ಟವಾಗಿದೆ. ಆದರೆ ಕಾಂಗ್ರೆಸ್ ಅತಿ ತೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
ಪಬ್ಲಿಕ್ ಟಿವಿ ಮಾಡಿರುವ ಸಮೀಕ್ಷೆ ಪ್ರಕಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 94 ಸೀಟುಗಳನ್ನು ಪಡೆದರೆ ಬಿಜೆಪಿಯು 84, ಜೆಡಿಎಸ್ 42 ಹಾಗೂ ಇತರೆ 3 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಈ ಸಂಖ್ಯೆಗಳಲ್ಲಿ 5 ಕ್ಷೇತ್ರಗಳು ಹೆಚ್ಚು ಅಥವಾ ಕಡಿಮೆ ಆಗಬಹುದು ಎಂದು ಬಿಟಿವಿ ಹೇಳಿದೆ.
ಬಿಟಿವಿಯ ವಲಯವಾರು ಸಮೀಕ್ಷೆ ಫಲಿತಾಂಶ ಇಲ್ಲಿದೆ ನೋಡಿ....

ಹೈದರಾಬಾದ್ ಕರ್ನಾಟದಲ್ಲಿ ಕಾಂಗ್ರೆಸ್ ಅಧಿಪತ್ಯ
ಸಮೀಕ್ಷೆ ಪ್ರಕಾರ ಹೈದರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಮೇಲುಗೈ ಸಾಧಿಸಲಿದೆ. ಈ ಭಾಗದಲ್ಲಿ ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಗೆದ್ದರೆ ಬಿಜೆಪಿ 14, ಜೆಡಿಎಸ್ 4 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ.

ಮುಂಬೈ ಕರ್ನಾಟದಲ್ಲಿ ಬಿಜೆಪಿ ಮೇಲುಗೈ
ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿದೆ. ಇಲ್ಲಿ ಕಾಂಗ್ರೆಸ್ 19 ಸ್ಥಾನ ಗಳಿಸಿದರೆ ಬಿಜೆಪಿ ಅತಿ ಹೆಚ್ಚು 29 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಜೆಡೆಎಸ್ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ. ಬೇರೆ ಪಕ್ಷಗಳು ಇಲ್ಲಿ ಬೇರುಬಿಟ್ಟಿಲ್ಲ.

ಮಧ್ಯ ಕರ್ನಾಟಕದಲ್ಲಿ ಸಮಬಲ
ಮಧ್ಯ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ 11 ಸ್ಥಾನಗಳಲ್ಲಿ ಗೆದ್ದರೆ, ಬಿಜೆಪಿ 10 ಸ್ಥಾನಗಳು ಜೆಡೆಎಸ್ 5 ಸ್ಥಾನಗಳಲ್ಲಿ ಗೆಲವು ಕಾಣಲಿದೆ ಎಂದಿದೆ ಬಿಟಿವಿ ಸಮೀಕ್ಷೆ. ಇಲ್ಲಿ ಪತರ ಪಕ್ಷ ಅಥವಾ ಪಕ್ಷೇತರರು ಗೆಲ್ಲಲು ಶಕ್ತರಾಗಿಲ್ಲ.

ಹಳೆ ಮೈಸೂರಿನಲ್ಲಿ ಜೆಡಿಎಸ್ ಕಿಂಗ್
61 ಕ್ಷೇತ್ರಗಳನ್ನು ಹೊಂದಿರುವ ಹಳೆ ಮೈಸೂರು ಭಾಗದಲ್ಲಿ ಜೆಡೆಎಸ್ ಮುನ್ನಡೆ ಪಡೆದಿದೆ. ಇಲ್ಲಿ ಅದು 30 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಗೆದ್ದರೆ, ಬಿಜೆಪಿ 10 ಸ್ಥಾನಗಳಲ್ಲಿಯಷ್ಟೆ ಗೆಲ್ಲಲಿದೆ. ಇತರ ಪಕ್ಷಗಳು ಇಲ್ಲಿ 3 ಸ್ಥಾನಗಳಲ್ಲಿ ವಿಜಯ ಸಾಧಿಸಲಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದೆ
ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ. ಇಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ, 8 ಸ್ಥಾನಗಳನ್ನು ಬಿಜೆಪಿ ಗೆದ್ದರೆ ಜೆಡಿಎಸ್ ಖಾತೆಯನ್ನೇ ತೆರೆಯುವುದಿಲ್ಲ ಎಂದು ಸಮೀಕ್ಷೆ ಹೇಳುತ್ತಿದೆ.

ಬೆಂಗಳೂರಲ್ಲಿ ಬಿಜೆಪಿ-ಕಾಂಗ್ರೆಸ್ ಸಮ-ಸಮ
ಬೆಂಗಳೂರಿನ 27 ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಸಮನಾಗಿ ಹಂಚಿಕೊಳ್ಳಲಿದೆ. ಇಲ್ಲಿ ಕಾಂಗ್ರೆಸ್ 13 ಹಾಗೂ ಬಿಜೆಪಿ 13 ಕ್ಷೇತ್ರಗಳನ್ನು ಗೆಲ್ಲಲಿದೆ. ಜೆಡಿಎಸ್ ಪಕ್ಷವು ಕೇವಲ 1 ಸ್ಥಾನ ಪಡೆಯಲಿದೆ. ಹಿಂದಿನ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಬೆಂಗಳೂರಲ್ಲಿ ಜೆಡಿಎಸ್ ಎರಡು ಸ್ಥಾನ ಕಳೆದುಕೊಳ್ಳಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications