ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ವಸಂತ ಬಂಗೇರ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆಗೆ ಯತ್ನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮಾರ್ಚ್ 6: ಕುಡಿದ ಮತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬೆಳ್ತಂಗಡಿ ಶಾಸಕ ವಸಂತ ಬಂಗೇರರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಕಾಂಗ್ರೆಸ್ ಕಚೇರಿಯ ಸಮೀಪ ಕುಡಿದ ಮತ್ತಿನಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿದ ಕಾರ್ಯಕರ್ತರು ವಸಂತ ಬಂಗೇರ ಅವರನ್ನು ಬಚಾವ್ ಮಾಡಿದ್ದಾರೆ.

ಮೂರೂ ಪ್ರಮುಖ ಪಕ್ಷದಿಂದ ಗೆದ್ದಿರುವ ವಸಂತ ಬಂಗೇರ ಬಗ್ಗೆ ಗೊತ್ತೆ?ಮೂರೂ ಪ್ರಮುಖ ಪಕ್ಷದಿಂದ ಗೆದ್ದಿರುವ ವಸಂತ ಬಂಗೇರ ಬಗ್ಗೆ ಗೊತ್ತೆ?

ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಕಾಂಗ್ರೆಸ್ ಕಾರ್ಯಕರ್ತ ಇಂದಬೆಟ್ಟಿನ ನಿವಾಸಿ ವೆಂಕಪ್ಪ ಕೊಟ್ಯಾನ್ ಎಂದು ಗುರುತಿಸಲಾಗಿದೆ.

Congress activist tried to attack MLA Vasanth Bangera

"ರಾತ್ರಿ ಕಂಠಪೂರ್ತಿ ಕುಡಿದು ಬಂದಿದ್ದ ವೆಂಕಪ್ಪ ಕೊಟ್ಯಾನ್ ಶಾಸಕ ವಸಂತ ಬಂಗೇರರ ಕಚೇರಿಗೆ ಆಗಮಿಸಿದ್ದಾರೆ. ಅವರನ್ನು ನೋಡಿದ ಕೂಡಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಒಂದು ಹಂತದಲ್ಲಿ ಶಾಸಕರ ಮೇಲೆ ಹಲ್ಲೆಗೆ ಯತ್ನ ಕೂಡ ನಡೆಸಿದ್ದಾನೆ," ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಆಗ ಸ್ಥಳದಲ್ಲಿದ್ದ ವಸಂತ ಬಂಗೇರರ ಬೆಂಬಗಲಿರುವ ಶಾಸಕರನ್ನು ಬಚಾವ್ ಮಾಡಿ, ಹಲ್ಲೆ ಮುಂದಾದ ವ್ಯಕ್ತಿಗೆ ಗೂಸಾ ನೀಡಿದ್ದಾರೆ.

Congress activist tried to attack MLA Vasanth Bangera

ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತನ್ನದೇ ಪಕ್ಷದ ಶಾಸಕರ ಮೇಲೆ ನಿಂದಿಸಿ ಹಲ್ಲೆ ಮುಂದಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಲ್ಲೆಗೆ ಯತ್ನಿಸಿದ್ದು ಯಾಕೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಸದ್ಯದಲ್ಲೆ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಸಂತ ಬಂಗೇರ ನಿಲ್ಲುವುದು ಬಹುತೇಕ ಖಚಿತವಾಗಿದೆ. ಇದೇ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವು ಚರ್ಚೆಗೆ ಗ್ರಾಸವಾಗಿದೆ.

English summary
Drunken Congress activist attempted to attack Belthangady MLA Vasanth Bangera near his office in Belthangady.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X