ಬಿಜೆಪಿಯಿಂದ ಸಿಡಿದು ಕಾಂಗ್ರೆಸ್ ಕೈಹಿಡಿದಿರುವ ಬಿ ನಾಗೇಂದ್ರ ಸಂದರ್ಶನ
ಬಳ್ಳಾರಿ, ಮೇ 08 : ಬಿ. ನಾಗೇಂದ್ರ. ಒಮ್ಮೆ ಬಿಜೆಪಿ ಶಾಸಕರು, ಮತ್ತೊಮ್ಮೆ ಪಕ್ಷೇತರರು. ಎರಡು ಬಾರಿ ಕೂಡ್ಲಿಗಿ ಎಸ್ಟಿ ಮೀಸಲು ಕ್ಷೇತ್ರದ ಶಾಸಕರು. ಈಗ ಸ್ಪರ್ಧಿಸಿರೋದು ಬಳ್ಳಾರಿ ಗ್ರಾಮೀಣ ಎಸ್ಟಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಾಯಕತ್ವ ಒಪ್ಪಿ ಕಾಂಗ್ರೆಸ್ ಸೇರಿರುವ ಬಿ. ನಾಗೇಂದ್ರ ಸ್ವಯಂ ರೂಪಿತ ಲೀಡರ್. ರೆಡ್ಡಿ ಬಳಗ, ಬಿ. ಶ್ರೀರಾಮುಲು ನಾಯಕತ್ವದ ಅಡಿಯಲ್ಲಿ ಇದ್ದರೂ ಸ್ವ ಸಾಮರ್ಥ್ಯವನ್ನು ನಂಬಿಕೊಂಡು ಬೆಳೆದವರು.
ಈಗ ಬಿ. ಶ್ರೀರಾಮುಲು ವಿರುದ್ಧದ ಕಾಂಗ್ರೆಸ್ ಅಸ್ತ್ರ. ಕಾಂಗ್ರೆಸ್ ಹೇಳುವುದು ಬಿಜೆಪಿಯ ಬಿ. ಶ್ರೀರಾಮುಲುಗೆ, ನಮ್ಮ ಬಿ. ನಾಗೇಂದ್ರ ಸಾಕು ಅಂತ. ಹೀಗಿರುವಾಗ ಬಿ. ಶ್ರೀರಾಮುಲು ರಾಜ್ಯಮಟ್ಟದ ನಾಯಕರಾಗಿ 80 ಕ್ಷೇತ್ರಗಳ ಸ್ಟಾರ್ ಕ್ಯಾಂಪೇನರ್ ಅಂತ ಬಿಜೆಪಿ ಘೋಷಣೆ ಮಾಡಿಯೇ ಬಿಡ್ತು. ಅಲ್ಲದೇ, ಡಿಸಿಎಂ ಅಭ್ಯರ್ಥಿ ಅಂತಾನೇ ಬಿಂಬಿಸಿತು.
ಬಿ. ನಾಗೇಂದ್ರ ಅವರಿಗೆ ಬಳ್ಳಾರಿ ಗ್ರಾಮೀಣ ಮತದಾರರ ಜೊತೆ ಮೂರು ದಶಕಗಳಿಂದ ನಿರಂತರ ಸಂಪರ್ಕ ಇದೆ. ಅನೇಕ ಸಂದರ್ಭಗಳಲ್ಲಿ ಬಳ್ಳಾರಿ ಗ್ರಾಮೀಣಕ್ಕೆ ಲಗ್ಗೆ ಹಾಕುವ ಅವಕಾಶ ಕಳೆದುಕೊಂಡಿದ್ದ ಅವರು, ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಯಲ್ಲಿ ಜನ ಗುಂಪು ಗುಂಪಾಗಿ ನಾಗೇಂದ್ರ ಅವರನ್ನು ನೋಡಲು ಸಾಲುಗಟ್ಟಿ ಬರುತ್ತಿದ್ದಾರೆ.
ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಒತ್ತಡದಲ್ಲೂ ಜನರೊಂದಿಗೆ ಮುಗುಳ್ನಗುತ್ತ, ಕೈಮುಗಿಯುತ್ತ ಮತ ಕೇಳುತ್ತಿರುವ ಬಿ. ನಾಗೇಂದ್ರ, ಕ್ಷೇತ್ರಕ್ಕೆ ಹೊಸಮುಖ. ಕಾಂಗ್ರೆಸ್ ಗೆ ಹೊಸ ಹುರುಪನ್ನು ತಂದಿದ್ದಾರೆ. ಔಪಚಾರಿಕವಾಗಿ ಒನ್ ಇಂಡಿಯಾ ಕನ್ನಡದ ಜೊತೆ ತಮ್ಮ ಅನಿಸಿಕೆ ಬಿಚ್ಚಿಟ್ಟಿದ್ದು ಹೀಗೆ...

ಕ್ಷೇತ್ರ ಬದಲಾವಣೆ ಏಕೆ?
ನನ್ನ ಬಾಲ್ಯ, ಯೌವ್ವನ ಕಳೆದದ್ದು ಇಲ್ಲೇ. ಅನೇಕ ಮಿತ್ರರಿದ್ದಾರೆ. ಬಂಧುಗಳಿದ್ದಾರೆ. ಕಾಂಗ್ರೆಸ್ ಸೇರುವಾಗಲೇ ಬಳ್ಳಾರಿ ಗ್ರಾಮೀಣದಲ್ಲಿ ಸ್ಪರ್ಧಿಸುವ ಮುಕ್ತ ಅವಕಾಶವಿತ್ತು. ಕೂಡ್ಲಿಗಿ - ಬಳ್ಳಾರಿ ಗ್ರಾಮೀಣ ಎನ್ನುವ ಗೊಂದಲ ತೀರಿದ ನಂತರ ಇಲ್ಲಿಂದ ಸ್ಪರ್ಧೆ.

ಕಾಂಗ್ರೆಸ್ ಸೇರಲು ಕಾರಣ?
ತತ್ವ - ಸಿದ್ಧಾಂತಗಳಲ್ಲಿಯ ಭಿನ್ನತೆ. ನನ್ನ ಜಾತ್ಯಾತೀತ ವ್ಯಕ್ತಿತ್ವ, ಸೌಹಾರ್ದ ಮನೋಭಾವ. ರೆಡ್ಡಿ ಬಳಗವನ್ನು ನಾನು ಬಿಟ್ಟಿಲ್ಲ. ಕಾರಣಾಂತರಗಳಿಂದ ಅಂತರ ಕಾಪಾಡಿಕೊಂಡಿದ್ದೇನೆ. ವೈಯಕ್ತಿಕ ಕಾರಣಗಳಿವೆ.

ಪ್ರಚಾರದ ವಿಷಯ?
ಸಿಎಂ ಸಾಹೇಬ್ರ ಐದು ವರ್ಷದ ಯಶಸ್ವಿ ಆಡಳಿತವೇ ನನ್ನ ಪ್ರಚಾರದ ವಿಷಯ. ತಂತ್ರಗಾರಿಕೆ ರಾಜಕೀಯದಲ್ಲಿ ಸಾಮಾನ್ಯ - ಸಹಜ. ಹೀಗಾಗಿ ಎಲ್ಲವನ್ನೂ ಹೇಳಲಿಕ್ಕೆ ಆಗಲ್ಲ. ಉಪ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ವಿಶೇಷ ಅನುದಾನ ಸಿಕ್ಕಿದೆ. ಸಾಕಷ್ಟು ಅಭಿವೃದ್ಧಿಯೂ ಆಗಿದೆ.

ಜನಸ್ಪಂದನೆ ಹೇಗಿದೆ?
ಜನರು ಮನೆಯ ಮಗನಂತೆ ಬರಮಾಡಿಕೊಳ್ಳುತ್ತಿದ್ದಾರೆ. ನಿರೀಕ್ಷೆಗೂ ಮೀರಿದ ಉತ್ತಮ ಸ್ಪಂದನೆ ಸಿಗುತ್ತಿದೆ. ಖುಷಿ ಆಗುತ್ತಿದೆ. ಬಿಸಿಲು ನಮ್ಮ ಖುಷಿಯನ್ನು ಹೆಚ್ಚಿಸುತ್ತಿದೆ. ಅಲ್ಲಂ ವೀರಭದ್ರಪ್ಪ ಅವರ ಕಾಲುಬಾಧೆಯ ಹಿನ್ನಲೆಯಲ್ಲಿ ಅವರ ಪುತ್ರ, ಜಿಲ್ಲಾ ಪಂಚಾಯಿತಿ ಸದಸ್ಯ ಅಲ್ಲಂ ಪ್ರಶಾಂತ್, ಬಿ. ರಾಂಪ್ರಸಾದ್, ಜೀವೇಶ್ವರಿ, ಎನ್. ಸೂರ್ಯನಾರಾಯಣರೆಡ್ಡಿ ಎಲ್ಲರೂ ಬರುತ್ತಿದ್ದಾರೆ.
ಕೆಲವೊಬ್ಬರು ಬೇರೆ ಕ್ಷೇತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಪಕ್ಷ ಗೆಲ್ಲಬೇಕಿದೆ. ಗೆಲ್ಲುತ್ತದೆ.

ನಿಮ್ಮ ಎದುರಾಳಿ ಯಾರು?
ಬಿಜೆಪಿ ಎದುರಾಳಿ. ಈ ಚುನಾವಣೆ ಕಾಂಗ್ರೆಸ್ - ಬಿಜೆಪಿ ಮಧ್ಯದ ಸ್ಪರ್ಧೆ, ವ್ಯಕ್ತಿಗತವಲ್ಲ. ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳು ಒಂದೇ. ಶಾಂತಿಯುತ ಚುನಾವಣೆ ನಡೆಯಬೇಕು. ಮತದಾರರಲ್ಲಿ ವಿಶೇಷವಾಗಿ ಮನವರಿಕೆ ಮಾಡಿಕೊಂಡು, ಶಾಂತಿಯುತ ಚುನಾವಣೆ ನಡೆಸಲು ಮನವಿ ಮಾಡುತ್ತಿರುವೆ.
ಜಿಲ್ಲೆಯಾದ್ಯಂತ ಶಾಂತಿಯುತ ಚುನಾವಣೆ ನಡೆಯುವ ವಿಶ್ವಾಸವಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications