ಉಡುಪಿ ಕ್ಷೇತ್ರ flashback : ಮಧ್ವರಾಜ್ ಕುಟುಂಬ ರಾಜಕೀಯ
ಉಡುಪಿ, ಏಪ್ರಿಲ್ 04: ಕರಾವಳಿಯಲ್ಲಿ ಅಪರೂಪಕ್ಕೆ ಎಂಬಂತೆ ಕುಟುಂಬ ರಾಜಕೀಯ ಕಂಡು ಬರುವುದು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಎನ್ನಬಹುದು.
ಉಡುಪಿ ಕ್ಷೇತ್ರದಲ್ಲಿ ತಂದೆ, ತಾಯಿ, ಮಗ, ಒಂದೇ ಕ್ಷೇತ್ರದಲ್ಲಿ ಶಾಸಕರಾದ ನಿದರ್ಶನ ಕಾಣಬಹುದು. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಎಂ.ಮಧ್ವರಾಜ್, ಅವರ ಪತ್ನಿ ಮನೋರಮಾ ಮಧ್ವರಾಜ್, ಪುತ್ರ ಪ್ರಮೋದ್ ಮಧ್ವರಾಜ್ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. 1957 ರಿಂದ 2013 ರ ತನಕದ ಚುನಾವಣಾ ಕದನಲ್ಲಿ ಈ ಕುಟುಂಬದ ಸದಸ್ಯರು ಒಟ್ಟು ಆರು ಬಾರಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಮನೋರಮಾ ಮಧ್ವರಾಜ್ ಮತ್ತು ಪ್ರಮೋದ್ ಮಧ್ವರಾಜ್ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

* 1962ರಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ, ಉದ್ಯಮಿ ಎಂ.ಮಧ್ವರಾಜ್(17,511 ಮತಗಳು) ಅವರು ಪಿಎಸ್ಪಿಯ ಉಪೇಂದ್ರ ನಾಯಕ್(8003 ಮತಗಳು) ಅವರನ್ನು ಸೋಲಿಸಿ, ವಿಧಾನಸಭೆ ಪ್ರವೇಶಿಸಿದ್ದರು.
* 1972ರಲ್ಲಿ ಮಧ್ವರಾಜ್ ಪತ್ನಿ ಮನೋರಮಾ ಮಧ್ವರಾಜ್ (26,020 ಮತಗಳು) ಅವರು ವಿ.ಎಸ್ ಆಚಾರ್ಯ (ಬಿಜೆಎಸ್) (11076) ಮೊದಲ ಬಾರಿಗೆ ಕಣಕ್ಕಿಳಿದು, 15 ಸಾವಿರ ಮತಗಳ ಅಂತರದ ಜಯ ಸಾಧಿಸಿ ಶಾಸಕಿಯಾದರು.
* 1978ರಲ್ಲಿ ಕಾಂಗ್ರೆಸ್ ಐ ನಿಂದ ಸ್ಪರ್ಧಿಸಿ 30899 ಮತಗಳನ್ನು ಗಳಿಸಿ ಪುನರಾಯ್ಕೆಯಾಗಿ, ಗುಂಡೂರಾವ್ ಸರ್ಕಾರದಲ್ಲಿ ಸಚಿವೆಯಾಗಿದ್ದರು.

* 1983ರ ಚುನಾವಣೆಯಲ್ಲಿ ವಿಎಸ್ ಆಚಾರ್ಯ ವಿರುದ್ಧ ಮನೋರಮಾ ಸೋಲು ಅನುಭವಿಸಿದರು.
* ಮನೋರಮಾ ಅವರು 1985 ಹಾಗೂ 1989ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
* 1994ರಲ್ಲಿ ಕೆಸಿಪಿಯ ಯು. ಆರ್ ಸಭಾಪತಿ ವಿರುದ್ಧ ಮನೋರಮಾ ಸೋಲುಕಂಡರು.
* 2008ರಲ್ಲಿ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್(56441) ಅವರು ಕೆ ರಘುಪತಿ ಭಟ್(58920) ವಿರುದ್ಧ ಸೋಲು ಕಂಡರು.
*. 2013ರಲ್ಲಿ ಪ್ರಮೋದ್ ಮಧ್ವರಾಜ್ ಉಡುಪಿ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾದರು.
ಈ ನಡುವೆ ಮನೋರಮಾ ಅವರು 2004ರಲ್ಲಿ ಬಿಜೆಪಿ ಸೇರಿ ಉಡುಪಿ ಕ್ಷೇತ್ರದ ಸಂಸದೆಯಾಗಿ ಚುನಾಯಿತರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications