ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಚನ್ನಪಟ್ಟಣದಲ್ಲಿ ಎಚ್ಡಿಕೆ ಜಯಭೇರಿ
ಬೆಂಗಳೂರು, ಏಪ್ರಿಲ್ 24: ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ಬಾರಿ ಸಾಮಾಜಿಕ ಜಾಲ ತಾಣಗಳು ಭಾರಿ ಪರಿಣಾಮ ಬೀರುತ್ತಿವೆ. ಈ ಸಂದರ್ಭದಲ್ಲಿ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಪ್ರತಿದಿನ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.
ಬೊಂಬೆನಾಡು ಚನ್ನಪಟ್ಟಣದಲ್ಲಿ ಸದ್ಯ ಸಿ.ಪಿ ಯೋಗೇಶ್ವರ ಅವರು ಹಾಲಿ ಶಾಸಕ. ಒಕ್ಕಲಿಗ ಮತದಾರರೇ ಇಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ.

2013 ರ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ ಯೋಗೇಶ್ವರ್ 80,099 ಮತ ಪಡೆದು ಜಯಭೇರಿ ಗಳಿಸಿದ್ದರೆ, ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅನಿತಾ ಕುಮಾರಸ್ವಾಮಿ 73,635 ಮತ ಪಡೆದು ಗೆಲುವಿನಿಂದ ವಂಚಿತರಾಗಿದ್ದರು.
ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ನಿಂದ ಎಚ್.ಎಂ.ರೇವಣ್ಣ, ಜೆಡಿಎಸ್ನಿಂದ ಎಚ್.ಡಿ.ಕುಮಾರಸ್ವಾಮಿ ಕಣದಲ್ಲಿದ್ದಾರೆ
ಕ್ಷೇತ್ರದಲ್ಲಿ 2013ರಲ್ಲಿ ಪುರುಷ ಮತದಾರರ ಸಂಖ್ಯೆ 105,688 ಇದ್ದರೆ, ಮಹಿಳೆಯರ ಸಂಖ್ಯೆ 109,015 ಇತ್ತು. ಅಂದರೆ ಒಟ್ಟು ಮತದಾರರ ಸಂಖ್ಯೆ 214,703ಇತ್ತು. ಜಾತಿವಾರು ಮತಗಳು ಒಕ್ಕಲಿಗರು 105,920, ದಲಿತರು 39,250, ಕುರುಬರು 7,136, ಮುಸ್ಲಿಮರು 24,000, ಲಿಂಗಾಯಿತರು 9,450, ತಿಗಳರು 8,232, ಬೆಸ್ತರು 9,700, ಇತರೆ 10,500 ಜನರಿದ್ದರು.

ಫೇಸ್ಬುಲ್ ಲೈವ್ ಮತದಾನ:
ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚನ್ನಪಟ್ಟಣದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಒಂದು ಅಥವಾ ಎರಡು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ಈ ವೇಳೆಯಲ್ಲಿ ಮುನ್ನೂರಕ್ಕೂ ಅಧಿಕ ಬಾರಿ ಶೇರ್ ಆಗಿದ್ದು, 40 ಸಾವಿರಕ್ಕೂ ಅಧಿಕ ಮಂದಿ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು, 4ಸಾವಿರಕ್ಕೂ ಅಧಿಕ ಮಂದಿ ಕಾಮೆಂಟ್ ಮಾಡಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಸಿಪಿಯೋಗೇಶ್ವರ್ ಅವರಿಗೆ 684 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಎಚ್ಎಂ ರೇವಣ್ಣ ಅವರಿಗೆ 408ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ನ ಎಚ್ಡಿ ಕುಮಾರಸ್ವಾಮಿ ಅವರಿಗೆ 2835 ಮತಗಳು ಸಿಕ್ಕಿದ್ದು, ಜಯಭೇರಿ ಬಾರಿಸಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications