ರಾಜ್ಯಪಾಲ ವಜುಭಾಯಿ ವಾಲ ಮುಂದಿರುವ ನಾಲ್ಕು ಆಯ್ಕೆಗಳು
ಬೆಂಗಳೂರು, ಮೇ 15: ಕರ್ನಾಟಕ ಚುನಾವಣೆ ಫಲಿತಾಂಶದ ಬಗ್ಗೆ ರಾಜಕೀಯ ಪಂಡಿತರ, ಜ್ಯೋತಿಷಿಗಳ, ಟಿವಿ ಚಾನಲ್ ಸಮೀಕ್ಷೆಗಳ ಭವಿಷ್ಯ, ನಿರೀಕ್ಷೆಯನ್ನು ಮೀರಿ ಮತದಾರ ಮಹಾಪ್ರಭು ತನ್ನ ಜನಾದೇಶವನ್ನು ಮೇ 15ರಂದು ನೀಡಿದ್ದಾನೆ. ಅತಂತ್ರ ವಿಧಾನಸಭೆ ಸೃಷ್ಟಿಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸಾಧ್ಯತೆ ಉಂಟಾಗಿದ್ದು, ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ.
15ನೇ ವಿಧಾನಸಭೆಗಾಗಿ ಮೇ 12ರಂದು ಚುನಾವಣೆ ನಡೆದಿದ್ದು, ಮೇ 15ರಂದು ಫಲಿತಾಂಶ ಹೊರಬಂದಿದೆ. ಕಾಂಗ್ರೆಸ್ ಜತೆ ಮೈತ್ರಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಸಮ್ಮತಿಸಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯನ್ನಾಗಿಸಲು ಪ್ರಯತ್ನ ಮುಂದುವರಿದಿದೆ. ಈ ನಡುವೆ ಬಿಜೆಪಿ ಕೂಡಾ ಅತಿದೊಡ್ಡ ಪಕ್ಷವಾಗಿರುವುದರಿಂದ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಿದೆ. ಈ ಸಂದರ್ಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಮುಂದಿರುವ ನಾಲ್ಕು ಆಯ್ಕೆಗಳು ಏನೇನಿದೆ
ಈಗ 222 ಕ್ಷೇತ್ರಗಳ ಫಲಿತಾಂಶ ಇಲ್ಲಿದೆ
* ಬಲಾಬಲ 222/224: ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38, ಇತರೆ 2
* ಅಧಿಕಾರ ಸ್ಥಾಪನೆಗೆ ಬೇಕಾದ ಸಂಖ್ಯೆ : 112
* ಉಪ ಚುನಾವಣೆ ನಡೆಯಬೇಕಾಗಿರುವ ಕ್ಷೇತ್ರಗಳು : 2+1(ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ, ಒಂದು ಕ್ಷೇತ್ರಕ್ಕೆ ಮತ್ತೆ ಚುನಾವಣೆ ನಡೆಯಲಿದೆ.
* ಗೆದ್ದಿರುವ ಇತರೆ ಪೈಕಿ ಬಿಎಸ್ಪಿ ಅಭ್ಯರ್ಥಿ ಜೆಡಿಎಸ್ ಬೆಂಬಲ ನೀಡಲಿದ್ದಾರೆ. ಕೆಪಿಜೆಪಿಯ ಅಭ್ಯರ್ಥಿ ಬಿಜೆಪಿಗೆ ಬೆಂಬಲಿಸಲಿದ್ದಾರೆ.

ವಜುಭಾಯಿ ವಾಲ ಅವರ ಮುಂದಿರುವ ಆಯ್ಕೆ 01
ಜನಾದೇಶಕ್ಕೆ ಬೆಲೆ ಕೊಟ್ಟು ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಬಹುದು.
* ಸದ್ಯದ ಬಲಾಬಲದಂತೆ 222/224: ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38, ಇತರೆ 2
* ಅಧಿಕಾರ ಸ್ಥಾಪನೆಗೆ ಬೇಕಾದ ಸಂಖ್ಯೆ : 112
ಸರ್ಕಾರ ರಚನೆ ಮಾಡಿ, ಬಹುಮತ ಸಾಬೀತುಪಡಿಸುತ್ತೇವೆ ಎಂದು ಬಿಜೆಪಿಯ ಸಿಎಂ ಅಭ್ಯರ್ಥಿ, ಶಿಕಾರಿಪುರದ ಶಾಸಕ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
* ತಮ್ಮ ಬಳಿ 112 ಶಾಸಕರಿದ್ದಾರೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಬೇಕಾಗುತ್ತದೆ. ಇದು ಒಮ್ಮತವಾದರೆ, ಸರ್ಕಾರ ರಚಿಸಲು ಸೂಚಿಸಬಹುದು. ನಿಗದಿತ ಅವಧಿಯಲ್ಲಿ ಬಹುಮತ ಸಾಬೀತುಪಡಿಸಬೇಕಾಗುತ್ತದೆ.

ವಜುಭಾಯಿ ವಾಲ ಮುಂದಿರುವ ಆಯ್ಕೆ 02
ಜನಾದೇಶಕ್ಕೆ ಬೆಲೆ ಕೊಟ್ಟು ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿದರೂ, ಬಹುಮತ ಸಾಬೀತುಪಡಿಸಲು ಬೇಕಾದ ಸಂಖ್ಯೆ ಇಲ್ಲ ಎಂದೆನಿಸಿದರೆ ಅತಿದೊಡ್ಡ ಪಕ್ಷ ಹಾಗೂ ಇತರೆ, ಪಕ್ಷೇತರರ ನೆರವು ಪಡೆದು ಸಂಖ್ಯಾಬಲ ತೋರಿಸುವಂತೆ ಸೂಚಿಸಬಹುದು.

ವಜುಭಾಯಿ ವಾಲ ಮುಂದಿರುವ 3ನೇ ಆಯ್ಕೆ
ಚುನಾವಣೋತ್ತರ ಮೈತ್ರಿ ಸಾಧಿಸಿ, ಮೈತ್ರಿ ಸರ್ಕಾರಕ್ಕೆ ಮುಂದಾಗುವ ಎರಡು ಅಥವಾ ಎರಡಕ್ಕಿಂತ ಹೆಚ್ಚು ಪಕ್ಷಗಳಿಗೆ ಅವಕಾಶ ನೀಡಬಹುದು. ಸರ್ಕಾರ ರಚನೆಗೆ ಮಾಡಲು ಅತಿದೊಡ್ಡ ಪಕ್ಷ ಹಕ್ಕು ಮಂಡನೆ ಮಾಡಿದ್ದರೂ ಮೈತ್ರಿ ಸರ್ಕಾರ ಸಾಧಿಸಿದ ಪಕ್ಷಗಳಿಗೆ ಅವಕಾಶ ನೀಡಬಹುದು. ಈ ಅಧಿಕಾರ ರಾಜ್ಯಪಾಲರ ಕೈಲಿರುತ್ತದೆ. ಯಾವ ಪಕ್ಷಕ್ಕೆ ಅಧಿಕಾರ ಸ್ಥಾಪನೆಗೆ ಸೂಚಿಸಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ಆದರೆ, ಆ ಪಕ್ಷ ಬಹುಮತ ಸಾಬೀತುಪಡಿಸಲು ಕಾಲಾವಕಾಶ ಕೋರಿ, ಸದನದಲ್ಲಿ ವಿಶ್ವಾಸಮತ ಗಳಿಸಬೇಕಾಗುತ್ತದೆ.

ವಜುಭಾಯಿ ವಾಲ ಮುಂದಿರುವ 4ನೇ ಆಯ್ಕೆ
ಜನಾದೇಶ ಅತಿದೊಡ್ಡ ಪಕ್ಷ ಅಥವಾ ಮ್ಯಾಜಿಕ್ ನಂಬರ್ ದಾಟುವ ವಿಶ್ವಾಸ ಹೊಂದಿರುವ ಮೈತ್ರಿಕೂಟ ಅಲ್ಲದೆ, ಚುನವಣೋತ್ತರ ಮೈತ್ರಿ ಸಾಧಿಸಿದ ಎರಡು ಅಥವಾ ಎರಡಕ್ಕಿಂತ ಹೆಚ್ಚು ಪಕ್ಷಗಳು ಜತೆಗೆ ಬಾಹ್ಯ ಬೆಂಬಲ ಪಡೆದ ಪಕ್ಷೇತರ ನೆರವಿನಿಂದ ಸರ್ಕಾರ ರಚನೆಯಾಗುವ ವಿಶ್ವಾಸ ಉಂಟಾದರೆ, ರಾಜ್ಯಪಾಲರು ಅಂಥ ಮೈತ್ರಿಕೂಟಕ್ಕೆ ಸರ್ಕಾರ ರಚನೆ ಮಾಡಿ, ವಿಶ್ವಾಸಮತ ಗಳಿಸುವಂತೆ ಕೋರಬಹುದು.

ಬಿಜೆಪಿ ತಂತ್ರಗಾರಿಕೆ
ಗೋವಾ ಹಾಗೂ ಮಣಿಪುರದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಮಣಿಪುರದಲ್ಲಿ 60 ಕ್ಷೇತ್ರಗಳಲ್ಲಿ ಬಿಜೆಪಿ 21, ಕಾಂಗ್ರೆಸ್ 28ಗಳಿಸಿತ್ತು. ಆದರೆ, ಪಕ್ಷೇತರರನ್ನು ತಮ್ಮ ತೆಕ್ಕೆಗೆ ಹಾಕಿಕೊಂಡ ಬಿಜೆಪಿ ಅಧಿಕಾರ ಸ್ಥಾಪಿಸಿತು.
ಗೋವಾದಲ್ಲಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ 17, ಬಿಜೆಪಿ 13 ಸ್ಥಾನ ಗಳಿಸಿತ್ತು. ಆದರೆ, ಬಿಜೆಪಿ ಮೈತ್ರಿ ಸಾಧಿಸಿ, ಸರ್ಕಾರ ರಚಿಸಿತು.
|
ಕಾನೂನು ಏನು ಹೇಳುತ್ತದೆ?
ಒಂದು ವೇಳೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೆ ಕಾನೂನು ಏನು ಹೇಳುತ್ತದೆ? ರಾಜ್ಯಪಾಲರ ಮುಂದೆ ಕಾನೂನಾತ್ಮಕವಾಗಿ ಏನೇನು ಆಯ್ಕೆಗಳಿರುತ್ತವೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications