ಕರ್ನಾಟಕದ ಫಲಿತಾಂಶ ಕೆಲವು ಪಾಠ ಕಲಿಸಿದೆ: ನೌಹೀರಾ ಶೇಖ್
ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆ, ಮತ್ತು ಫಲಿತಾಂಶ ನನಗೆ ಮತ್ತು ಪಕ್ಷಕ್ಕೆ ಹಲವೂ ಹೊಸ ಅನುಭವ, ಪಾಠ ಕಲಿಸಿದೆ ಎಂದೂ ಎಂಇಪಿ ಪಕ್ಷದ ರಾಷ್ಟ್ರೀಯ ಆಧ್ಯಕ್ಷೆ ಡಾ. ನೌಹೀರಾ ಶೇಖ್ ಹೇಳಿದ್ದಾರೆ.
ವಿಧಾನಸಭಾ ಚುನವಣಾ ಫಲಿತಾಂಶ ಪ್ರಕಟವಾದ ನಂತರ ಹೇಳಿಕೆ ನೀಡಿರುವ ಅವರು, ಏನೇ ಆಗಲಿ, ಜನರ ತೀರ್ಪಿಗೆ ತಲೆಬಾಗುವೆ.ಮುಂದಿನದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಕನ್ನಡಿಗರ ಹೃದಯ ಗೆಲ್ಲುವ ಪ್ರಯತ್ನ ಮುಂದುವರೆಯಲಿದೆ
ಕೇವಲ 4 ತಿಂಗಳ ಅವಧಿಯಲ್ಲಿ ಎಂಇಪಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂಬ ಸಮಾಧಾನವಿದೆ. ಸೋಲು- ಗೆಲುವು ಎಂದಿಗೂ ನಮ್ಮ ಗುರಿ ಮತ್ತು ಆತ್ಮವಿಶ್ವಾಸ ಕುಗ್ಗಿಸುವುದಿಲ್ಲ. ಕನ್ನಡಿಗರ ಹೃದಯ ಗೆದ್ದು, ಶಕ್ತಿ ಸೌಧದಲ್ಲಿ ಅಧಿಕಾರ ಹಿಡಿಯುವತನಕ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ.

ಕನ್ನಡಿಗರ ತೀರ್ಮಾನವನ್ನು ತುಂಬು ಹೃದಯದಿಂದ ಮತ್ತೊಮ್ಮೆ ಸ್ವಾಗತಿಸುತ್ತೇನೆ. ಅಲ್ಪಕಾಲದ ಅವಧಿಯಲ್ಲೆ ಪಕ್ಷಕ್ಕೆ ಭದ್ರಬುನಾದಿ ಹಾಕಲು ಅವಕಾಶ ಮಾಡಿಕೊಟ್ಟ ಜನತೆಗೆ ನಾನು ಸದಾ ಚಿರರುಣಿ. ಜಗತ್ತಿನಲ್ಲಿ ಬದಲಾವಣೆಯೊಂದೆ ಶಾಶ್ವತ ಎಂಬ ನಿಯಮದಲ್ಲಿ ನಮ್ಮ ಅಚಲ ನಂಬಿಕೆಗೆ, ಜನರು ಇಂದಲ್ಲ ನಾಳೆಯಾದರೂ ಬದಲಾವಣೆ ಬಯಸಿ ಅವಕಾಶ ಮಾಡಿಕೊಡುತ್ತಾರೆ ಇಂದಿನ ಸೋಲು ನಾಳಿನ ಗೆಲುವಿನ ಸೋಪಾನ ಎಂಬುದನ್ನು ನಂಬಿದ್ದೇವೆ.
ಇನ್ನು ಒಂದು ವರ್ಷದ ಅವಧಿಯಲ್ಲೇ ಲೋಕಸಭಾ ಚುನಾವಣೆ ಬರಲಿದ್ದು ಮತ್ತೊಮ್ಮೆ ಕನ್ನಡಿಗರ ಅದೃಷ್ಟ ಪರೀಕ್ಷೆಗೆ ಬರಲು ಕಾತುರಳಾಗಿದ್ದೇನೆ. ಏನೇ ಆಗಲಿ ಪಕ್ಷಕ್ಕೆ ರಾಜ್ಯದಲ್ಲಿ ಗಟ್ಟಿನೆಲೆ ಸಿಗಲಿದೆ ಎಂಬ ನಂಬಿಕೆಯನ್ನು ರಾಜ್ಯದ ಜನತೆ ಹುಸಿಮಾಡುವುದಿಲ್ಲ ಎಂಬುದು ನಾನೂ ಕಂಡುಕೊಂಡ ಸತ್ಯ. ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಪಡೆಯುತ್ತೇನೆ.
ಪಡೆಯಬೇಕು ಎಂಬ ಛಲ-ಬಲದೊಂದಿಗೆ ಮತ್ತೊಮ್ಮೆ ಸಮಸ್ತ ಕನ್ನಡಿಗರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಅಲ್ಪ ಕಾಲದ ಅವಧಿಯಲ್ಲಿ ಪಕ್ಷ ಕಟ್ಟಿ ಜನರ ನಾಲಿಗೆ ಮೇಲೆ ಮತ್ತು ಮನೆ-ಮನೆಗಳಲ್ಲಿ ಹರಿದಾಡುವಂತೆ ಮಾಡಿದ ಕಾರ್ಯಕರ್ತರಿಗೆ, ಮುಖಂಡರಿಗೆ ಮತ್ತು ಇದಕ್ಕೆ ಪೂರ್ಣ ಸಹಕಾರ ನೀಡಿದ ಎಲ್ಲ ಮಾಧ್ಯಮ ಮಿತ್ರರಿಗೆ ಕೊನೆಯದಾಗಿ ಹಗಲಿರುಳು ಅವಿರತವಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಅಭಿನಂದನೆ ಹೇಳಬಯಸುತ್ತೇನೆ. ಈ ಪ್ರೀತಿ, ವಿಶ್ವಾಸ ಸದಾ ಹೀಗೆಯೇ ಮುಂದುವರಿಯಲಿ ಎಂದು ಆಶಿಸುವುದಾಗಿಯೂ ನೌಹೀರಾ ಶೇಖ್ ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications