ಕರ್ನಾಟಕದ ಫಲಿತಾಂಶ ಕೆಲವು ಪಾಠ ಕಲಿಸಿದೆ: ನೌಹೀರಾ ಶೇಖ್
ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆ, ಮತ್ತು ಫಲಿತಾಂಶ ನನಗೆ ಮತ್ತು ಪಕ್ಷಕ್ಕೆ ಹಲವೂ ಹೊಸ ಅನುಭವ, ಪಾಠ ಕಲಿಸಿದೆ ಎಂದೂ ಎಂಇಪಿ ಪಕ್ಷದ ರಾಷ್ಟ್ರೀಯ ಆಧ್ಯಕ್ಷೆ ಡಾ. ನೌಹೀರಾ ಶೇಖ್ ಹೇಳಿದ್ದಾರೆ.
ವಿಧಾನಸಭಾ ಚುನವಣಾ ಫಲಿತಾಂಶ ಪ್ರಕಟವಾದ ನಂತರ ಹೇಳಿಕೆ ನೀಡಿರುವ ಅವರು, ಏನೇ ಆಗಲಿ, ಜನರ ತೀರ್ಪಿಗೆ ತಲೆಬಾಗುವೆ.ಮುಂದಿನದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಕನ್ನಡಿಗರ ಹೃದಯ ಗೆಲ್ಲುವ ಪ್ರಯತ್ನ ಮುಂದುವರೆಯಲಿದೆ
ಕೇವಲ 4 ತಿಂಗಳ ಅವಧಿಯಲ್ಲಿ ಎಂಇಪಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂಬ ಸಮಾಧಾನವಿದೆ. ಸೋಲು- ಗೆಲುವು ಎಂದಿಗೂ ನಮ್ಮ ಗುರಿ ಮತ್ತು ಆತ್ಮವಿಶ್ವಾಸ ಕುಗ್ಗಿಸುವುದಿಲ್ಲ. ಕನ್ನಡಿಗರ ಹೃದಯ ಗೆದ್ದು, ಶಕ್ತಿ ಸೌಧದಲ್ಲಿ ಅಧಿಕಾರ ಹಿಡಿಯುವತನಕ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ.

ಕನ್ನಡಿಗರ ತೀರ್ಮಾನವನ್ನು ತುಂಬು ಹೃದಯದಿಂದ ಮತ್ತೊಮ್ಮೆ ಸ್ವಾಗತಿಸುತ್ತೇನೆ. ಅಲ್ಪಕಾಲದ ಅವಧಿಯಲ್ಲೆ ಪಕ್ಷಕ್ಕೆ ಭದ್ರಬುನಾದಿ ಹಾಕಲು ಅವಕಾಶ ಮಾಡಿಕೊಟ್ಟ ಜನತೆಗೆ ನಾನು ಸದಾ ಚಿರರುಣಿ. ಜಗತ್ತಿನಲ್ಲಿ ಬದಲಾವಣೆಯೊಂದೆ ಶಾಶ್ವತ ಎಂಬ ನಿಯಮದಲ್ಲಿ ನಮ್ಮ ಅಚಲ ನಂಬಿಕೆಗೆ, ಜನರು ಇಂದಲ್ಲ ನಾಳೆಯಾದರೂ ಬದಲಾವಣೆ ಬಯಸಿ ಅವಕಾಶ ಮಾಡಿಕೊಡುತ್ತಾರೆ ಇಂದಿನ ಸೋಲು ನಾಳಿನ ಗೆಲುವಿನ ಸೋಪಾನ ಎಂಬುದನ್ನು ನಂಬಿದ್ದೇವೆ.
ಇನ್ನು ಒಂದು ವರ್ಷದ ಅವಧಿಯಲ್ಲೇ ಲೋಕಸಭಾ ಚುನಾವಣೆ ಬರಲಿದ್ದು ಮತ್ತೊಮ್ಮೆ ಕನ್ನಡಿಗರ ಅದೃಷ್ಟ ಪರೀಕ್ಷೆಗೆ ಬರಲು ಕಾತುರಳಾಗಿದ್ದೇನೆ. ಏನೇ ಆಗಲಿ ಪಕ್ಷಕ್ಕೆ ರಾಜ್ಯದಲ್ಲಿ ಗಟ್ಟಿನೆಲೆ ಸಿಗಲಿದೆ ಎಂಬ ನಂಬಿಕೆಯನ್ನು ರಾಜ್ಯದ ಜನತೆ ಹುಸಿಮಾಡುವುದಿಲ್ಲ ಎಂಬುದು ನಾನೂ ಕಂಡುಕೊಂಡ ಸತ್ಯ. ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಪಡೆಯುತ್ತೇನೆ.
ಪಡೆಯಬೇಕು ಎಂಬ ಛಲ-ಬಲದೊಂದಿಗೆ ಮತ್ತೊಮ್ಮೆ ಸಮಸ್ತ ಕನ್ನಡಿಗರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಅಲ್ಪ ಕಾಲದ ಅವಧಿಯಲ್ಲಿ ಪಕ್ಷ ಕಟ್ಟಿ ಜನರ ನಾಲಿಗೆ ಮೇಲೆ ಮತ್ತು ಮನೆ-ಮನೆಗಳಲ್ಲಿ ಹರಿದಾಡುವಂತೆ ಮಾಡಿದ ಕಾರ್ಯಕರ್ತರಿಗೆ, ಮುಖಂಡರಿಗೆ ಮತ್ತು ಇದಕ್ಕೆ ಪೂರ್ಣ ಸಹಕಾರ ನೀಡಿದ ಎಲ್ಲ ಮಾಧ್ಯಮ ಮಿತ್ರರಿಗೆ ಕೊನೆಯದಾಗಿ ಹಗಲಿರುಳು ಅವಿರತವಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಅಭಿನಂದನೆ ಹೇಳಬಯಸುತ್ತೇನೆ. ಈ ಪ್ರೀತಿ, ವಿಶ್ವಾಸ ಸದಾ ಹೀಗೆಯೇ ಮುಂದುವರಿಯಲಿ ಎಂದು ಆಶಿಸುವುದಾಗಿಯೂ ನೌಹೀರಾ ಶೇಖ್ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications