ಕರ್ನಾಟಕದ ಫಲಿತಾಂಶ ಕೆಲವು ಪಾಠ ಕಲಿಸಿದೆ: ನೌಹೀರಾ ಶೇಖ್
ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆ, ಮತ್ತು ಫಲಿತಾಂಶ ನನಗೆ ಮತ್ತು ಪಕ್ಷಕ್ಕೆ ಹಲವೂ ಹೊಸ ಅನುಭವ, ಪಾಠ ಕಲಿಸಿದೆ ಎಂದೂ ಎಂಇಪಿ ಪಕ್ಷದ ರಾಷ್ಟ್ರೀಯ ಆಧ್ಯಕ್ಷೆ ಡಾ. ನೌಹೀರಾ ಶೇಖ್ ಹೇಳಿದ್ದಾರೆ.
ವಿಧಾನಸಭಾ ಚುನವಣಾ ಫಲಿತಾಂಶ ಪ್ರಕಟವಾದ ನಂತರ ಹೇಳಿಕೆ ನೀಡಿರುವ ಅವರು, ಏನೇ ಆಗಲಿ, ಜನರ ತೀರ್ಪಿಗೆ ತಲೆಬಾಗುವೆ.ಮುಂದಿನದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಕನ್ನಡಿಗರ ಹೃದಯ ಗೆಲ್ಲುವ ಪ್ರಯತ್ನ ಮುಂದುವರೆಯಲಿದೆ
ಕೇವಲ 4 ತಿಂಗಳ ಅವಧಿಯಲ್ಲಿ ಎಂಇಪಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂಬ ಸಮಾಧಾನವಿದೆ. ಸೋಲು- ಗೆಲುವು ಎಂದಿಗೂ ನಮ್ಮ ಗುರಿ ಮತ್ತು ಆತ್ಮವಿಶ್ವಾಸ ಕುಗ್ಗಿಸುವುದಿಲ್ಲ. ಕನ್ನಡಿಗರ ಹೃದಯ ಗೆದ್ದು, ಶಕ್ತಿ ಸೌಧದಲ್ಲಿ ಅಧಿಕಾರ ಹಿಡಿಯುವತನಕ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ.

ಕನ್ನಡಿಗರ ತೀರ್ಮಾನವನ್ನು ತುಂಬು ಹೃದಯದಿಂದ ಮತ್ತೊಮ್ಮೆ ಸ್ವಾಗತಿಸುತ್ತೇನೆ. ಅಲ್ಪಕಾಲದ ಅವಧಿಯಲ್ಲೆ ಪಕ್ಷಕ್ಕೆ ಭದ್ರಬುನಾದಿ ಹಾಕಲು ಅವಕಾಶ ಮಾಡಿಕೊಟ್ಟ ಜನತೆಗೆ ನಾನು ಸದಾ ಚಿರರುಣಿ. ಜಗತ್ತಿನಲ್ಲಿ ಬದಲಾವಣೆಯೊಂದೆ ಶಾಶ್ವತ ಎಂಬ ನಿಯಮದಲ್ಲಿ ನಮ್ಮ ಅಚಲ ನಂಬಿಕೆಗೆ, ಜನರು ಇಂದಲ್ಲ ನಾಳೆಯಾದರೂ ಬದಲಾವಣೆ ಬಯಸಿ ಅವಕಾಶ ಮಾಡಿಕೊಡುತ್ತಾರೆ ಇಂದಿನ ಸೋಲು ನಾಳಿನ ಗೆಲುವಿನ ಸೋಪಾನ ಎಂಬುದನ್ನು ನಂಬಿದ್ದೇವೆ.
ಇನ್ನು ಒಂದು ವರ್ಷದ ಅವಧಿಯಲ್ಲೇ ಲೋಕಸಭಾ ಚುನಾವಣೆ ಬರಲಿದ್ದು ಮತ್ತೊಮ್ಮೆ ಕನ್ನಡಿಗರ ಅದೃಷ್ಟ ಪರೀಕ್ಷೆಗೆ ಬರಲು ಕಾತುರಳಾಗಿದ್ದೇನೆ. ಏನೇ ಆಗಲಿ ಪಕ್ಷಕ್ಕೆ ರಾಜ್ಯದಲ್ಲಿ ಗಟ್ಟಿನೆಲೆ ಸಿಗಲಿದೆ ಎಂಬ ನಂಬಿಕೆಯನ್ನು ರಾಜ್ಯದ ಜನತೆ ಹುಸಿಮಾಡುವುದಿಲ್ಲ ಎಂಬುದು ನಾನೂ ಕಂಡುಕೊಂಡ ಸತ್ಯ. ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಪಡೆಯುತ್ತೇನೆ.
ಪಡೆಯಬೇಕು ಎಂಬ ಛಲ-ಬಲದೊಂದಿಗೆ ಮತ್ತೊಮ್ಮೆ ಸಮಸ್ತ ಕನ್ನಡಿಗರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಅಲ್ಪ ಕಾಲದ ಅವಧಿಯಲ್ಲಿ ಪಕ್ಷ ಕಟ್ಟಿ ಜನರ ನಾಲಿಗೆ ಮೇಲೆ ಮತ್ತು ಮನೆ-ಮನೆಗಳಲ್ಲಿ ಹರಿದಾಡುವಂತೆ ಮಾಡಿದ ಕಾರ್ಯಕರ್ತರಿಗೆ, ಮುಖಂಡರಿಗೆ ಮತ್ತು ಇದಕ್ಕೆ ಪೂರ್ಣ ಸಹಕಾರ ನೀಡಿದ ಎಲ್ಲ ಮಾಧ್ಯಮ ಮಿತ್ರರಿಗೆ ಕೊನೆಯದಾಗಿ ಹಗಲಿರುಳು ಅವಿರತವಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಅಭಿನಂದನೆ ಹೇಳಬಯಸುತ್ತೇನೆ. ಈ ಪ್ರೀತಿ, ವಿಶ್ವಾಸ ಸದಾ ಹೀಗೆಯೇ ಮುಂದುವರಿಯಲಿ ಎಂದು ಆಶಿಸುವುದಾಗಿಯೂ ನೌಹೀರಾ ಶೇಖ್ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications