ಪ್ರಿಯಾಕೃಷ್ಣ ಸೇರಿದಂತೆ ಕಣದಲ್ಲಿ 883 ಕೋಟ್ಯಧಿಪತಿಗಳು
ಬೆಂಗಳೂರು, ಮೇ 07 : ಕರ್ನಾಟಕ ಚುನಾವಣಾ ಕಣದಲ್ಲಿ ಸರಿ ಸುಮಾರು 883 ಕೋಟ್ಯಧಿಪತಿಗಳಿದ್ದಾರೆ. ಜತೆಗೆ 391 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮೊಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್ ) ಸಂಸ್ಥೆ ಪ್ರಕಟಿಸಿದೆ. ಕರ್ನಾಟಕ ವಿಧಾನಸಭೆ ಕದನದಲ್ಲಿರುವ ಸುಮಾರು 2,560 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಈ ಮಾಹಿತಿಯನ್ನು ಎಡಿಆರ್ ಸಂಸ್ಥೆ ನೀಡಿದೆ.
ಇಷ್ಟೇ ಅಲ್ಲದೆ 883 ಕೋಟ್ಯಧಿಪತಿಗಳ ಜತೆಗೆ ಸುಮಾರು 17 ಮಂದಿ ಅಭ್ಯರ್ಥಿಗಳು ತಮ್ಮ ಬಳಿ ಯಾವುದೇ ಆಸ್ತಿ ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಕೆ.ಆರ್ ಕ್ಷೇತ್ರದ ಬಿಜೆಪಿಯ ರಾಮದಾಸ್ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ. ವಿ ಮಲ್ಲೇಶ್ ಅವರು ಅತ್ಯಂತ ಕಡಿಮೆ ಆಸ್ತಿ ಘೋಷಿಸಿರುವ ಅಭ್ಯರ್ಥಿಗಳ ಪೈಕಿ ಕಾಣಿಸಿಕೊಂಡರೆ, ಕಾಂಗ್ರೆಸ್ಸಿನ ಪ್ರಿಯಾಕೃಷ್ಣ ಹಾಗೂ ಎಂಟಿಬಿ ನಾಗರಾಜು ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಗಳಾಗಿದ್ದಾರೆ.
* 254 (10%) ಅಭ್ಯರ್ಥಿಗಳ ವಿರುದ್ಧ ಗುರುತರ ಕ್ರಿಮಿನಲ್ ಪ್ರಕರಣಗಳಿವೆ.
* 4 ಅಭ್ಯರ್ಥಿಗಳ ವಿರುದ್ಧ ಐಪಿಸಿ 302(ಕೊಲೆ) ಪ್ರಕರಣಗಳಿವೆ.
* 25 ಅಭ್ಯರ್ಥಿಗಳ ವಿರುದ್ಧ ಕೊಲೆ ಸಂಚು(ಐಪಿಸಿ ಸೆಕ್ಷನ್ 307) ಆರೋಪಗಳಿವೆ.
* 23 ಅಭ್ಯರ್ಥಿಗಳ ವಿರುದ್ಧ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಗಳಿವೆ. ಐಪಿಸಿ ಸೆಕ್ಷನ್ 354, 509, 493, 498ಎ ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾರೆ.

ಕ್ರಿಮಿನಲ್ ಕೇಸ್ ಎದುರಿಸುತ್ತಿರುವ ಅಭ್ಯರ್ಥಿಗಳು
ಪಕ್ಷಗಳ ಪೈಕಿ ಬಿಜೆಪಿಯ 224 ಅಭ್ಯರ್ಥಿಗಳ ಪೈಕಿ 83(37%) ಮಂದಿ, ಕಾಂಗ್ರೆಸ್ಸಿನ 220 ಅಭ್ಯರ್ಥಿಗಳ ಪೈಕಿ 59 (27%) ಹಾಗೂ ಜೆಡಿಎಸ್ ನ 199 ಅಭ್ಯರ್ಥಿಗಳ ಪೈಕಿ 41(21%), ಜೆಡಿಯುನ 25 ಅಭ್ಯರ್ಥಿಗಳ ಪೈಕಿ 5(20%), ಎಎಪಿಯ 27 ಅಭ್ಯರ್ಥಿಗಳ ಪೈಕಿ 5(19%), 1090 ಪಕ್ಷೇತರ ಅಭ್ಯರ್ಥಿಗಳ ಪೈಕಿ 108 (10%) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಕೇಸುಗಳಿವೆ ಎಂದು ಅಫಿಡವಿಟ್ ಸಲ್ಲಿಸಿದ್ದಾರೆ.
ಸ್ಥಿತಿವಂತ ಅಭ್ಯರ್ಥಿಗಳು
* 2560ಅಭ್ಯರ್ಥಿಗಳ ಪೈಕಿ 883 (35%) ಮಂದಿ ಕೋಟ್ಯಧಿಪತಿಗಳಾಗಿದ್ದಾರೆ.
* ಪಕ್ಷಗಳ ಪೈಕಿ ಬಿಜೆಪಿಯಲ್ಲಿ 208(93%), ಕಾಂಗ್ರೆಸ್ 207(94%), ಜೆಡಿಎಸ್ 154(17%), ಜೆಡಿಯು 13(52%), ಎಎಪಿ 9(33%), ಪಕ್ಷೇತರರು 199 (18%) ಮಂದಿ ಕನಿಷ್ಟ 1 ಕೋಟಿ ರುಗಳಿಗಿಂತ ಅಧಿಕ ಆಸ್ತಿ ಹೊಂದಿದ್ದಾರೆ. 2018ರ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಆಸ್ತಿ ಮೌಲ್ಯ ಸರಾಸರಿ 7.54 ಕೋಟಿ ರು ಆಗಲಿದೆ.
* ಪ್ರಿಯಾಕೃಷ್ಣ 1020 ಕೋಟಿ ರು, ಎನ್ ನಾಗರಾಜು 1015 ಕೋಟಿ ರು, ಡಿಕೆ ಶಿವಕುಮಾರ್ 840 ಕೋಟಿ ರು ಟಾಪ್ ಮೂರು ಕೋಟ್ಯಧಿಪತಿಗಳು
* 17 ಮಂದಿ ಶೂನ್ಯ ಆಸ್ತಿ ಎಂದು ಘೋಷಿಸಿಕೊಂಡಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications