ವಿಶ್ವಾಸಮತ ಗೆದ್ದ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಮೇ 25: ಇಂದು(ಮೇ 25) ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸ್ಪೀಕರ್ ಆಯ್ಕೆಯ ನಂತರ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ವಿಶ್ವಾಸ ಮತ ಯಾಚಿಸಲಿದ್ದಾರೆ.
ಮೇ 15 ರಂದು ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ 37 ಸ್ಥಾನ ಗೆದ್ದಿದ್ದ ಜೆಡಿಎಸ್ ಗೆ 78 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಸರ್ಕಾರ ರಚಿಸಲು ಬೆಂಬಲ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಸಾಕಷ್ಟು ರಾಜಕೀಯ ತಲ್ಲಣಗಳು ಉಂಟಾಗಿದ್ದವು.
ಸಮ್ಮಿಶ್ರ ಸರ್ಕಾರದ ವಿಶ್ವಾಸಮತ : ಶುಕ್ರವಾರ ಸದನದಲ್ಲಿ ನಡೆಯುವುದೇನು?
ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ(104) ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಆರಿಸಿ, ಅವರು ಪ್ರಮಾಣ ವಚನ ಸ್ವೀಕರಿಸಿಯೂ ಆಗಿತ್ತು. ಆದರೆ ಮೇ 19 ರಂದು ನಡೆಯಬೇಕಿದ್ದ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಬಹುಮತ ಬರುವ ವಿಶ್ವಾಸವಿಲ್ಲದ ಕಾರಣ ವಿಶ್ವಾಸಮತ ಯಾಚಿಸುವ ಮುನ್ನವೇ ಬಿ ಎಸ್ ವೈ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಅದರ ಮುಂದಿನ ಭಾಗವಾಗಿ ಮೇ 23 ರಂದು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಎಚ್ ಡಿ ಕುಮಾರಸ್ವಾಮಿ ಇಂದು ವಿಶ್ವಾಸಮತ ಸಾಬೀತುಪಡಿಸಲಿದ್ದು, ಅದರ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
BJP walked out of Karnataka assembly after BJP's BS Yeddyurappa said that we will hold a state-wide bandh on May 28, if CM HD Kumaraswamy doesn’t waive off farmer loans, pic.twitter.com/Wq4U1UegRr
— ANI (@ANI) May 25, 2018