ಅರಸೀಕೆರೆ: ಹೊಯ್ಸಳ ಕಾಲದ ವೈವಿಧ್ಯಮಯ ಕ್ಷೇತ್ರ
ಹೊಯ್ಸಳ ಕಾಲದಲ್ಲಿ ಎರೆಯಂಗನ ಪಟ್ಟದರಸಿ ಮಹಾದೇವಿ ಕೆರೆ ಕಟ್ಟಿಸಿದ ಊರು ಇದು. ಐತಿಹಾಸಿಕ, ಧಾರ್ಮಿಕ ಕ್ಷೇತ್ರ. ಇಲ್ಲಿನ ತೆಂಗಿನಕಾಯಿ ಬಹು ಜನಪ್ರಿಯ.
ಬೆಟ್ಟ ಗುಡ್ಡಗಳು, ಕುರುಚಲು ಕಾಡು ಹೊಂದಿರುವ ಅರಸೀಕೆರೆಯಲ್ಲಿ ರಾಗಿ, ಮೆಣಸಿನಕಾಯಿ, ಎಣ್ಣೆಕಾಳು, ಜೋಳ ಪ್ರಮುಖ ಬೆಳೆಗಳು. ವೇದಾವತಿ ನದಿ ಅಲ್ಲದೆ ಕ್ಷೇತ್ರದೆಲ್ಲೆಡೆ ದೊಡ್ಡ ಕೆರೆಗಳಿರುವುದರಿಂದ ನೀರಾವರಿ ಸಮಸ್ಯೆ ಇಲ್ಲ.
ಅಮೃತ್ ಮಹಲ್ ಕಾವಲ್ ಸೇರಿದಂತೆ ಉತ್ತಮ ತಳಿಯ ದನಕರುಗಳ ಸಾಕಣೆ, ಕುರಿ ಸಾಕಣೆ ಕೂಡಾ ಪ್ರಮುಖವಾಗಿವೆ. ಈ ಕ್ಷೇತ್ರದಲ್ಲಿ ಒಕ್ಕಲಿಗರು, ಲಿಂಗಾಯತರು ಹಾಗೂ ಲಿಂಗಾಯತ ಉಪಜಾತಿಯವರನ್ನು ಹೆಚ್ಚಾಗಿ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಕೂಡಾ ಪ್ರಮುಖ ಸ್ಪರ್ಧೆ ನೀಡಲು ಮುಂದಾಗಿದೆ.

ಬಾಣಾವರ, ಗರುಡನಗಿರಿ, ಹಾರನಹಳ್ಳಿ, ಹುಲ್ಲೆಕೆರೆ ಮತ್ತು ಜಾವಗಲ್ಲು ಸೇರಿದಂತೆ ಅರಸೀಕೆರೆಯ ತುಂಬಾ ಹೊಯ್ಸಳ ಶೈಲಿ ದೇಗುಲಗಳಿವೆ. ಮಾಲೆಕಲ್ಲು ತಿರುಪತಿ, ಜಾವಗಲ್ ನರಸಿಂಹ ದೇಗುಲ, ಲಕ್ಷ್ಮಿಪುರದ ಮಹಾಗಣಪತಿ, ಜೇನುಕಲು ಸಿದ್ದೇಶ್ವರ ಸ್ವಾಮಿ, ಬಾಣಾವರದ ತಿಮ್ಮಪ್ಪ ಸ್ವಾಮಿ ದೇಗುಲ ಹೀಗೆ ಅನೇಕ ಧಾರ್ಮಿಕ ಕೇಂದ್ರಗಳನ್ನು ಹೊಂದಿದೆ.
ಅರಸೀಕೆರೆ ತೆಂಗು ಬೆಳೆಯ ಪ್ರಮುಖ ವ್ಯಾಪಾರ ಕೇಂದ್ರವಾಗಿ ಗುರುತಿಸಿಕೊಂಡಿದೆ. ರಸ್ತೆ, ರೈಲು ಸಂಪರ್ಕ ಸಮರ್ಪಕವಾಗಿದ್ದರೂ ಹೆಚ್ಚಿನ ಆದ್ಯತೆ ಸಿಕ್ಕಿಲ್ಲ. ರಸ್ತೆ ರಿಪೇರಿ ಕಾರ್ಯ ನಡೆಯುತ್ತಲೇ ಇರುತ್ತದೆ. ಉತ್ತಮ ವೈದಕೀಯ ಸೌಲಭ್ಯಕ್ಕೆ ಅಕ್ಕ ಪಕ್ಕದ ಜಿಲ್ಲೆಯನ್ನು ಆಶ್ರಯಿಸಬೇಕಾಗಿದೆ. ಹೋಟೆಲ್, ವಸತಿ ವ್ಯವಸ್ಥೆ ಕೂಡಾ ಏಳಿಗೆ ಕಂಡಿಲ್ಲ.
ಅರಸೀಕೆರೆಯಲ್ಲಿ ಕಳೆದ ಬಾರಿ ಜೆಡಿಎಸ್ ನ ಕೆಎಂ ಶಿವಲೀಂಗೇಗೌಡ(76579) ಅವರು ಅವರು ಕಾಂಗ್ರೆಸ್ಸಿನ ಬಿ ಶಿವರಾಂ(46948) ವಿರುದ್ಧ ಉತ್ತಮ ಅಂತರದಲ್ಲಿ ಜಯ ದಾಖಲಿಸಿದ್ದರು.
ಈ ಕ್ಷೇತ್ರದಲ್ಲಿ ಒಕ್ಕಲಿಗರು, ಲಿಂಗಾಯತರು ಹಾಗೂ ಲಿಂಗಾಯತ ಉಪಜಾತಿಯವರನ್ನು ಹೆಚ್ಚಾಗಿ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಕೂಡಾ ಪ್ರಮುಖ ಸ್ಪರ್ಧೆ ನೀಡಲು ಮುಂದಾಗಿದ್ದು, ಯಡಿಯೂರಪ್ಪ ಅವರ ಆಪ್ತರೊಬ್ಬರು ಈ ಬಾರಿ ಕಣಕ್ಕಿಳಿದರೂ ಅಚ್ಚರಿಯೇನಿಲ್ಲ. ಹೀಗಾಗಿ, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications