ಅರಸೀಕೆರೆ: ಹೊಯ್ಸಳ ಕಾಲದ ವೈವಿಧ್ಯಮಯ ಕ್ಷೇತ್ರ
ಹೊಯ್ಸಳ ಕಾಲದಲ್ಲಿ ಎರೆಯಂಗನ ಪಟ್ಟದರಸಿ ಮಹಾದೇವಿ ಕೆರೆ ಕಟ್ಟಿಸಿದ ಊರು ಇದು. ಐತಿಹಾಸಿಕ, ಧಾರ್ಮಿಕ ಕ್ಷೇತ್ರ. ಇಲ್ಲಿನ ತೆಂಗಿನಕಾಯಿ ಬಹು ಜನಪ್ರಿಯ.
ಬೆಟ್ಟ ಗುಡ್ಡಗಳು, ಕುರುಚಲು ಕಾಡು ಹೊಂದಿರುವ ಅರಸೀಕೆರೆಯಲ್ಲಿ ರಾಗಿ, ಮೆಣಸಿನಕಾಯಿ, ಎಣ್ಣೆಕಾಳು, ಜೋಳ ಪ್ರಮುಖ ಬೆಳೆಗಳು. ವೇದಾವತಿ ನದಿ ಅಲ್ಲದೆ ಕ್ಷೇತ್ರದೆಲ್ಲೆಡೆ ದೊಡ್ಡ ಕೆರೆಗಳಿರುವುದರಿಂದ ನೀರಾವರಿ ಸಮಸ್ಯೆ ಇಲ್ಲ.
ಅಮೃತ್ ಮಹಲ್ ಕಾವಲ್ ಸೇರಿದಂತೆ ಉತ್ತಮ ತಳಿಯ ದನಕರುಗಳ ಸಾಕಣೆ, ಕುರಿ ಸಾಕಣೆ ಕೂಡಾ ಪ್ರಮುಖವಾಗಿವೆ. ಈ ಕ್ಷೇತ್ರದಲ್ಲಿ ಒಕ್ಕಲಿಗರು, ಲಿಂಗಾಯತರು ಹಾಗೂ ಲಿಂಗಾಯತ ಉಪಜಾತಿಯವರನ್ನು ಹೆಚ್ಚಾಗಿ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಕೂಡಾ ಪ್ರಮುಖ ಸ್ಪರ್ಧೆ ನೀಡಲು ಮುಂದಾಗಿದೆ.

ಬಾಣಾವರ, ಗರುಡನಗಿರಿ, ಹಾರನಹಳ್ಳಿ, ಹುಲ್ಲೆಕೆರೆ ಮತ್ತು ಜಾವಗಲ್ಲು ಸೇರಿದಂತೆ ಅರಸೀಕೆರೆಯ ತುಂಬಾ ಹೊಯ್ಸಳ ಶೈಲಿ ದೇಗುಲಗಳಿವೆ. ಮಾಲೆಕಲ್ಲು ತಿರುಪತಿ, ಜಾವಗಲ್ ನರಸಿಂಹ ದೇಗುಲ, ಲಕ್ಷ್ಮಿಪುರದ ಮಹಾಗಣಪತಿ, ಜೇನುಕಲು ಸಿದ್ದೇಶ್ವರ ಸ್ವಾಮಿ, ಬಾಣಾವರದ ತಿಮ್ಮಪ್ಪ ಸ್ವಾಮಿ ದೇಗುಲ ಹೀಗೆ ಅನೇಕ ಧಾರ್ಮಿಕ ಕೇಂದ್ರಗಳನ್ನು ಹೊಂದಿದೆ.
ಅರಸೀಕೆರೆ ತೆಂಗು ಬೆಳೆಯ ಪ್ರಮುಖ ವ್ಯಾಪಾರ ಕೇಂದ್ರವಾಗಿ ಗುರುತಿಸಿಕೊಂಡಿದೆ. ರಸ್ತೆ, ರೈಲು ಸಂಪರ್ಕ ಸಮರ್ಪಕವಾಗಿದ್ದರೂ ಹೆಚ್ಚಿನ ಆದ್ಯತೆ ಸಿಕ್ಕಿಲ್ಲ. ರಸ್ತೆ ರಿಪೇರಿ ಕಾರ್ಯ ನಡೆಯುತ್ತಲೇ ಇರುತ್ತದೆ. ಉತ್ತಮ ವೈದಕೀಯ ಸೌಲಭ್ಯಕ್ಕೆ ಅಕ್ಕ ಪಕ್ಕದ ಜಿಲ್ಲೆಯನ್ನು ಆಶ್ರಯಿಸಬೇಕಾಗಿದೆ. ಹೋಟೆಲ್, ವಸತಿ ವ್ಯವಸ್ಥೆ ಕೂಡಾ ಏಳಿಗೆ ಕಂಡಿಲ್ಲ.
ಅರಸೀಕೆರೆಯಲ್ಲಿ ಕಳೆದ ಬಾರಿ ಜೆಡಿಎಸ್ ನ ಕೆಎಂ ಶಿವಲೀಂಗೇಗೌಡ(76579) ಅವರು ಅವರು ಕಾಂಗ್ರೆಸ್ಸಿನ ಬಿ ಶಿವರಾಂ(46948) ವಿರುದ್ಧ ಉತ್ತಮ ಅಂತರದಲ್ಲಿ ಜಯ ದಾಖಲಿಸಿದ್ದರು.
ಈ ಕ್ಷೇತ್ರದಲ್ಲಿ ಒಕ್ಕಲಿಗರು, ಲಿಂಗಾಯತರು ಹಾಗೂ ಲಿಂಗಾಯತ ಉಪಜಾತಿಯವರನ್ನು ಹೆಚ್ಚಾಗಿ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಕೂಡಾ ಪ್ರಮುಖ ಸ್ಪರ್ಧೆ ನೀಡಲು ಮುಂದಾಗಿದ್ದು, ಯಡಿಯೂರಪ್ಪ ಅವರ ಆಪ್ತರೊಬ್ಬರು ಈ ಬಾರಿ ಕಣಕ್ಕಿಳಿದರೂ ಅಚ್ಚರಿಯೇನಿಲ್ಲ. ಹೀಗಾಗಿ, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications